<p>ಮಾಲೂರು: ನಗರದ ಧರ್ಮರಾಯಸ್ವಾಮಿ ದ್ರೌಪದಮ್ಮ ಕರಗ ಮಹೋತ್ಸವ ಭಾನುವಾರ ರಾತ್ರಿ ಶ್ರದ್ಧಾ ಭಕ್ತಿಯಿಂದ ನೆರವೇರಿತು.</p>.<p>ಭಾನುವಾರ ರಾತ್ರಿ 11 ಗಂಟೆಗೆ ಕರಗದ ಪೂಜಾರಿ ವೆಂಕಟರಮಣ ದೇವಾಲಯದಿಂದ ಕರಗ ಹೊತ್ತು ಹೊರಬರುತ್ತಿದ್ದಂತೆ ಗೋವಿಂದ ಗೋವಿಂದ ನಾಮಸ್ಮರಣೆಗಳು ಮೊಳಗಿದವು.</p>.<p>ರಸ್ತೆಯ ಇಕ್ಕೆಲಗಳಲ್ಲಿ ಭಕ್ತರು ಮನೆ ಮುಂದೆ ರಂಗೋಲಿ ಬಿಡಿಸಿ, ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಮಲ್ಲಿಗೆ-ಕನಕಾಂಬರ ಹೂವುಗಳ ಮಳೆಯನ್ನು ಕರಗದ ಮೇಲೆ ಸುರಿಸುತ್ತಾ ಕರಗವನ್ನು ಗ್ರಾಮಸ್ಥರು ಸ್ವಾಗತಿಸಿದರು. ಭಾನುವಾರ ರಾತ್ರಿ ಆರಂಭವಾಗಿ ಸೋಮವಾರ ಬೆಳಗ್ಗೆಯವರೆಗೂ ಅದ್ದೂರಿ ಮೆರವಣಿಗೆ ನಡೆಯಿತು. ಕರಗ ವೀಕ್ಷಣೆಗೆ ಸಾವಿರಾರು ಭಕ್ತರು ಸೇರಿದ್ದರು.</p>.<p>ಕರಗ ಮಹೋತ್ಸವದಲ್ಲಿ ಜಮಾಯಿಸಿದ್ದ ಜನತೆಗೆ ವಿವಿಧ ಪಕ್ಷಗಳ ರಾಜಕಾರಣಿಗಳಿಂದ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು.</p>.<p>ಶಾಸಕ ಕೆ.ವೈ.ನಂಜೇಗೌಡ, ಮಾಜಿ ಸಚಿವ ಕೃಷ್ಣಯ್ಯಶೆಟ್ಟಿ, ಮಾಜಿ ಶಾಸಕ ಕೆ.ಎಸ್.ಮಂಜುನಾಥಗೌಡ, ಜೆಡಿಎಸ್ ಮುಖಂಡ ಹೂಡಿ ವಿಜಯಕುಮಾರ್, ಆರ್.ಪ್ರಭಾಕರ್, ಟಿ.ಬಿ.ಕೃಷ್ಣಪ್ಪ, ವಿಜಯ ನರಸಿಂಹ, ಎಂ.ಪಿ.ವಿಜಯಕುಮಾರ್, ಪಿ.ವೆಂಕಟೇಶ್, ವಿ.ಶ್ರೀನಿವಾಸ್ ಸೇರಿದಂತೆ ದೇವಾಲಯ ಸಮಿತಿ ಸದಸ್ಯರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-18-1433097326</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾಲೂರು: ನಗರದ ಧರ್ಮರಾಯಸ್ವಾಮಿ ದ್ರೌಪದಮ್ಮ ಕರಗ ಮಹೋತ್ಸವ ಭಾನುವಾರ ರಾತ್ರಿ ಶ್ರದ್ಧಾ ಭಕ್ತಿಯಿಂದ ನೆರವೇರಿತು.</p>.<p>ಭಾನುವಾರ ರಾತ್ರಿ 11 ಗಂಟೆಗೆ ಕರಗದ ಪೂಜಾರಿ ವೆಂಕಟರಮಣ ದೇವಾಲಯದಿಂದ ಕರಗ ಹೊತ್ತು ಹೊರಬರುತ್ತಿದ್ದಂತೆ ಗೋವಿಂದ ಗೋವಿಂದ ನಾಮಸ್ಮರಣೆಗಳು ಮೊಳಗಿದವು.</p>.<p>ರಸ್ತೆಯ ಇಕ್ಕೆಲಗಳಲ್ಲಿ ಭಕ್ತರು ಮನೆ ಮುಂದೆ ರಂಗೋಲಿ ಬಿಡಿಸಿ, ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಮಲ್ಲಿಗೆ-ಕನಕಾಂಬರ ಹೂವುಗಳ ಮಳೆಯನ್ನು ಕರಗದ ಮೇಲೆ ಸುರಿಸುತ್ತಾ ಕರಗವನ್ನು ಗ್ರಾಮಸ್ಥರು ಸ್ವಾಗತಿಸಿದರು. ಭಾನುವಾರ ರಾತ್ರಿ ಆರಂಭವಾಗಿ ಸೋಮವಾರ ಬೆಳಗ್ಗೆಯವರೆಗೂ ಅದ್ದೂರಿ ಮೆರವಣಿಗೆ ನಡೆಯಿತು. ಕರಗ ವೀಕ್ಷಣೆಗೆ ಸಾವಿರಾರು ಭಕ್ತರು ಸೇರಿದ್ದರು.</p>.<p>ಕರಗ ಮಹೋತ್ಸವದಲ್ಲಿ ಜಮಾಯಿಸಿದ್ದ ಜನತೆಗೆ ವಿವಿಧ ಪಕ್ಷಗಳ ರಾಜಕಾರಣಿಗಳಿಂದ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು.</p>.<p>ಶಾಸಕ ಕೆ.ವೈ.ನಂಜೇಗೌಡ, ಮಾಜಿ ಸಚಿವ ಕೃಷ್ಣಯ್ಯಶೆಟ್ಟಿ, ಮಾಜಿ ಶಾಸಕ ಕೆ.ಎಸ್.ಮಂಜುನಾಥಗೌಡ, ಜೆಡಿಎಸ್ ಮುಖಂಡ ಹೂಡಿ ವಿಜಯಕುಮಾರ್, ಆರ್.ಪ್ರಭಾಕರ್, ಟಿ.ಬಿ.ಕೃಷ್ಣಪ್ಪ, ವಿಜಯ ನರಸಿಂಹ, ಎಂ.ಪಿ.ವಿಜಯಕುಮಾರ್, ಪಿ.ವೆಂಕಟೇಶ್, ವಿ.ಶ್ರೀನಿವಾಸ್ ಸೇರಿದಂತೆ ದೇವಾಲಯ ಸಮಿತಿ ಸದಸ್ಯರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-18-1433097326</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>