<p><strong>ಕೋಲಾರ</strong>: ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಪ್ರಕ್ರಿಯೆ ಭಾರಿ ಬಿಗಿ ಬಂದೋಬಸ್ತ್ನಲ್ಲಿ ಮಂಗಳವಾರ ಯಶಸ್ವಿಯಾಗಿ ನಡೆದಿದ್ದು, ಫಲಿತಾಂಶದಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂಬುದು ಗೊತ್ತಾಗಿದೆ.</p><p>ರಾತ್ರಿ 8 ಗಂಟೆಗೆ ಸುಮಾರಿಗೆ ಎಣಿಕೆ ಕೇಂದ್ರದಿಂದ ಹೊರಬಂದ ಶಾಸಕ ಕೆ.ವೈ.ನಂಜೇಗೌಡ, ‘ಮರು ಮತ ಎಣಿಕೆಯಲ್ಲಿ ಯಾವುದೇ ವ್ಯತ್ಯಾಸ ಕಂಡಿಲ್ಲ. ನಾವು ಅಂಬೇಡ್ಕರ್ ಸಂವಿಧಾನದಲ್ಲಿ ವಿಶ್ವಾಸವಿಟ್ಟಿದ್ದು, ನ್ಯಾಯ ದೊರಕಿದೆ ’ ಎಂದು ಖುಷಿ ವ್ಯಕ್ತಪಡಿಸಿದರು.</p><p>ಫಲಿತಾಂಶದ ಬಗ್ಗೆ ತಕರಾರರು ಅರ್ಜಿ ಸಲ್ಲಿಸಿದ್ದ ಪರಾಜಿತ ಅಭ್ಯರ್ಥಿ ಹಾಗೂ ಬಿಜೆಪಿ ಮುಖಂಡ ಕೆ.ಎಸ್.ಮಂಜುನಾಥಗೌಡ ಮರು ಮತ ಎಣಿಕೆ ಬಗ್ಗೆ ಆಕ್ಷೇಪ ಹಾಗೂ ಅಸಮಾಧಾನ ವ್ಯಕ್ತಪಡಿಸಿದರು. ಎಲ್ಲಾ ವಿಚಾರವನ್ನು ಸುಪ್ರೀಂ ಕೋರ್ಟ್ಗೆ ಮನವರಿಕೆ ಮಾಡಿಕೊಡುವುದಾಗಿ ಹೇಳಿದರು. </p><p>ಅಲ್ಲದೇ, ಗೆದ್ದಿರುವ ಶಾಸಕರಿಗೆ ಅಭಿನಂದನೆ ಸಲ್ಲಿಸೋಣ ಎಂದರು.</p><p>ಈ ಮೂಲಕ ಅವರ ಶಾಸಕ ಸ್ಥಾನ ಅಬಾಧಿತವಾಗಿದೆ ಎಂಬುದು ತಿಳಿದು ಬಂದಿದೆ. ‘ಮರು ಮತ ಎಣಿಕೆಯಲ್ಲೂ ನಂಜೇಗೌಡರು ಗೆದ್ದಿದ್ದಾರೆ’ ಎಂದು ಕಾಂಗ್ರೆಸ್ ಪಕ್ಷದ ಕೆಲ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡು ಸಂಭ್ರಮಿಸಿದರು.</p><p>ಮರು ಮತ ಎಣಿಕೆ ನಡೆಸಿ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಈಗಾಗಲೇ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಹೀಗಾಗಿ, ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸುವಂತಿಲ್ಲ.</p>.ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ: ರಾಜಕೀಯ ವಲಯದಲ್ಲಿ ಭಾರಿ ಕುತೂಹಲ!.ಮಾಲೂರು ಕ್ಷೇತ್ರ | ಬಿಗಿ ಭದ್ರತೆಯಲ್ಲಿ ಮರು ಮತ ಎಣಿಕೆ: ಮಾಧ್ಯಮದವರಿಗೆ ನಿರ್ಬಂಧ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಪ್ರಕ್ರಿಯೆ ಭಾರಿ ಬಿಗಿ ಬಂದೋಬಸ್ತ್ನಲ್ಲಿ ಮಂಗಳವಾರ ಯಶಸ್ವಿಯಾಗಿ ನಡೆದಿದ್ದು, ಫಲಿತಾಂಶದಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂಬುದು ಗೊತ್ತಾಗಿದೆ.</p><p>ರಾತ್ರಿ 8 ಗಂಟೆಗೆ ಸುಮಾರಿಗೆ ಎಣಿಕೆ ಕೇಂದ್ರದಿಂದ ಹೊರಬಂದ ಶಾಸಕ ಕೆ.ವೈ.ನಂಜೇಗೌಡ, ‘ಮರು ಮತ ಎಣಿಕೆಯಲ್ಲಿ ಯಾವುದೇ ವ್ಯತ್ಯಾಸ ಕಂಡಿಲ್ಲ. ನಾವು ಅಂಬೇಡ್ಕರ್ ಸಂವಿಧಾನದಲ್ಲಿ ವಿಶ್ವಾಸವಿಟ್ಟಿದ್ದು, ನ್ಯಾಯ ದೊರಕಿದೆ ’ ಎಂದು ಖುಷಿ ವ್ಯಕ್ತಪಡಿಸಿದರು.</p><p>ಫಲಿತಾಂಶದ ಬಗ್ಗೆ ತಕರಾರರು ಅರ್ಜಿ ಸಲ್ಲಿಸಿದ್ದ ಪರಾಜಿತ ಅಭ್ಯರ್ಥಿ ಹಾಗೂ ಬಿಜೆಪಿ ಮುಖಂಡ ಕೆ.ಎಸ್.ಮಂಜುನಾಥಗೌಡ ಮರು ಮತ ಎಣಿಕೆ ಬಗ್ಗೆ ಆಕ್ಷೇಪ ಹಾಗೂ ಅಸಮಾಧಾನ ವ್ಯಕ್ತಪಡಿಸಿದರು. ಎಲ್ಲಾ ವಿಚಾರವನ್ನು ಸುಪ್ರೀಂ ಕೋರ್ಟ್ಗೆ ಮನವರಿಕೆ ಮಾಡಿಕೊಡುವುದಾಗಿ ಹೇಳಿದರು. </p><p>ಅಲ್ಲದೇ, ಗೆದ್ದಿರುವ ಶಾಸಕರಿಗೆ ಅಭಿನಂದನೆ ಸಲ್ಲಿಸೋಣ ಎಂದರು.</p><p>ಈ ಮೂಲಕ ಅವರ ಶಾಸಕ ಸ್ಥಾನ ಅಬಾಧಿತವಾಗಿದೆ ಎಂಬುದು ತಿಳಿದು ಬಂದಿದೆ. ‘ಮರು ಮತ ಎಣಿಕೆಯಲ್ಲೂ ನಂಜೇಗೌಡರು ಗೆದ್ದಿದ್ದಾರೆ’ ಎಂದು ಕಾಂಗ್ರೆಸ್ ಪಕ್ಷದ ಕೆಲ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡು ಸಂಭ್ರಮಿಸಿದರು.</p><p>ಮರು ಮತ ಎಣಿಕೆ ನಡೆಸಿ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಈಗಾಗಲೇ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಹೀಗಾಗಿ, ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸುವಂತಿಲ್ಲ.</p>.ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ: ರಾಜಕೀಯ ವಲಯದಲ್ಲಿ ಭಾರಿ ಕುತೂಹಲ!.ಮಾಲೂರು ಕ್ಷೇತ್ರ | ಬಿಗಿ ಭದ್ರತೆಯಲ್ಲಿ ಮರು ಮತ ಎಣಿಕೆ: ಮಾಧ್ಯಮದವರಿಗೆ ನಿರ್ಬಂಧ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>