<p><strong>ಕೋಲಾರ</strong>: ಕುತೂಹಲ ಮೂಡಿಸಿದ್ದ ಮಾಲೂರು ಕ್ಷೇತ್ರದ ಮತಗಳ ಮರು ಎಣಿಕೆ ಬಿಗಿ ಭದ್ರತೆಯಲ್ಲಿ ಮಂಗಳವಾರ ನಡೆಯಿತು. ಫಲಿತಾಂಶದಲ್ಲಿ ಬದಲಾವಣೆ ಸಾಧ್ಯತೆ ಕಡಿಮೆ ಎನ್ನಲಾಗಿದೆ.</p><p>ರಾತ್ರಿ 8 ಗಂಟೆಗೆ ಎಣಿಕೆ ಕೇಂದ್ರದಿಂದ ಹೊರಬಂದ ಶಾಸಕ ಕೆ.ವೈ.ನಂಜೇಗೌಡ, ‘ಮರು ಮತ ಎಣಿಕೆಯಲ್ಲಿ ವ್ಯತ್ಯಾಸ ಕಂಡು ಬಂದಿಲ್ಲ. ನನಗೆ ನ್ಯಾಯ ದೊರಕಿದೆ’ ಎಂದರು. </p><p>ಸುಪ್ರೀಂ ಕೋರ್ಟ್ ಸೂಚನೆಯಂತೆ ಮರು ಮತ ಎಣಿಕೆ ಕಾರ್ಯ ನಡೆಯಿತು. ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಹೀಗಾಗಿ, ಆಯೋಗ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಕೋರ್ಟ್ಗೆ ಸಲ್ಲಿಸಲಿದೆ. ನ.24ಕ್ಕೆ ವಿಚಾರಣೆ ಸಾಧ್ಯತೆ ಇದೆ.</p><p>ಬಿಜೆಪಿಯ ಕೆ.ಎಸ್.ಮಂಜುನಾಥ ಗೌಡ, ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯ ಕುಮಾರ್, ಜಿಲ್ಲಾಧಿಕಾರಿ ಎಂ.ಆರ್.ರವಿ, ಚುನಾವಣಾಧಿಕಾರಿ ಡಾ.ಮೈತ್ರಿ, ವೀಕ್ಷಕ ಪ್ರಭು ನಾರಾಯಣಸಿಂಗ್ ಕೇಂದ್ರ ದಲ್ಲಿದ್ದರು.</p><p>2023ರ ಚುನಾವಣೆಯಲ್ಲಿ ನಂಜೇಗೌಡ 248 ಮತಗಳಿಂದ ಗೆದ್ದಿದ್ದರು. ಫಲಿತಾಂಶ ಪ್ರಶ್ನಿಸಿ ಮಂಜುನಾಥ ಗೌಡ ಕೋರ್ಟ್ ಮೆಟ್ಟಿಲೇರಿದ್ದರು.</p>.ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ: ರಾಜಕೀಯ ವಲಯದಲ್ಲಿ ಭಾರಿ ಕುತೂಹಲ!.ಮಾಲೂರು ಕ್ಷೇತ್ರ | ಬಿಗಿ ಭದ್ರತೆಯಲ್ಲಿ ಮರು ಮತ ಎಣಿಕೆ: ಮಾಧ್ಯಮದವರಿಗೆ ನಿರ್ಬಂಧ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ಕುತೂಹಲ ಮೂಡಿಸಿದ್ದ ಮಾಲೂರು ಕ್ಷೇತ್ರದ ಮತಗಳ ಮರು ಎಣಿಕೆ ಬಿಗಿ ಭದ್ರತೆಯಲ್ಲಿ ಮಂಗಳವಾರ ನಡೆಯಿತು. ಫಲಿತಾಂಶದಲ್ಲಿ ಬದಲಾವಣೆ ಸಾಧ್ಯತೆ ಕಡಿಮೆ ಎನ್ನಲಾಗಿದೆ.</p><p>ರಾತ್ರಿ 8 ಗಂಟೆಗೆ ಎಣಿಕೆ ಕೇಂದ್ರದಿಂದ ಹೊರಬಂದ ಶಾಸಕ ಕೆ.ವೈ.ನಂಜೇಗೌಡ, ‘ಮರು ಮತ ಎಣಿಕೆಯಲ್ಲಿ ವ್ಯತ್ಯಾಸ ಕಂಡು ಬಂದಿಲ್ಲ. ನನಗೆ ನ್ಯಾಯ ದೊರಕಿದೆ’ ಎಂದರು. </p><p>ಸುಪ್ರೀಂ ಕೋರ್ಟ್ ಸೂಚನೆಯಂತೆ ಮರು ಮತ ಎಣಿಕೆ ಕಾರ್ಯ ನಡೆಯಿತು. ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಹೀಗಾಗಿ, ಆಯೋಗ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಕೋರ್ಟ್ಗೆ ಸಲ್ಲಿಸಲಿದೆ. ನ.24ಕ್ಕೆ ವಿಚಾರಣೆ ಸಾಧ್ಯತೆ ಇದೆ.</p><p>ಬಿಜೆಪಿಯ ಕೆ.ಎಸ್.ಮಂಜುನಾಥ ಗೌಡ, ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯ ಕುಮಾರ್, ಜಿಲ್ಲಾಧಿಕಾರಿ ಎಂ.ಆರ್.ರವಿ, ಚುನಾವಣಾಧಿಕಾರಿ ಡಾ.ಮೈತ್ರಿ, ವೀಕ್ಷಕ ಪ್ರಭು ನಾರಾಯಣಸಿಂಗ್ ಕೇಂದ್ರ ದಲ್ಲಿದ್ದರು.</p><p>2023ರ ಚುನಾವಣೆಯಲ್ಲಿ ನಂಜೇಗೌಡ 248 ಮತಗಳಿಂದ ಗೆದ್ದಿದ್ದರು. ಫಲಿತಾಂಶ ಪ್ರಶ್ನಿಸಿ ಮಂಜುನಾಥ ಗೌಡ ಕೋರ್ಟ್ ಮೆಟ್ಟಿಲೇರಿದ್ದರು.</p>.ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ: ರಾಜಕೀಯ ವಲಯದಲ್ಲಿ ಭಾರಿ ಕುತೂಹಲ!.ಮಾಲೂರು ಕ್ಷೇತ್ರ | ಬಿಗಿ ಭದ್ರತೆಯಲ್ಲಿ ಮರು ಮತ ಎಣಿಕೆ: ಮಾಧ್ಯಮದವರಿಗೆ ನಿರ್ಬಂಧ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>