<p><strong>ಮಾಲೂರು:</strong> ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ದೊಡ್ಡ ರಾದ್ಧಾಂತರವೇ ನಡೆದು ಹೋಗಿದ್ದರೆ, ಇತ್ತ ಮಾಜಿ ಶಾಸಕ, ಬಿಜೆಪಿ ಮುಖಂಡ ಕೆ.ಎಸ್.ಮಂಜುನಾಥಗೌಡ ಜನ್ಮದಿನದ ಸಂಬಂಧ ಮಾಲೂರಿನಲ್ಲಿ ಅಳವಡಿಸಿದ್ದ ಬ್ಯಾನರ್ ವಿಚಾರದಲ್ಲಿ ಕಿರಿಕ್ ಆಗಿದೆ.</p><p>ಬ್ಯಾನರ್ಗೆ ಪೇಪರ್ ಅಂಟಿಸಿದ ವಿಚಾರವಾಗಿ ಬಿಜೆಪಿ ಮುಖಂಡರು ನಗರಸಭೆ ಅಧಿಕಾರಿಗಳ ಮೇಲೆ ಮುಗಿಬಿದ್ದ ಘಟನೆ ನಡೆದಿದೆ.</p><p>ತಾಲ್ಲೂಕು ಬಿಜೆಪಿ ಘಟಕದಿಂದ ಮಾಜಿ ಶಾಸಕ ಮಂಜುನಾಥಗೌಡ ಅವರ ಫೋಟೊ ಹಾಕಿ ಬ್ಯಾನರ್ನಲ್ಲಿ ‘ನಮ್ಮ ಶಾಸಕ’ ಎಂಬ ಪದ ನಮೂದಿಸಲಾಗಿತ್ತು.</p><p>ಇದು ಹಾಲಿ ಶಾಸಕ ಕಾಂಗ್ರೆಸ್ನ ಕೆ.ವೈ.ನಂಜೇಗೌಡರ ಬೆಂಬಲಿಗರನ್ನು ಕೆರಳಿಸಿದೆ. ಈ ವಿಚಾರವನ್ನು ಕೆಲವರ ಗಮನಕ್ಕೆ ತಂದಿದ್ದಾರೆ. ಎಚ್ಚೆತ್ತ ನಗರಸಭೆ ಅಧಿಕಾರಿಗಳು ಬ್ಯಾನರ್ ಮೇಲೆ ಹಾಕಿದ್ದ ‘ನಮ್ಮ ಶಾಸಕ’ ಪದದ ಮೇಲೆ ಪೇಪರ್ ಅಂಟಿಸಿದ್ದಾರೆ. ತಹಶೀಲ್ದಾರ್ ಮತ್ತು ಸರ್ಕಲ್ ಇನ್ಸ್ಪೆಕ್ಟರ್ ಕೂಡ ಸೂಚನೆ ನೀಡಿದ್ದರು ಎನ್ನಲಾಗಿದೆ.</p><p>ಈ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ತಾಲ್ಲೂಕು ಬಿಜೆಪಿ ಅಧ್ಯಕ್ಷ ಟಿ.ಬಿ.ಕೃಷ್ಣಪ್ಪ ನೇತೃತ್ವದಲ್ಲಿ ಮುಖಂಡರು ನಗರಸಭೆ ಕಚೇರಿಗೆ ತೆರಳಿ ಆಯುಕ್ತ ಪ್ರದೀಪ್ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.</p><p>‘ನೀವು ಒಂದು ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದೀರಿ. ಬ್ಯಾನರ್ನಲ್ಲಿ ಮುಂದಿನ ನಮ್ಮ ಶಾಸಕರು ಎಂದು ಹಾಕಿರುವುದು ತಪ್ಪೇ’ ಎಂದು ಪ್ರಶ್ನಿಸಿದ್ದಾರೆ.</p><p>ಒಂದು ಕಡೆ ಬ್ಯಾನರ್ ಮೇಲೆ ಪೇಪರ್ ಅಂಟಿಸಿದ್ದೀರಿ. ಇನ್ನೊಂದು ಕಡೆ ಬ್ಯಾನರ್ ತೆಗೆದು ಹಾಕಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಮಾಲೂರು ನಗರದಲ್ಲಿ ಸರಿಯಾಗಿ ಸ್ವಚ್ಛತೆ ಕಾಪಾಡುತ್ತಿಲ್ಲ, ಕುಡಿಯುವ ನೀರು ಪೂರೈಸುತ್ತಿಲ್ಲ. ಆದರೆ, ಸ್ಥಳೀಯ ಶಾಸಕರ ಪರವಾಗಿ ಕೆಲಸ ಮಾಡುತ್ತಿದ್ದೀರಿ ಎಂದು ಹರಿಹಾಯ್ದಿದ್ದಾರೆ.</p><p>ಆಯುಕ್ತ ಪ್ರದೀಪ್ ಕುಮಾರ್, ‘ತಹಶೀಲ್ದಾರ್ ಮತ್ತು ಸರ್ಕಲ್ ಇನ್ಸ್ಪೆಕ್ಟರ್ ಸೂಚನೆ ಮೇರೆಗೆ ಬ್ಯಾನರ್ ಮೇಲೆ ಪೇಪರ್ ಅಂಟಿಸಲಾಗಿದೆ. ಇದರಲ್ಲಿ ನನ್ನ ಕೈವಾಡ ಏನು ಇಲ್ಲ’ ಎಂದು ಮನವರಿಕೆ ಮಾಡಲು ಪ್ರಯತ್ನಿಸಿದ್ದಾರೆ.</p><p>ತಾಲ್ಲೂಕು ಯುವ ಮೋರ್ಚಾ ಅಧ್ಯಕ್ಷ ಕಿರಣ್ ರಾವು, ಜಿ.ಪಂ ಮಾಜಿ ಸದಸ್ಯ ಚಿನ್ನಸ್ವಾಮಿಗೌಡ ಸೇರಿದಂತೆ ಹಲವು ಈ ಸಂದರ್ಭದಲ್ಲಿ ಇದ್ದರು ಎಂಬುದು ಗೊತ್ತಾಗಿದೆ.</p><p>ಅಲ್ಲದೇ, ಈ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು, ಮಾಜಿ ಹಾಗೂ ಹಾಲಿ ಶಾಸಕರ ಬೆಂಬಲಿಗರ ಮಧ್ಯೆ ತಿಕ್ಕಾಟ ನಡೆಯುತ್ತಿದೆ. ಮಾಲೂರು ಶಾಸಕ ಯಾರು ಎಂದು ಕೆಲವರು ಫೇಸ್ಬುಕ್ನಲ್ಲಿ ಪ್ರಶ್ನೆ ಮಾಡಿದ್ದಾರೆ.</p><p>ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಹಾಗೂ ಮಾಜಿ ಶಾಸಕ ಬಿಜೆಪಿಯ ಮಂಜುನಾಥಗೌಡ ಬೆಂಬಲಿಗರ ಮಧ್ಯೆ ಉಂಟಾಬಹುದಾದ ಗಲಾಟೆ ತಡೆಗಟ್ಟುವ ನಿಟ್ಟಿನಲ್ಲಿ ಬ್ಯಾನರ್ ತೆರವು ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು:</strong> ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ದೊಡ್ಡ ರಾದ್ಧಾಂತರವೇ ನಡೆದು ಹೋಗಿದ್ದರೆ, ಇತ್ತ ಮಾಜಿ ಶಾಸಕ, ಬಿಜೆಪಿ ಮುಖಂಡ ಕೆ.ಎಸ್.ಮಂಜುನಾಥಗೌಡ ಜನ್ಮದಿನದ ಸಂಬಂಧ ಮಾಲೂರಿನಲ್ಲಿ ಅಳವಡಿಸಿದ್ದ ಬ್ಯಾನರ್ ವಿಚಾರದಲ್ಲಿ ಕಿರಿಕ್ ಆಗಿದೆ.</p><p>ಬ್ಯಾನರ್ಗೆ ಪೇಪರ್ ಅಂಟಿಸಿದ ವಿಚಾರವಾಗಿ ಬಿಜೆಪಿ ಮುಖಂಡರು ನಗರಸಭೆ ಅಧಿಕಾರಿಗಳ ಮೇಲೆ ಮುಗಿಬಿದ್ದ ಘಟನೆ ನಡೆದಿದೆ.</p><p>ತಾಲ್ಲೂಕು ಬಿಜೆಪಿ ಘಟಕದಿಂದ ಮಾಜಿ ಶಾಸಕ ಮಂಜುನಾಥಗೌಡ ಅವರ ಫೋಟೊ ಹಾಕಿ ಬ್ಯಾನರ್ನಲ್ಲಿ ‘ನಮ್ಮ ಶಾಸಕ’ ಎಂಬ ಪದ ನಮೂದಿಸಲಾಗಿತ್ತು.</p><p>ಇದು ಹಾಲಿ ಶಾಸಕ ಕಾಂಗ್ರೆಸ್ನ ಕೆ.ವೈ.ನಂಜೇಗೌಡರ ಬೆಂಬಲಿಗರನ್ನು ಕೆರಳಿಸಿದೆ. ಈ ವಿಚಾರವನ್ನು ಕೆಲವರ ಗಮನಕ್ಕೆ ತಂದಿದ್ದಾರೆ. ಎಚ್ಚೆತ್ತ ನಗರಸಭೆ ಅಧಿಕಾರಿಗಳು ಬ್ಯಾನರ್ ಮೇಲೆ ಹಾಕಿದ್ದ ‘ನಮ್ಮ ಶಾಸಕ’ ಪದದ ಮೇಲೆ ಪೇಪರ್ ಅಂಟಿಸಿದ್ದಾರೆ. ತಹಶೀಲ್ದಾರ್ ಮತ್ತು ಸರ್ಕಲ್ ಇನ್ಸ್ಪೆಕ್ಟರ್ ಕೂಡ ಸೂಚನೆ ನೀಡಿದ್ದರು ಎನ್ನಲಾಗಿದೆ.</p><p>ಈ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ತಾಲ್ಲೂಕು ಬಿಜೆಪಿ ಅಧ್ಯಕ್ಷ ಟಿ.ಬಿ.ಕೃಷ್ಣಪ್ಪ ನೇತೃತ್ವದಲ್ಲಿ ಮುಖಂಡರು ನಗರಸಭೆ ಕಚೇರಿಗೆ ತೆರಳಿ ಆಯುಕ್ತ ಪ್ರದೀಪ್ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.</p><p>‘ನೀವು ಒಂದು ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದೀರಿ. ಬ್ಯಾನರ್ನಲ್ಲಿ ಮುಂದಿನ ನಮ್ಮ ಶಾಸಕರು ಎಂದು ಹಾಕಿರುವುದು ತಪ್ಪೇ’ ಎಂದು ಪ್ರಶ್ನಿಸಿದ್ದಾರೆ.</p><p>ಒಂದು ಕಡೆ ಬ್ಯಾನರ್ ಮೇಲೆ ಪೇಪರ್ ಅಂಟಿಸಿದ್ದೀರಿ. ಇನ್ನೊಂದು ಕಡೆ ಬ್ಯಾನರ್ ತೆಗೆದು ಹಾಕಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಮಾಲೂರು ನಗರದಲ್ಲಿ ಸರಿಯಾಗಿ ಸ್ವಚ್ಛತೆ ಕಾಪಾಡುತ್ತಿಲ್ಲ, ಕುಡಿಯುವ ನೀರು ಪೂರೈಸುತ್ತಿಲ್ಲ. ಆದರೆ, ಸ್ಥಳೀಯ ಶಾಸಕರ ಪರವಾಗಿ ಕೆಲಸ ಮಾಡುತ್ತಿದ್ದೀರಿ ಎಂದು ಹರಿಹಾಯ್ದಿದ್ದಾರೆ.</p><p>ಆಯುಕ್ತ ಪ್ರದೀಪ್ ಕುಮಾರ್, ‘ತಹಶೀಲ್ದಾರ್ ಮತ್ತು ಸರ್ಕಲ್ ಇನ್ಸ್ಪೆಕ್ಟರ್ ಸೂಚನೆ ಮೇರೆಗೆ ಬ್ಯಾನರ್ ಮೇಲೆ ಪೇಪರ್ ಅಂಟಿಸಲಾಗಿದೆ. ಇದರಲ್ಲಿ ನನ್ನ ಕೈವಾಡ ಏನು ಇಲ್ಲ’ ಎಂದು ಮನವರಿಕೆ ಮಾಡಲು ಪ್ರಯತ್ನಿಸಿದ್ದಾರೆ.</p><p>ತಾಲ್ಲೂಕು ಯುವ ಮೋರ್ಚಾ ಅಧ್ಯಕ್ಷ ಕಿರಣ್ ರಾವು, ಜಿ.ಪಂ ಮಾಜಿ ಸದಸ್ಯ ಚಿನ್ನಸ್ವಾಮಿಗೌಡ ಸೇರಿದಂತೆ ಹಲವು ಈ ಸಂದರ್ಭದಲ್ಲಿ ಇದ್ದರು ಎಂಬುದು ಗೊತ್ತಾಗಿದೆ.</p><p>ಅಲ್ಲದೇ, ಈ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು, ಮಾಜಿ ಹಾಗೂ ಹಾಲಿ ಶಾಸಕರ ಬೆಂಬಲಿಗರ ಮಧ್ಯೆ ತಿಕ್ಕಾಟ ನಡೆಯುತ್ತಿದೆ. ಮಾಲೂರು ಶಾಸಕ ಯಾರು ಎಂದು ಕೆಲವರು ಫೇಸ್ಬುಕ್ನಲ್ಲಿ ಪ್ರಶ್ನೆ ಮಾಡಿದ್ದಾರೆ.</p><p>ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಹಾಗೂ ಮಾಜಿ ಶಾಸಕ ಬಿಜೆಪಿಯ ಮಂಜುನಾಥಗೌಡ ಬೆಂಬಲಿಗರ ಮಧ್ಯೆ ಉಂಟಾಬಹುದಾದ ಗಲಾಟೆ ತಡೆಗಟ್ಟುವ ನಿಟ್ಟಿನಲ್ಲಿ ಬ್ಯಾನರ್ ತೆರವು ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>