ಕೇಂದ್ರ ಸರ್ಕಾರದ ಆದೇಶದಂತೆ ಅಲ್ಲಿನ ಸರ್ಕಾರ ಆರೋಗ್ಯ ತಪಾಸಣೆ ನಡೆಸಿ ಬಸ್ಗಳ ಮೂಲಕ ಸ್ವಗ್ರಾಮಗಳಿಗೆ ತೆರಳಲು ಅವಕಾಶ ಕಲ್ಪಿಸಿತು. ಈ ಹಿನ್ನೆಲೆಯಲ್ಲಿ ತಾಲ್ಲೂಕಿಗೆ ಬಂದ ಯಾತ್ರಾರ್ಥಿಗಳನ್ನು ಜಿಲ್ಲಾಧಿಕಾರಿ ಸತ್ಯಭಾಮ, ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಎಎಸ್ಪಿ ಜಾಹ್ನವಿ ಉಸ್ತುವಾರಿಯಲ್ಲಿ ತಪಾಸಣೆಗೆ ಒಳಪಡಿಸಲಾಯಿತು.