<p><strong>ಮಾಲೂರು</strong>: ನಗರ ಸೇರಿದಂತೆ ತಾಲ್ಲೂಕಿನಾದ್ಯಂತ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಭಾನುವಾರ ಶಿವನ ದೇಗುಲಗಳಲ್ಲಿ ಪೂಜಾ ಕೈಂಕರ್ಯಗಳು ನೆರವೇರಿದವು.</p>.<p>ಶಿವರಾತ್ರಿ ಹಬ್ಬದ ಪ್ರಯುಕ್ತ ಭಕ್ತರು ಶ್ರದ್ಧಾ ಭಕ್ತಿಯಿಂದ ಇಡೀ ದಿನ ಉಪವಾಸದಿಂದ ಶಿವನಿಗೆ ಪೂಜೆ ಸಲ್ಲಿಸಿ, ಸ್ವಾಮಿಯ ದರ್ಶನ ಪಡೆದರು.</p>.<p>ನಗರದ ದೊಡ್ಡಪೇಟೆ ರಸ್ತೆಯಲ್ಲಿರುವ ಶಂಕರ ನಾರಾಯಣ ಸ್ವಾಮಿ ದೇಗುಲ, ಕುಂಬೇಶ್ವರ ಸ್ವಾಮಿ, ಬೀರೇಶ್ವರ ಸ್ವಾಮಿ, ಬಸವಣ್ಣ ದೇಗುಲ, ಸಂತೇಪೇಟೆ ಪಂಚಲಿಂಗೇಶ್ವರ ಸ್ವಾಮಿ ದೇವಾಲಾಯಗಳಲ್ಲಿ ಬೆಳಗ್ಗೆಯಿಂದಲೇ ವಿವಿಧ ಪೂಜಾ ಕಾರ್ಯಗಳು ನೆರವೇರಿದವು. ನೂರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ಸ್ವಾಮಿಯ ದರ್ಶನ ಪಡೆದರು. </p>.<p>ಶಂಕರ ನಾರಾಯಣಸ್ವಾಮಿ ದೇವಸ್ಥಾನದಲ್ಲಿ ಸಾಲಿಗ್ರಾಮ ಶಿವಲಿಂಗಕ್ಕೆ ಮುಂಜಾನೆಯಿಂದಲೇ ಪೂಜೆ ನಡೆಯಿತು. ಮಧ್ಯರಾತ್ರಿಯಿಂದ ಹಾಲಿನ ಅಭಿಷೇಕ ಆರಂಭಗೊಂಡು ಸೋಮವಾರ ಮುಂಜಾನೆಯವರೆಗೂ ನಡೆಯಿತು. ದೇಗುಲದಲ್ಲಿ ರಾತ್ರಿ ಇಡೀ ಭಜನೆ, ಪಾರಾಯಣ, ಶಿವನಾಮ ಸ್ಮರಣೆ ಹಾಗೂ ನಾದಸ್ವರ ಕಾರ್ಯಕ್ರಮಗಳು ನಡೆದವು.</p>.<p>ನೂರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ಶಿವನಾಮ ಸ್ಮರಣೆ ಮಾಡುತ್ತಾ ಶಿವನ ದರ್ಶನ ಪಡೆದರು.</p>.<p>ತಾಲ್ಲೂಕಿನ ವಿವಿಧೆಡೆ ಶಿವರಾತ್ರಿ: ತಾಲ್ಲೂಕಿನ ಗುಡ್ನಹಳ್ಳಿ ಗ್ರಾಮದ ವೀರಭದ್ರಸ್ವಾಮಿ ದೇಗು, ದೊಡ್ಡ ಶಿವಾರ ಗಂಗಾಧರೇಶ್ವರ ಸ್ವಾಮಿ ದೇಗುಲಗಳಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ಮಂಗಳವಾರ ಸಂಜೆ ಲಕ್ಷ ದೀಪೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು</strong>: ನಗರ ಸೇರಿದಂತೆ ತಾಲ್ಲೂಕಿನಾದ್ಯಂತ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಭಾನುವಾರ ಶಿವನ ದೇಗುಲಗಳಲ್ಲಿ ಪೂಜಾ ಕೈಂಕರ್ಯಗಳು ನೆರವೇರಿದವು.</p>.<p>ಶಿವರಾತ್ರಿ ಹಬ್ಬದ ಪ್ರಯುಕ್ತ ಭಕ್ತರು ಶ್ರದ್ಧಾ ಭಕ್ತಿಯಿಂದ ಇಡೀ ದಿನ ಉಪವಾಸದಿಂದ ಶಿವನಿಗೆ ಪೂಜೆ ಸಲ್ಲಿಸಿ, ಸ್ವಾಮಿಯ ದರ್ಶನ ಪಡೆದರು.</p>.<p>ನಗರದ ದೊಡ್ಡಪೇಟೆ ರಸ್ತೆಯಲ್ಲಿರುವ ಶಂಕರ ನಾರಾಯಣ ಸ್ವಾಮಿ ದೇಗುಲ, ಕುಂಬೇಶ್ವರ ಸ್ವಾಮಿ, ಬೀರೇಶ್ವರ ಸ್ವಾಮಿ, ಬಸವಣ್ಣ ದೇಗುಲ, ಸಂತೇಪೇಟೆ ಪಂಚಲಿಂಗೇಶ್ವರ ಸ್ವಾಮಿ ದೇವಾಲಾಯಗಳಲ್ಲಿ ಬೆಳಗ್ಗೆಯಿಂದಲೇ ವಿವಿಧ ಪೂಜಾ ಕಾರ್ಯಗಳು ನೆರವೇರಿದವು. ನೂರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ಸ್ವಾಮಿಯ ದರ್ಶನ ಪಡೆದರು. </p>.<p>ಶಂಕರ ನಾರಾಯಣಸ್ವಾಮಿ ದೇವಸ್ಥಾನದಲ್ಲಿ ಸಾಲಿಗ್ರಾಮ ಶಿವಲಿಂಗಕ್ಕೆ ಮುಂಜಾನೆಯಿಂದಲೇ ಪೂಜೆ ನಡೆಯಿತು. ಮಧ್ಯರಾತ್ರಿಯಿಂದ ಹಾಲಿನ ಅಭಿಷೇಕ ಆರಂಭಗೊಂಡು ಸೋಮವಾರ ಮುಂಜಾನೆಯವರೆಗೂ ನಡೆಯಿತು. ದೇಗುಲದಲ್ಲಿ ರಾತ್ರಿ ಇಡೀ ಭಜನೆ, ಪಾರಾಯಣ, ಶಿವನಾಮ ಸ್ಮರಣೆ ಹಾಗೂ ನಾದಸ್ವರ ಕಾರ್ಯಕ್ರಮಗಳು ನಡೆದವು.</p>.<p>ನೂರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ಶಿವನಾಮ ಸ್ಮರಣೆ ಮಾಡುತ್ತಾ ಶಿವನ ದರ್ಶನ ಪಡೆದರು.</p>.<p>ತಾಲ್ಲೂಕಿನ ವಿವಿಧೆಡೆ ಶಿವರಾತ್ರಿ: ತಾಲ್ಲೂಕಿನ ಗುಡ್ನಹಳ್ಳಿ ಗ್ರಾಮದ ವೀರಭದ್ರಸ್ವಾಮಿ ದೇಗು, ದೊಡ್ಡ ಶಿವಾರ ಗಂಗಾಧರೇಶ್ವರ ಸ್ವಾಮಿ ದೇಗುಲಗಳಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ಮಂಗಳವಾರ ಸಂಜೆ ಲಕ್ಷ ದೀಪೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>