<p><strong>ಕೋಲಾರ: </strong>‘ಕೆರೆಗಳಲ್ಲಿರುವ ಜಲಚರ ಪ್ರಾಣಿಗಳು ಹಾಗೂ ದಂಡೆಯಲ್ಲಿನ ಜಲಚರ ಸಸ್ಯಗಳನ್ನು ಸಂರಕ್ಷಿಸಿ ಕೆರೆಗಳ ಮೂಲ ಸ್ವರೂಪ ಕಾಪಾಡಿಕೊಂಡು ಅರಣ್ಯ ರಕ್ಷಣೆ ಮಾಡಬೇಕು’ ಎಂದು ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ತಿಳಿಸಿದರು.</p>.<p>ಅರಣ್ಯ ಜೀವ ವೈವಿಧ್ಯ ಪರಿಸರ, ಕೆರೆ ಸಂರಕ್ಷಣೆ ಸಂಬಂಧ ಇಲ್ಲಿ ಶನಿವಾರ ನಡೆದ ಸಮಾಲೋಚನೆ ಸಭೆಯಲ್ಲಿ ಮಾತನಾಡಿ, ‘ಕೆರೆಗಳ ಸುಂದರೀಕರಣ ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲಾ ಕೆರೆಗಳನ್ನು ಅಭಿವೃದ್ಧಿಪಡಿಸಲಾಗುವುದು’ ಎಂದು ಹೇಳಿದರು.</p>.<p>‘ರಕ್ತಚಂದನ ಮತ್ತು ಶ್ರೀಗಂಧ ಮರಗಳು ನೈಸರ್ಗಿಕವಾಗಿ ಬೆಳೆಯುವ ಪ್ರದೇಶದ ರಕ್ಷಣೆಗೆ ವಿಶೇಷ ಯೋಜನೆಯಡಿ ಅಭಿಯಾನ ನಡೆಸಲಾಗುವುದು. ಜೌಗು ಪ್ರದೇಶಗಳನ್ನು ರಕ್ಷಿಸಿ ಅಭಿವೃದ್ಧಿಪಡಿಸಬೇಕು. ಪಂಚಾಯತ್ರಾಜ್, ನಗರಸಭೆ, ಅರಣ್ಯ ಇಲಾಖೆ ಒಟ್ಟಾಗಿ ಕೆರೆಗಳನ್ನು ಅಭಿವೃದ್ಧಿಪಡಿಸಬೇಕು. ಜಿಲ್ಲೆಯನ್ನು ಜೀವ ವೈವಿಧ್ಯತೆಯ ತಾಣವಾಗಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಕೋಲಾರ ಹೊರ ವಲಯದ ಅಂತರಗಂಗೆ ಬೆಟ್ಟ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡು ಬಳಿಯ ಬೆಟ್ಟ, ಗುಡ್ಡಗಾಡು ಪ್ರದೇಶದಲ್ಲಿರುವ ಜನರಿಗೆ ಹೆಚ್ಚಿನ ಆದ್ಯತೆ ಕೊಟ್ಟು ಸರ್ಕಾರದ ಸೌಲಭ್ಯಗಳನ್ನು ತಲುಪಿಸಬೇಕು. ಆ ಜನರಿಗೆ ಸರ್ಕಾರದ ಯೋಜನೆಗಳು ಸದುಪಯೋಗ ಆಗುವಂತೆ ಮಾಡಬೇಕು’ ಎಂದು ಸೂಚಿಸಿದರು.</p>.<p>ಅಪೌಷ್ಟಿಕತೆ ಸಮಸ್ಯೆ: ‘ನಿರ್ಬಂಧಿತ ಪ್ಲಾಸ್ಟಿಕ್ ಬಳಕೆ ಮಾಡದಂತೆ ಜನರಿಗೆ ತಿಳಿವಳಿಕೆ ನೀಡಬೇಕು. ಪ್ಲಾಸ್ಟಿಕ್ ತ್ಯಾಜ್ಯದಿಂದ ಕೆರೆಗಳು ಕಲುಷಿತವಾಗುತ್ತಿವೆ. ಆ ಕೆರೆಗಳ ನೀರನ್ನು ಕೃಷಿ ಚಟುವಟಿಕೆಗಳಿಗೆ ಬಳಸಲಾಗುತ್ತಿದೆ. ಕಲುಷಿತ ನೀರಿನಿಂದ ಬೆಳೆದ ತರಕಾರಿ, ಸೊಪ್ಪು ಬಳಕೆಯಿಂದ ಜನರಲ್ಲಿ ಅಪೌಷ್ಟಿಕತೆ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಪ್ಲಾಸ್ಟಿಕ್ ತ್ಯಾಜ್ಯವನ್ನು ಕೆರೆಗೆ ಸುರಿಯದಂತೆ ಜನರಿಗೆ ಅರಿವು ಮೂಡಿಸಬೇಕು’ ಎಂದರು.</p>.<p>‘ಪರಿಸರ ಮಾಲಿನ್ಯವು ದೊಡ್ಡ ಸಮಸ್ಯೆಯಾಗಿದ್ದು, ಮುಂದಿನ 10 ವರ್ಷದಲ್ಲಿ ಈ ಸಮಸ್ಯೆ ಮತ್ತಷ್ಟು ಗಂಭೀರವಾಗುತ್ತದೆ. ಕೋಲಾರವು ಕೈಗಾರಿಕಾ ಆಧಾರಿತ ಜಿಲ್ಲೆ ಆಗಿರುವುದರಿಂದ ಮಾಲಿನ್ಯ ಹೆಚ್ಚಿದೆ. ಕೈಗಾರಿಕಾ ತ್ಯಾಜ್ಯವನ್ನು ಕೆರೆಗೆ ಹರಿಸುವುದನ್ನು ತಡೆಯಬೇಕು’ ಎಂದು ತಿಳಿಸಿದರು.</p>.<p>‘ಜೇನು ಸಾಕಾಣಿಕೆಗೆ ಹೆಚ್ಚು ಉತ್ತೇಜನ ಕೊಡಬೇಕು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜೀವ ವೈವಿಧ್ಯ ಕಾರ್ಯಕ್ರಮಗಳು ನಡೆಯುತ್ತಿವೆ. ಇನ್ನು ಹೆಚ್ಚು ಕ್ರಿಯಾಶೀಲವಾಗಿ ಅಭಿಯಾನ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಬೇಕು. ವಿಶೇಷ ಗಿಡ -ಮರಗಳನ್ನು ಬೆಳೆಸಬೇಕು’ ಎಂದು ಹೇಳಿದರು.</p>.<p>ಜಿಲ್ಲಾಧಿಕಾರಿ ಆರ್.ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಣಾಧಿಕಾರಿ ಎನ್.ಎಂ.ನಾಗರಾಜ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್ ಹಾಗೂ ವಿವಿಧ ಇಲಾಖೆಗಳು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>‘ಕೆರೆಗಳಲ್ಲಿರುವ ಜಲಚರ ಪ್ರಾಣಿಗಳು ಹಾಗೂ ದಂಡೆಯಲ್ಲಿನ ಜಲಚರ ಸಸ್ಯಗಳನ್ನು ಸಂರಕ್ಷಿಸಿ ಕೆರೆಗಳ ಮೂಲ ಸ್ವರೂಪ ಕಾಪಾಡಿಕೊಂಡು ಅರಣ್ಯ ರಕ್ಷಣೆ ಮಾಡಬೇಕು’ ಎಂದು ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ತಿಳಿಸಿದರು.</p>.<p>ಅರಣ್ಯ ಜೀವ ವೈವಿಧ್ಯ ಪರಿಸರ, ಕೆರೆ ಸಂರಕ್ಷಣೆ ಸಂಬಂಧ ಇಲ್ಲಿ ಶನಿವಾರ ನಡೆದ ಸಮಾಲೋಚನೆ ಸಭೆಯಲ್ಲಿ ಮಾತನಾಡಿ, ‘ಕೆರೆಗಳ ಸುಂದರೀಕರಣ ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲಾ ಕೆರೆಗಳನ್ನು ಅಭಿವೃದ್ಧಿಪಡಿಸಲಾಗುವುದು’ ಎಂದು ಹೇಳಿದರು.</p>.<p>‘ರಕ್ತಚಂದನ ಮತ್ತು ಶ್ರೀಗಂಧ ಮರಗಳು ನೈಸರ್ಗಿಕವಾಗಿ ಬೆಳೆಯುವ ಪ್ರದೇಶದ ರಕ್ಷಣೆಗೆ ವಿಶೇಷ ಯೋಜನೆಯಡಿ ಅಭಿಯಾನ ನಡೆಸಲಾಗುವುದು. ಜೌಗು ಪ್ರದೇಶಗಳನ್ನು ರಕ್ಷಿಸಿ ಅಭಿವೃದ್ಧಿಪಡಿಸಬೇಕು. ಪಂಚಾಯತ್ರಾಜ್, ನಗರಸಭೆ, ಅರಣ್ಯ ಇಲಾಖೆ ಒಟ್ಟಾಗಿ ಕೆರೆಗಳನ್ನು ಅಭಿವೃದ್ಧಿಪಡಿಸಬೇಕು. ಜಿಲ್ಲೆಯನ್ನು ಜೀವ ವೈವಿಧ್ಯತೆಯ ತಾಣವಾಗಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಕೋಲಾರ ಹೊರ ವಲಯದ ಅಂತರಗಂಗೆ ಬೆಟ್ಟ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡು ಬಳಿಯ ಬೆಟ್ಟ, ಗುಡ್ಡಗಾಡು ಪ್ರದೇಶದಲ್ಲಿರುವ ಜನರಿಗೆ ಹೆಚ್ಚಿನ ಆದ್ಯತೆ ಕೊಟ್ಟು ಸರ್ಕಾರದ ಸೌಲಭ್ಯಗಳನ್ನು ತಲುಪಿಸಬೇಕು. ಆ ಜನರಿಗೆ ಸರ್ಕಾರದ ಯೋಜನೆಗಳು ಸದುಪಯೋಗ ಆಗುವಂತೆ ಮಾಡಬೇಕು’ ಎಂದು ಸೂಚಿಸಿದರು.</p>.<p>ಅಪೌಷ್ಟಿಕತೆ ಸಮಸ್ಯೆ: ‘ನಿರ್ಬಂಧಿತ ಪ್ಲಾಸ್ಟಿಕ್ ಬಳಕೆ ಮಾಡದಂತೆ ಜನರಿಗೆ ತಿಳಿವಳಿಕೆ ನೀಡಬೇಕು. ಪ್ಲಾಸ್ಟಿಕ್ ತ್ಯಾಜ್ಯದಿಂದ ಕೆರೆಗಳು ಕಲುಷಿತವಾಗುತ್ತಿವೆ. ಆ ಕೆರೆಗಳ ನೀರನ್ನು ಕೃಷಿ ಚಟುವಟಿಕೆಗಳಿಗೆ ಬಳಸಲಾಗುತ್ತಿದೆ. ಕಲುಷಿತ ನೀರಿನಿಂದ ಬೆಳೆದ ತರಕಾರಿ, ಸೊಪ್ಪು ಬಳಕೆಯಿಂದ ಜನರಲ್ಲಿ ಅಪೌಷ್ಟಿಕತೆ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಪ್ಲಾಸ್ಟಿಕ್ ತ್ಯಾಜ್ಯವನ್ನು ಕೆರೆಗೆ ಸುರಿಯದಂತೆ ಜನರಿಗೆ ಅರಿವು ಮೂಡಿಸಬೇಕು’ ಎಂದರು.</p>.<p>‘ಪರಿಸರ ಮಾಲಿನ್ಯವು ದೊಡ್ಡ ಸಮಸ್ಯೆಯಾಗಿದ್ದು, ಮುಂದಿನ 10 ವರ್ಷದಲ್ಲಿ ಈ ಸಮಸ್ಯೆ ಮತ್ತಷ್ಟು ಗಂಭೀರವಾಗುತ್ತದೆ. ಕೋಲಾರವು ಕೈಗಾರಿಕಾ ಆಧಾರಿತ ಜಿಲ್ಲೆ ಆಗಿರುವುದರಿಂದ ಮಾಲಿನ್ಯ ಹೆಚ್ಚಿದೆ. ಕೈಗಾರಿಕಾ ತ್ಯಾಜ್ಯವನ್ನು ಕೆರೆಗೆ ಹರಿಸುವುದನ್ನು ತಡೆಯಬೇಕು’ ಎಂದು ತಿಳಿಸಿದರು.</p>.<p>‘ಜೇನು ಸಾಕಾಣಿಕೆಗೆ ಹೆಚ್ಚು ಉತ್ತೇಜನ ಕೊಡಬೇಕು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜೀವ ವೈವಿಧ್ಯ ಕಾರ್ಯಕ್ರಮಗಳು ನಡೆಯುತ್ತಿವೆ. ಇನ್ನು ಹೆಚ್ಚು ಕ್ರಿಯಾಶೀಲವಾಗಿ ಅಭಿಯಾನ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಬೇಕು. ವಿಶೇಷ ಗಿಡ -ಮರಗಳನ್ನು ಬೆಳೆಸಬೇಕು’ ಎಂದು ಹೇಳಿದರು.</p>.<p>ಜಿಲ್ಲಾಧಿಕಾರಿ ಆರ್.ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಣಾಧಿಕಾರಿ ಎನ್.ಎಂ.ನಾಗರಾಜ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್ ಹಾಗೂ ವಿವಿಧ ಇಲಾಖೆಗಳು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>