<p><strong>ಮಾಲೂರು</strong>: ತಾಲ್ಲೂಕಿನ ಟೇಕಲ್ ಬೆಟ್ಟದಲ್ಲಿ ಮಂಗಳವಾರ ಬಂಡೆ ಕಲ್ಲು ಒಡೆಯುವ ಸಿಡಿಮದ್ದು ಸ್ಫೋಟಗೊಂಡು ಕೊಪ್ಪಳ ಜಿಲ್ಲೆಯ ನಾಲ್ವರಿಗೆ ಗಾಯಗಳಾಗಿವೆ.</p>.<p>ಕಾರ್ಮಿಕರಾದ ಚಿರಂಜೀವಿ (22), ರಾಮು (34), ಹೇಮಂತ(28) ಹಾಗೂ ರಾಜು (30) ಗಾಯಗೊಂಡವರು. ಕದಿರೇನಹಳ್ಳಿಯ ಹನುಮಂತಪ್ಪ ಎಂಬುವರಿಗೆ ಸೇರಿದ ಬಂಡೆ ಪ್ರದೇಶದಲ್ಲಿ ಈ ಸ್ಫೋಟ ಸಂಭವಿಸಿದೆ.</p>.<p>ಕದರೇನಹಳ್ಳಿ ಬಳಿಯ ಬೆಟ್ಟದಲ್ಲಿ ಕೆಲಸ ಮಾಡುತ್ತಿದ್ದ ಈ ಕಾರ್ಮಿಕರು ಬಂಡೆ ಸ್ಫೋಟ ಮಾಡಲು ಸಿಡಿಮದ್ದು ಇಟ್ಟಿದ್ದಾರೆ. ಈ ವೇಳೆ ಏಕಾಏಕಿ ಸ್ಫೋಟ ಉಂಟಾಗಿದೆ. ಪರಿಣಾಮ ನಾಲ್ವರ ಕೈಕಾಲುಗಳಿಗೆ ತೀವ್ರ ಗಾಯಗಳಾಗಿದ್ದು, ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ಸ್ಥಳಕ್ಕೆ ಮಾಸ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದ ಸಿಬ್ಬಂದಿ ಕೂಡ ಭೇಟಿ ನೀಡಿ ಪರಿಶೀಲಿಸಿದರು. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-18-549901757</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು</strong>: ತಾಲ್ಲೂಕಿನ ಟೇಕಲ್ ಬೆಟ್ಟದಲ್ಲಿ ಮಂಗಳವಾರ ಬಂಡೆ ಕಲ್ಲು ಒಡೆಯುವ ಸಿಡಿಮದ್ದು ಸ್ಫೋಟಗೊಂಡು ಕೊಪ್ಪಳ ಜಿಲ್ಲೆಯ ನಾಲ್ವರಿಗೆ ಗಾಯಗಳಾಗಿವೆ.</p>.<p>ಕಾರ್ಮಿಕರಾದ ಚಿರಂಜೀವಿ (22), ರಾಮು (34), ಹೇಮಂತ(28) ಹಾಗೂ ರಾಜು (30) ಗಾಯಗೊಂಡವರು. ಕದಿರೇನಹಳ್ಳಿಯ ಹನುಮಂತಪ್ಪ ಎಂಬುವರಿಗೆ ಸೇರಿದ ಬಂಡೆ ಪ್ರದೇಶದಲ್ಲಿ ಈ ಸ್ಫೋಟ ಸಂಭವಿಸಿದೆ.</p>.<p>ಕದರೇನಹಳ್ಳಿ ಬಳಿಯ ಬೆಟ್ಟದಲ್ಲಿ ಕೆಲಸ ಮಾಡುತ್ತಿದ್ದ ಈ ಕಾರ್ಮಿಕರು ಬಂಡೆ ಸ್ಫೋಟ ಮಾಡಲು ಸಿಡಿಮದ್ದು ಇಟ್ಟಿದ್ದಾರೆ. ಈ ವೇಳೆ ಏಕಾಏಕಿ ಸ್ಫೋಟ ಉಂಟಾಗಿದೆ. ಪರಿಣಾಮ ನಾಲ್ವರ ಕೈಕಾಲುಗಳಿಗೆ ತೀವ್ರ ಗಾಯಗಳಾಗಿದ್ದು, ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ಸ್ಥಳಕ್ಕೆ ಮಾಸ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದ ಸಿಬ್ಬಂದಿ ಕೂಡ ಭೇಟಿ ನೀಡಿ ಪರಿಶೀಲಿಸಿದರು. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-18-549901757</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>