ನಗರಸಭೆಯಲ್ಲಿ ಪೌರಕಾರ್ಮಿಕರ ಸಂಖ್ಯೆ ಏರಿಕೆಯಾಗಲಿದೆ. ಇದರಿಂದ ಪಟ್ಟಣದ ಸ್ವಚ್ಛತೆ ಕಾಪಾಡಲು ಅನುಕೂಲವಾಗುತ್ತದೆ. ಜೊತೆಗೆ ಅನುದಾನ ಹೆಚ್ಚಾಗಿ ಬರಲಿದೆ. ಇದರಿಂದ ಪಟ್ಟಣದಲ್ಲಿ ಅಭಿವೃದ್ಧಿ ಕಾಮಗಾರಿಗಳು ಹೆಚ್ಚಾಗಲಿದೆ.
ಎಂವಿ.ಹನುಮಂತಯ್ಯ ಕಸಾಪ ತಾಲೂಕು ಅಧ್ಯಕ್ಷ
ಪಟ್ಟಣದ ಕೆಲವು ವಾರ್ಡ್ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಇದ್ದಾರೆ. ಡಿ.ಲಿಮಿಟೇಶನ್ ಮಾಡುವುದರಿಂದ ವಾರ್ಡ್ಗಳಲ್ಲಿ ಅಭಿವೃದ್ದಿ ಕಾಮಗಾರಿಗಳು ಹೆಚ್ಚಾಗಿ ನಡೆಯುತ್ತವೆ. ಇದರಿಂದ ನಾಗರಿಕರಿಗೆ ಅನುಕೂಲವಾಗುತ್ತದೆ.
ವಿ. ಶ್ರೀನಿವಾಸ್ ಹಿರಿಯ ಕಲಾವಿದ
ರಾಜ ಕಾಲುವೆಗಳಲ್ಲಿ ನಿರ್ಮಾಣ ಮಾಡಿರುವ ಒಳ ಚರಂಡಿ ಪೈಪ್ಗಳನ್ನು ಸ್ಥಳಾಂತರಿಸಬೇಕು. ಕೆರೆಯ ಬಳಿ ಇರುವ ಒಳಚರಂಡಿ ನೀರು ಸಂಸ್ಕರಣ ಘಟಕ ಸ್ಥಗಿತಗೊಂಡು ವರ್ಷಗಳು ಕಳೆದಿದೆ. ಈ ಸಮಸ್ಯೆಗಳಿಗೆ ಮುಕ್ತಿ ನೀಡಿ