‘ರಕ್ತಚಂದನ ಮತ್ತು ಶ್ರೀಗಂಧ ಮರಗಳು ನೈಸರ್ಗಿಕವಾಗಿ ಬೆಳೆಯುವ ಪ್ರದೇಶದ ರಕ್ಷಣೆಗೆ ವಿಶೇಷ ಯೋಜನೆಯಡಿ ಅಭಿಯಾನ ನಡೆಸಲಾಗುವುದು. ಜೌಗು ಪ್ರದೇಶಗಳನ್ನು ರಕ್ಷಿಸಿ ಅಭಿವೃದ್ಧಿಪಡಿಸಬೇಕು. ಪಂಚಾಯತ್ರಾಜ್, ನಗರಸಭೆ, ಅರಣ್ಯ ಇಲಾಖೆ ಒಟ್ಟಾಗಿ ಕೆರೆಗಳನ್ನು ಅಭಿವೃದ್ಧಿಪಡಿಸಬೇಕು. ಜಿಲ್ಲೆಯನ್ನು ಜೀವ ವೈವಿಧ್ಯತೆಯ ತಾಣವಾಗಿಸಬೇಕು’ ಎಂದು ಸಲಹೆ ನೀಡಿದರು.