<p><strong>ಕೋಲಾರ</strong>: ಮಾಲೂರು ವಿಧಾನಸಭಾ ಕ್ಷೇತ್ರ ಸಂಬಂಧ ನಾನು ಮರು ಮತ ಎಣಿಕೆಗೆ ಕೋರಿದ್ದೆ. ಆದರೆ, ಈಗ ನೋಡಿದರೆ ಮರು ಚುನಾವಣೆಯೇ ನಡೆಯುವಂತಿದೆ ಎಂದು ಮಾಜಿ ಶಾಸಕ ಬಿಜೆಪಿಯ ಕೆ.ಎಸ್.ಮಂಜುನಾಥ್ ಗೌಡ ಹೇಳಿದರು.</p>.<p>ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಜಿಲ್ಲಾಧಿಕಾರಿ ಎಂ.ಆರ್.ರವಿ ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣೆಗೆ ಸಂಬಂಧಿಸಿದ ಸಾಮಗ್ರಿಗಳು ಮಾಲೂರು ತಾಲ್ಲೂಕಿನಲ್ಲೇ ಉಳಿದುಕೊಂಡಿವೆ. ಅಲ್ಲಿ ಇಡಬಾರದಿತ್ತು. ಕೋಲಾರದ ಭದ್ರತಾ ಕೊಠಡಿಯಲ್ಲೇ ಇರಬೇಕಿತ್ತು. ಹಲವು ನಿಯಮಗಳು ಉಲ್ಲಂಘನೆ ಆಗಿವೆ. ಮಾಲೂರಿಗೆ ತೆರಳಿ ಈ ಸಂಬಂಧ ಪ್ರಶ್ನೆ ಮಾಡುತ್ತೇನೆ. ಅದನ್ನು ಜಪ್ತಿ ಮಾಡಿ ವಾಪಸ್ ಜಿಲ್ಲಾಧಿಕಾರಿ ಸುಪರ್ದಿಗೆ ಒಪ್ಪಿಸಬೇಕು’ ಎಂದು ಆಗ್ರಹಿಸಿದರು.</p>.<p>ಮರು ಮತ ಎಣಿಕೆಗೆ ದಿನಾಂಕ ನಿಗದಿ ಸಂಬಂಧ ಚರ್ಚೆ ನಡೆಯುತ್ತಿದ್ದು, ಒಂದೆರಡು ದಿನಗಳಲ್ಲಿ ಘೋಷಣೆ ಆಗಲಿದೆ ಎಂದರು.</p>.<p>ಸುಪ್ರೀಂ ಕೋರ್ಟ್ ಸೂಚನೆಯಂತೆ ಮರು ಮತ ಎಣಿಕೆಯನ್ನು ಅಚ್ಚುಕಟ್ಟಾಗಿ ಹಾಗೂ ನ್ಯಾಯಬದ್ಧವಾಗಿ ನಡೆಸುವಂತೆ ಕೋರಿದ್ದೇನೆ ಎಂದು ಹೇಳಿದರು.</p>.<p>ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂಶಕ್ತಿ ಚಲಪತಿ, ವಕೀಲರು ಹಾಗೂ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ಮಾಲೂರು ವಿಧಾನಸಭಾ ಕ್ಷೇತ್ರ ಸಂಬಂಧ ನಾನು ಮರು ಮತ ಎಣಿಕೆಗೆ ಕೋರಿದ್ದೆ. ಆದರೆ, ಈಗ ನೋಡಿದರೆ ಮರು ಚುನಾವಣೆಯೇ ನಡೆಯುವಂತಿದೆ ಎಂದು ಮಾಜಿ ಶಾಸಕ ಬಿಜೆಪಿಯ ಕೆ.ಎಸ್.ಮಂಜುನಾಥ್ ಗೌಡ ಹೇಳಿದರು.</p>.<p>ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಜಿಲ್ಲಾಧಿಕಾರಿ ಎಂ.ಆರ್.ರವಿ ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣೆಗೆ ಸಂಬಂಧಿಸಿದ ಸಾಮಗ್ರಿಗಳು ಮಾಲೂರು ತಾಲ್ಲೂಕಿನಲ್ಲೇ ಉಳಿದುಕೊಂಡಿವೆ. ಅಲ್ಲಿ ಇಡಬಾರದಿತ್ತು. ಕೋಲಾರದ ಭದ್ರತಾ ಕೊಠಡಿಯಲ್ಲೇ ಇರಬೇಕಿತ್ತು. ಹಲವು ನಿಯಮಗಳು ಉಲ್ಲಂಘನೆ ಆಗಿವೆ. ಮಾಲೂರಿಗೆ ತೆರಳಿ ಈ ಸಂಬಂಧ ಪ್ರಶ್ನೆ ಮಾಡುತ್ತೇನೆ. ಅದನ್ನು ಜಪ್ತಿ ಮಾಡಿ ವಾಪಸ್ ಜಿಲ್ಲಾಧಿಕಾರಿ ಸುಪರ್ದಿಗೆ ಒಪ್ಪಿಸಬೇಕು’ ಎಂದು ಆಗ್ರಹಿಸಿದರು.</p>.<p>ಮರು ಮತ ಎಣಿಕೆಗೆ ದಿನಾಂಕ ನಿಗದಿ ಸಂಬಂಧ ಚರ್ಚೆ ನಡೆಯುತ್ತಿದ್ದು, ಒಂದೆರಡು ದಿನಗಳಲ್ಲಿ ಘೋಷಣೆ ಆಗಲಿದೆ ಎಂದರು.</p>.<p>ಸುಪ್ರೀಂ ಕೋರ್ಟ್ ಸೂಚನೆಯಂತೆ ಮರು ಮತ ಎಣಿಕೆಯನ್ನು ಅಚ್ಚುಕಟ್ಟಾಗಿ ಹಾಗೂ ನ್ಯಾಯಬದ್ಧವಾಗಿ ನಡೆಸುವಂತೆ ಕೋರಿದ್ದೇನೆ ಎಂದು ಹೇಳಿದರು.</p>.<p>ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂಶಕ್ತಿ ಚಲಪತಿ, ವಕೀಲರು ಹಾಗೂ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>