<p><strong>ಮಾಲೂರು:</strong> ತಾಲ್ಲೂಕಿನ ಅರುಣಿಘಟ್ಟ ಗ್ರಾಮದ ಬಳಿ ಮಂಗಳವಾರ ಬೆಳಗ್ಗೆ ಖಾಸಗಿ ಶಾಲಾ ಬಸ್ ಮಗುಚಿ ಬಿದ್ದು 17 ಮಕ್ಕಳಿಗೆ ಗಾಯಗಳಾಗಿವೆ. ಈ ಪೈಕಿ ಐವರು ಮಕ್ಕಳ ತಲೆಗೆ ಪೆಟ್ಟು ಬಿದ್ದಿದೆ.</p>.<p>ಕುಡಿಯನೂರು ಗ್ರಾಮದ ಸಮೀಪದ ಬೋಸ್ ವಿದ್ಯಾ ಸಂಸ್ಥೆಗೆ ಮಾಸ್ತಿಯಿಂದ ಮಕ್ಕಳನ್ನು ಕರೆತರುತ್ತಿದ್ದ ವಾಹನ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಬದಿಗೆ ಉರುಳಿದೆ. ವಾಹನದಲ್ಲಿ ಸುಮಾರು 25 ಮಕ್ಕಳು ಇದ್ದರು.</p>.<p>ತಲೆಗೆ ಪೆಟ್ಟುಬಿದ್ದು ಗಾಯಗೊಂಡಿರುವ ಅರ್ಮಾನ್, ಜೀವಿತ, ಸುದರ್ಶನ್, ಸಾಯಿ ಹಾಗೂ ಗಗನ್ ಎಂಬ ಮಕ್ಕಳನ್ನು ಸ್ಥಳೀಯರ ನೆರವಿನಿಂದ ಮಾಲೂರು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಕೋಲಾರದ ಜಿಲ್ಲಾ ಆಸ್ಪತ್ರೆ ಕಳಿಸಲಾಯಿತು.</p>.<p>ಬಸ್ ಹಿಂದೆ ವಾಹನದಲ್ಲಿ ಬರುತ್ತಿದ್ದ ಸುರೇಂದ್ರ ರೆಡ್ಡಿ ಎಂಬುವರು ನಾಲ್ಕೈದು ಮಕ್ಕಳನ್ನು ತಮ್ಮ ವಾಹನದಲ್ಲಿ ಕರೆದೊಯ್ದು ಮಾಲೂರು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದರಿಂದ ಮಕ್ಕಳಿಗೆ ಸಕಾಲಕ್ಕೆ ಚಿಕಿತ್ಸೆ ದೊರಕಲು ಅನುಕೂಲವಾಯಿತು ಎಂದು ಪೋಷಕರು ಹೇಳಿದರು.</p>.<p>ಸರ್ಕಾರಿ ಆಸ್ಪತ್ರೆಯ ಡಾ.ಶ್ರೀನಿವಾಸ್, ಡಾ.ಮಂಜುನಾಥ್, ಡಾ.ಸಂಗೀತಾ ಮಕ್ಕಳಿಗೆ ಚಿಕಿತ್ಸೆ ನೀಡಿದರು. ಎಲ್ಲಾ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್ ಸ್ಥಳಕ್ಕೆ ಭೇಟಿ ನೀಡಿ ಮಕ್ಕಳ ಯೋಗಕ್ಷೇಮ ವಿಚಾರಿಸಿದರು. ಪೋಷಕರು ಭಯಪಡಬೇಕಾಗಿಲ್ಲ. ಸಣ್ಣಪುಟ್ಟ ಗಾಯವಾಗಿದ್ದು, ಎಲ್ಲಾ ಮಕ್ಕಳು ಸುರಕ್ಷಿತವಾಗಿದ್ದಾರೆ ಎಂದು ಹೇಳಿದರು.</p>.<p>ಶಾಲೆಯ ಮಾಲೀಕ ಹಾಗೂ ಬಸ್ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಮಾಲೂರು ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.</p>.<div><blockquote>ಶಾಲೆಯ ಮುಖ್ಯಸ್ಥರು ಹಾಗೂ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಅಪಘಾತಕ್ಕೆ ಕಾರಣರಾದವರ ಮೇಲೆ ಕ್ರಮ ಜರುಗಿಸಲಾಗುವುದು. ಮಕ್ಕಳು ಸುರಕ್ಷಿತವಾಗಿದ್ದು ಪೋಷಕರು ಭಯಪಡಬೇಕಾಗಿಲ್ಲ </blockquote><span class="attribution">– ಕನ್ನಿಕಾ ಸಿಕ್ರಿವಾಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು:</strong> ತಾಲ್ಲೂಕಿನ ಅರುಣಿಘಟ್ಟ ಗ್ರಾಮದ ಬಳಿ ಮಂಗಳವಾರ ಬೆಳಗ್ಗೆ ಖಾಸಗಿ ಶಾಲಾ ಬಸ್ ಮಗುಚಿ ಬಿದ್ದು 17 ಮಕ್ಕಳಿಗೆ ಗಾಯಗಳಾಗಿವೆ. ಈ ಪೈಕಿ ಐವರು ಮಕ್ಕಳ ತಲೆಗೆ ಪೆಟ್ಟು ಬಿದ್ದಿದೆ.</p>.<p>ಕುಡಿಯನೂರು ಗ್ರಾಮದ ಸಮೀಪದ ಬೋಸ್ ವಿದ್ಯಾ ಸಂಸ್ಥೆಗೆ ಮಾಸ್ತಿಯಿಂದ ಮಕ್ಕಳನ್ನು ಕರೆತರುತ್ತಿದ್ದ ವಾಹನ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಬದಿಗೆ ಉರುಳಿದೆ. ವಾಹನದಲ್ಲಿ ಸುಮಾರು 25 ಮಕ್ಕಳು ಇದ್ದರು.</p>.<p>ತಲೆಗೆ ಪೆಟ್ಟುಬಿದ್ದು ಗಾಯಗೊಂಡಿರುವ ಅರ್ಮಾನ್, ಜೀವಿತ, ಸುದರ್ಶನ್, ಸಾಯಿ ಹಾಗೂ ಗಗನ್ ಎಂಬ ಮಕ್ಕಳನ್ನು ಸ್ಥಳೀಯರ ನೆರವಿನಿಂದ ಮಾಲೂರು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಕೋಲಾರದ ಜಿಲ್ಲಾ ಆಸ್ಪತ್ರೆ ಕಳಿಸಲಾಯಿತು.</p>.<p>ಬಸ್ ಹಿಂದೆ ವಾಹನದಲ್ಲಿ ಬರುತ್ತಿದ್ದ ಸುರೇಂದ್ರ ರೆಡ್ಡಿ ಎಂಬುವರು ನಾಲ್ಕೈದು ಮಕ್ಕಳನ್ನು ತಮ್ಮ ವಾಹನದಲ್ಲಿ ಕರೆದೊಯ್ದು ಮಾಲೂರು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದರಿಂದ ಮಕ್ಕಳಿಗೆ ಸಕಾಲಕ್ಕೆ ಚಿಕಿತ್ಸೆ ದೊರಕಲು ಅನುಕೂಲವಾಯಿತು ಎಂದು ಪೋಷಕರು ಹೇಳಿದರು.</p>.<p>ಸರ್ಕಾರಿ ಆಸ್ಪತ್ರೆಯ ಡಾ.ಶ್ರೀನಿವಾಸ್, ಡಾ.ಮಂಜುನಾಥ್, ಡಾ.ಸಂಗೀತಾ ಮಕ್ಕಳಿಗೆ ಚಿಕಿತ್ಸೆ ನೀಡಿದರು. ಎಲ್ಲಾ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್ ಸ್ಥಳಕ್ಕೆ ಭೇಟಿ ನೀಡಿ ಮಕ್ಕಳ ಯೋಗಕ್ಷೇಮ ವಿಚಾರಿಸಿದರು. ಪೋಷಕರು ಭಯಪಡಬೇಕಾಗಿಲ್ಲ. ಸಣ್ಣಪುಟ್ಟ ಗಾಯವಾಗಿದ್ದು, ಎಲ್ಲಾ ಮಕ್ಕಳು ಸುರಕ್ಷಿತವಾಗಿದ್ದಾರೆ ಎಂದು ಹೇಳಿದರು.</p>.<p>ಶಾಲೆಯ ಮಾಲೀಕ ಹಾಗೂ ಬಸ್ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಮಾಲೂರು ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.</p>.<div><blockquote>ಶಾಲೆಯ ಮುಖ್ಯಸ್ಥರು ಹಾಗೂ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಅಪಘಾತಕ್ಕೆ ಕಾರಣರಾದವರ ಮೇಲೆ ಕ್ರಮ ಜರುಗಿಸಲಾಗುವುದು. ಮಕ್ಕಳು ಸುರಕ್ಷಿತವಾಗಿದ್ದು ಪೋಷಕರು ಭಯಪಡಬೇಕಾಗಿಲ್ಲ </blockquote><span class="attribution">– ಕನ್ನಿಕಾ ಸಿಕ್ರಿವಾಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>