<p>ಮಾಲೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ ಜಿಲ್ಲಾ ಚಕೋರ ಸಾಹಿತ್ಯ ವಿಚಾರ ವೇದಿಕೆ, ಮಾನಸ ಪದವಿ ಕಾಲೇಜು ಹಾಗೂ ಚೈತನ್ಯ ಕಲಾನಿಕೇತನ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಮಾನಸ ಕಾಲೇಜಿನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಸಂವಿಧಾನದ ಆಶಯಗಳ ಕುರಿತು ಉಪನ್ಯಾಸ ನಡೆಯಿತು.</p>.<p>ಈ ವೇಳೆ ದಲಿತ ಸಂಘರ್ಷ ಸಮಿತಿಯ ಮಾಲೂರು ತಾಲ್ಲೂಕು ಸಂಚಾಲಕ ಎಂ.ಶೇಷಪ್ಪ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿರುವ ಲಿಖಿತ ಸಂವಿಧಾನ ವಿಶ್ವಮಾನ್ಯವಾಗಿದ್ದು, ಸಮಾನತೆಯ ಭಾರತ ನಿರ್ಮಾಣಕ್ಕೆ ಪೂರಕವಾಗಿದೆ ಎಂದು ತಿಳಿಸಿದರು.</p>.<p>ಮಾನಸ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್.ಕೆ.ಶ್ರೀನಿವಾಸ್ ಮಾತನಾಡಿ, 32 ವಿಷಯಗಳಲ್ಲಿ ಪದವಿ ಪಡೆದಿರುವ ಡಾ. ಬಿ.ಆರ್.ಅಂಬೇಡ್ಕರ್ ಅವರು ಪ್ರತಿಯೊಬ್ಬ ವಿದ್ಯಾರ್ಥಿಗಳ ಆದರ್ಶ ಪುರುಷ. ಅವರೊಬ್ಬ ಶ್ರೇಷ್ಠ ಶಿಕ್ಷಣ ತಜ್ಞರಾಗಿದ್ದು, ಬದುಕಿನ ಬಹಳಷ್ಟು ಸಮಯವನ್ನು ಓದಿಗೆ ಮೀಸಲಾಗಿಟ್ಟಿದ್ದರು ಎಂದರು.</p>.<p>ಚಕೋರ ಸಾಹಿತ್ಯ ವಿಚಾರ ವೇದಿಕೆಯ ಜಿಲ್ಲಾ ಸಂಚಾಲಕ ಡಾ.ಜಯಮಂಗಲ ಚಂದ್ರಶೇಖರ್, ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಅಧ್ಯಕ್ಷ ಎಂ.ವಿ.ಹನುಮಂತಯ್ಯ, ಕೆ.ಮುನಿಕೃಷ್ಣಪ್ಪ, ಶೈಲೇಶ್ ಕುಮಾರ್, ನಾರಿಗಾನಹಳ್ಳಿ ಶ್ರೀನಿವಾಸ್, ಎಂ.ವೆಂಕಟೇಶಮೂರ್ತಿ, ಸಿ.ಎಂ. ನಂಜುಂಡಪ್ಪ, ಹೇಮಾವತಿ, ವೀಣಾ, ಎ.ನಾಗರಾಜ್, ಈಶ್ವರ್ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-18-703282174</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾಲೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ ಜಿಲ್ಲಾ ಚಕೋರ ಸಾಹಿತ್ಯ ವಿಚಾರ ವೇದಿಕೆ, ಮಾನಸ ಪದವಿ ಕಾಲೇಜು ಹಾಗೂ ಚೈತನ್ಯ ಕಲಾನಿಕೇತನ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಮಾನಸ ಕಾಲೇಜಿನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಸಂವಿಧಾನದ ಆಶಯಗಳ ಕುರಿತು ಉಪನ್ಯಾಸ ನಡೆಯಿತು.</p>.<p>ಈ ವೇಳೆ ದಲಿತ ಸಂಘರ್ಷ ಸಮಿತಿಯ ಮಾಲೂರು ತಾಲ್ಲೂಕು ಸಂಚಾಲಕ ಎಂ.ಶೇಷಪ್ಪ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿರುವ ಲಿಖಿತ ಸಂವಿಧಾನ ವಿಶ್ವಮಾನ್ಯವಾಗಿದ್ದು, ಸಮಾನತೆಯ ಭಾರತ ನಿರ್ಮಾಣಕ್ಕೆ ಪೂರಕವಾಗಿದೆ ಎಂದು ತಿಳಿಸಿದರು.</p>.<p>ಮಾನಸ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್.ಕೆ.ಶ್ರೀನಿವಾಸ್ ಮಾತನಾಡಿ, 32 ವಿಷಯಗಳಲ್ಲಿ ಪದವಿ ಪಡೆದಿರುವ ಡಾ. ಬಿ.ಆರ್.ಅಂಬೇಡ್ಕರ್ ಅವರು ಪ್ರತಿಯೊಬ್ಬ ವಿದ್ಯಾರ್ಥಿಗಳ ಆದರ್ಶ ಪುರುಷ. ಅವರೊಬ್ಬ ಶ್ರೇಷ್ಠ ಶಿಕ್ಷಣ ತಜ್ಞರಾಗಿದ್ದು, ಬದುಕಿನ ಬಹಳಷ್ಟು ಸಮಯವನ್ನು ಓದಿಗೆ ಮೀಸಲಾಗಿಟ್ಟಿದ್ದರು ಎಂದರು.</p>.<p>ಚಕೋರ ಸಾಹಿತ್ಯ ವಿಚಾರ ವೇದಿಕೆಯ ಜಿಲ್ಲಾ ಸಂಚಾಲಕ ಡಾ.ಜಯಮಂಗಲ ಚಂದ್ರಶೇಖರ್, ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಅಧ್ಯಕ್ಷ ಎಂ.ವಿ.ಹನುಮಂತಯ್ಯ, ಕೆ.ಮುನಿಕೃಷ್ಣಪ್ಪ, ಶೈಲೇಶ್ ಕುಮಾರ್, ನಾರಿಗಾನಹಳ್ಳಿ ಶ್ರೀನಿವಾಸ್, ಎಂ.ವೆಂಕಟೇಶಮೂರ್ತಿ, ಸಿ.ಎಂ. ನಂಜುಂಡಪ್ಪ, ಹೇಮಾವತಿ, ವೀಣಾ, ಎ.ನಾಗರಾಜ್, ಈಶ್ವರ್ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-18-703282174</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>