<p>ನಂದಗುಡಿ(ಹೊಸಕೋಟೆ): ಹೋಬಳಿಯ ಮಾಕನಹಳ್ಳಿಯ ಮುತ್ಯಾಲಮ್ಮ ದೇವಿ ಧರ್ಮರಾಯಸ್ವಾಮಿ ಹಾಗೂ ದ್ರೌಪತಾಂಭ ದೇವಿಯ 44ನೇ ವರ್ಷದ ಹೂವಿನ ಕರಗ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.</p>.<p>ಕಳೆದ ಆರು ದಿನಗಳ ಕಾಲ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು. ಎರಡನೇ ಬಾರಿ ಕರಗ ಹೊತ್ತ ಕರಗದ ಪೂಜಾರಿ ಮಂಜುನಾಥ್ ಮಹೋತ್ಸವವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಶನಿವಾರ ಹೂವಿನ ಕರಗವನ್ನು ಇಳಿಸಿ ಪೋತಲರಾಜನ ಗಾವಿನೊಂದಿಗೆ ಕರಗ ಮಹೋತ್ಸವಕ್ಕೆ ತೆರೆ ಎಳೆಯಲಾಯಿತು.</p>.<p>ಕರಗದ ಪ್ರಯುಕ್ತ ಗ್ರಾಮದಲ್ಲಿ 25ಕ್ಕೂ ಹೆಚ್ಚು ಪಲ್ಲಕ್ಕಿಗಳಲ್ಲಿ ಉತ್ಸವ ಮೂರ್ತಿ ಮೆರವಣಿಗೆ ನಡೆಯಿತು. ಗ್ರಾಮದ ಪ್ರಮುಖ ದೇವಾಲಯಗಳಿಗೆ ವಿಶೇಷ ಹೂವಿನ ಅಲಂಕಾರ ಹಾಗೂ ದೀಪಾಲಂಕಾರದೊಂದಿಗೆ ಸಿಂಗರಿಸಿ ಹಬ್ಬದ ಎಲ್ಲೆಡೆ ವಾತಾವರಣ ಕಾಣುವಂತೆ ಮಾಡಲಾಗಿತ್ತು.</p>.<p>ಶಾಸಕರಾದ ಶರತ್ ಬಚ್ಚೇಗೌಡ, ಪ್ರಣವಾನಂದ ಪುರಿ ಸ್ವಾಮೀಜಿ, ಹಳೆ ಕರಗದ ಪೂಜಾರಿ ಕೆ ಮುನಿರಾಜು, ವಹ್ನಿಕುಲ ಕ್ಷತ್ರಿಯ ಸಮಾಜದ ಗೌಡರು ಹಾಗೂ ಯಜಮಾನರು ಕುಲಸ್ಥರು ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಸಾವಿರಾರು ಸಂಖ್ಯೆಯಲ್ಲಿ ಕರಗ ಮಹೋತ್ಸವದಲ್ಲಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-15-613781130</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಂದಗುಡಿ(ಹೊಸಕೋಟೆ): ಹೋಬಳಿಯ ಮಾಕನಹಳ್ಳಿಯ ಮುತ್ಯಾಲಮ್ಮ ದೇವಿ ಧರ್ಮರಾಯಸ್ವಾಮಿ ಹಾಗೂ ದ್ರೌಪತಾಂಭ ದೇವಿಯ 44ನೇ ವರ್ಷದ ಹೂವಿನ ಕರಗ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.</p>.<p>ಕಳೆದ ಆರು ದಿನಗಳ ಕಾಲ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು. ಎರಡನೇ ಬಾರಿ ಕರಗ ಹೊತ್ತ ಕರಗದ ಪೂಜಾರಿ ಮಂಜುನಾಥ್ ಮಹೋತ್ಸವವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಶನಿವಾರ ಹೂವಿನ ಕರಗವನ್ನು ಇಳಿಸಿ ಪೋತಲರಾಜನ ಗಾವಿನೊಂದಿಗೆ ಕರಗ ಮಹೋತ್ಸವಕ್ಕೆ ತೆರೆ ಎಳೆಯಲಾಯಿತು.</p>.<p>ಕರಗದ ಪ್ರಯುಕ್ತ ಗ್ರಾಮದಲ್ಲಿ 25ಕ್ಕೂ ಹೆಚ್ಚು ಪಲ್ಲಕ್ಕಿಗಳಲ್ಲಿ ಉತ್ಸವ ಮೂರ್ತಿ ಮೆರವಣಿಗೆ ನಡೆಯಿತು. ಗ್ರಾಮದ ಪ್ರಮುಖ ದೇವಾಲಯಗಳಿಗೆ ವಿಶೇಷ ಹೂವಿನ ಅಲಂಕಾರ ಹಾಗೂ ದೀಪಾಲಂಕಾರದೊಂದಿಗೆ ಸಿಂಗರಿಸಿ ಹಬ್ಬದ ಎಲ್ಲೆಡೆ ವಾತಾವರಣ ಕಾಣುವಂತೆ ಮಾಡಲಾಗಿತ್ತು.</p>.<p>ಶಾಸಕರಾದ ಶರತ್ ಬಚ್ಚೇಗೌಡ, ಪ್ರಣವಾನಂದ ಪುರಿ ಸ್ವಾಮೀಜಿ, ಹಳೆ ಕರಗದ ಪೂಜಾರಿ ಕೆ ಮುನಿರಾಜು, ವಹ್ನಿಕುಲ ಕ್ಷತ್ರಿಯ ಸಮಾಜದ ಗೌಡರು ಹಾಗೂ ಯಜಮಾನರು ಕುಲಸ್ಥರು ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಸಾವಿರಾರು ಸಂಖ್ಯೆಯಲ್ಲಿ ಕರಗ ಮಹೋತ್ಸವದಲ್ಲಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-15-613781130</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>