<p><strong>ಮಾಲೂರು</strong>: ಅಯೋಧ್ಯ ವೈಶ್ಯ ನಾಮಧಾರಿ ನಗರ್ತ ಸಮುದಾಯವನ್ನು ಪ್ರವರ್ಗ 2 ಎ ಪಟ್ಟಿಗೆ ಸೇರಿಸಿ ಜಾತಿ ಪ್ರಮಾಣಪತ್ರ ವಿತರಿಸಬೇಕೆಂದು ಒತ್ತಾಯಿಸಿ ಸಮುದಾಯದ ಮುಖಂಡರು ತಹಶೀಲ್ದಾರ್ಗೆ ಮನವಿ ನೀಡಿದರು.</p>.<p>ಅಯೋಧ್ಯ ವೈಶ್ಯ ನಾಮಧಾರಿ ನಗರ್ತ ಸಮುದಾಯಕ್ಕೆ ಜಾತಿ ಪ್ರಮಾಣಪತ್ರ ವಿತರಿಸಬೇಕು ಎಂಬುದು ಹಲವು ವರ್ಷಗಳ ಬೇಡಿಕೆಯಾಗಿದೆ. ಮೊದಲಿನಿಂದಲೂ ಮನವಿ ನೀಡುತ್ತಾ, ಹೋರಾಟ ಮಾಡಿಕೊಂಡು ಬಂದಿದ್ದೇವೆ. ಆದರೆ, ಸ್ಪಂದನೆ ಮಾತ್ರ ಸಿಗುತ್ತಿಲ್ಲ ಎಂದು ಸಮುದಾಯದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಈ ವೇಳೆ ಸಮುದಾಯದ ಎಸ್.ಎ.ರಾಮಪ್ರಕಾಶ್ ಮಾನಾಡಿ, ನಗರ್ತ, ನಾಮಧಾರಿ ನಗರ್ತ, ನಾಮಧಾರಿ ಎಂಬ ಹೆಸರಿನಲ್ಲಿ ಹಲವು ದಶಕಗಳಿಂದ ಶಾಲಾ ದಾಖಲೆ, ಆದಾಯ ದಾಖಲೆಗಳಲ್ಲಿ ಸೇರಿದಂತೆ ವಿವಿಧ ದಾಖಲೆಗಳಲ್ಲಿ ನಮೂದಿಸಲಾಗಿದೆ. ಈ ಹೆಸರಲ್ಲಿರುವ ವ್ಯತ್ಯಾಸಗಳಿಂದ ಇತ್ತೀಚಿನ ದಿನದಲ್ಲಿ ಗೊಂದಲ ಸೃಷ್ಟಿಯಾಗಿದೆ. ಎಲ್ಲ ಹೆಸರು ಒಂದೇ ಸಮುದಾಯವನ್ನು ಸೂಚಿಸುತ್ತವೆ. ಈ ಜಾತಿಯನ್ನು ಅಧಿಕೃತ ಗೆಜೆಟ್ ಪಟ್ಟಿಯಲ್ಲಿ ಸರ್ಕಾರ ಸೇರಿಸದ ಕಾರಣ ಪ್ರಮಾಣಪತ್ರ ಪಡೆಯಲು ಕಷ್ಟವಾಗುತ್ತಿದೆ ಎಂದರು.</p>.<p>ಪ್ರಸ್ತುತ ದಿನಗಳಲ್ಲಿ ಜಾತಿ ಪ್ರಮಾಣಪತ್ರವು ಕೇವಲ ಒಂದು ದಾಖಲೆ ಅಲ್ಲ. ಅದು ಶಿಕ್ಷಣ, ಸರ್ಕಾರಿ ಯೋಜನೆ ಹಾಗೂ ಸಾಮಾಜಿಕ ಕಲ್ಯಾಣ ಸೌಲಭ್ಯ ಪಡೆಯಲು ಅಗತ್ಯ ದಾಖಲೆ ಎಂದರು.</p>.<p>ಸಾಮಾಜಿಕವಾಗಿ ಈ ಸಮುದಾಯವು ಸ್ಪಷ್ಟವಾಗಿ ಗುರುತಿಸಿಕೊಂಡಿದ್ದರೂ, ಕರ್ನಾಟಕದಲ್ಲಿ ಇನ್ನೂ ಮಾನ್ಯತೆ ಪಡೆಯದೆ ಹಿಂದುಳಿದಿದೆ. ಜಾತಿ ಪ್ರಮಾಣಪತ್ರದ ಕೊರತೆಯಿಂದ ಸರ್ಕಾರಿ ಸೌಲಭ್ಯಗಳು ಮತ್ತು ಕಲ್ಯಾಣ ಯೋಜನೆಗಳಿಂದ ದೂರ ಉಳಿಯುವಂತಾಗಿದೆ ಎಂದರು.</p>.<p>ಜಾತಿ ಪ್ರಮಾಣಪತ್ರದ ಕೊರತೆಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ವಿದ್ಯಾರ್ಥಿನಿಲಯ ಸೌಲಭ್ಯ, ಶುಲ್ಕ ವಿನಾಯಿತಿ ಸೇರಿದಂತೆ ಯಾವುದೇ ಸರ್ಕಾರಿ ನೆರವು ದೊರೆಯುತ್ತಿಲ್ಲ. ಇದರಿಂದ ಎಸ್ಎಸ್ಎಲ್ಸಿ ಮತ್ತು ಪಿಯು ನಂತರ ಅನೇಕ ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಮಧ್ಯದಲ್ಲೇ ನಿಲ್ಲಿಸುವ ಪರಿಸ್ಥಿತಿ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ನಗರ್ತ ಸಮುದಾಯವು ಮಾಲೂರು, ಕೋಲಾರ, ಮುಳಬಾಗಿಲು, ಶ್ರೀನಿವಾಸಪುರ, ಕೆಜಿಎಫ್, ಬಂಗಾರಪೇಟೆ ಸೇರಿದಂತೆ ಕೋಲಾರ ಜಿಲ್ಲೆಯಾದ್ಯಂತ ಹಾಗೂ ಚಿಕ್ಕಬಳ್ಳಾಪುರ, ಬೆಂಗಳೂರು, ಮೈಸೂರು ಭಾಗದಲ್ಲಿ ವಾಸಿಸುತ್ತಿದ್ದಾರೆ. ರಾಜ್ಯದಲ್ಲಿ ಸುಮಾರು 1.5 ಲಕ್ಷದಿಂದ 2 ಲಕ್ಷ ಜನಸಂಖ್ಯೆ ಇದ್ದಾರೆಂದು ಅಂದಾಜಿಸಲಾಗಿದೆ ಎಂದು.</p>.<p>ಇದೇ ಸಮುದಾಯದವರು ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಈಗಾಗಲೇ 2ಎ ವರ್ಗದಲ್ಲಿ ಮಾನ್ಯತೆ ಪಡೆದು ಸೌಲಭ್ಯ ಪಡೆಯುತ್ತಿದ್ದಾರೆ. ಆದರೆ, ಕರ್ನಾಟಕದಲ್ಲಿ ಮಾತ್ರ ಮಾನ್ಯತೆ ಲಭ್ಯವಾಗಿಲ್ಲ ಎಂದು ಕಿಡಿಕಾರಿದರು.</p>.<p>ಈ ಸಮಸ್ಯೆ ಬಗೆಹರಿಸದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.</p>.<p>ಸಮುದಾಯದವರ ಮನವಿ ಸ್ವೀಕರಿಸಿದ ತಹಶೀಲ್ದಾರ್ ರೂಪ ಮಾತನಾಡಿ, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಮತ್ತು ಸರ್ಕಾರಕ್ಕೆ ವರದಿ ಸಲ್ಲಿಸುವ ಭರವಸೆ ನೀಡಿದರು.</p>.<p>ಎಸ್.ಎ.ರಾಮಪ್ರಕಾಶ್, ಜಯಪ್ರಕಾಶ್ ಶೆಟ್ಟಿ, ಶ್ರೀಧರ್, ಅಶೋಕ್ ಬಾಬು, ಆನಂದಪ್ಪ, ವೆಂಕಟರಾಜು ಬಿ.ಕೆ., ಶ್ರೀಧರ್ ಬಿ.ಸಿ., ಮಹೇಶ್ ಎನ್, ನಾರಾಯಣ ಶೆಟ್ಟಿ, ಸಿ.ವಿ.ನಾರಾಯಣ, ಕೆ.ಎಸ್.ಅಮರೇಶ್, ಸಂದೀಪ್, ಮೂರ್ತಿ, ಬಾಬು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-18-1458095246</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು</strong>: ಅಯೋಧ್ಯ ವೈಶ್ಯ ನಾಮಧಾರಿ ನಗರ್ತ ಸಮುದಾಯವನ್ನು ಪ್ರವರ್ಗ 2 ಎ ಪಟ್ಟಿಗೆ ಸೇರಿಸಿ ಜಾತಿ ಪ್ರಮಾಣಪತ್ರ ವಿತರಿಸಬೇಕೆಂದು ಒತ್ತಾಯಿಸಿ ಸಮುದಾಯದ ಮುಖಂಡರು ತಹಶೀಲ್ದಾರ್ಗೆ ಮನವಿ ನೀಡಿದರು.</p>.<p>ಅಯೋಧ್ಯ ವೈಶ್ಯ ನಾಮಧಾರಿ ನಗರ್ತ ಸಮುದಾಯಕ್ಕೆ ಜಾತಿ ಪ್ರಮಾಣಪತ್ರ ವಿತರಿಸಬೇಕು ಎಂಬುದು ಹಲವು ವರ್ಷಗಳ ಬೇಡಿಕೆಯಾಗಿದೆ. ಮೊದಲಿನಿಂದಲೂ ಮನವಿ ನೀಡುತ್ತಾ, ಹೋರಾಟ ಮಾಡಿಕೊಂಡು ಬಂದಿದ್ದೇವೆ. ಆದರೆ, ಸ್ಪಂದನೆ ಮಾತ್ರ ಸಿಗುತ್ತಿಲ್ಲ ಎಂದು ಸಮುದಾಯದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಈ ವೇಳೆ ಸಮುದಾಯದ ಎಸ್.ಎ.ರಾಮಪ್ರಕಾಶ್ ಮಾನಾಡಿ, ನಗರ್ತ, ನಾಮಧಾರಿ ನಗರ್ತ, ನಾಮಧಾರಿ ಎಂಬ ಹೆಸರಿನಲ್ಲಿ ಹಲವು ದಶಕಗಳಿಂದ ಶಾಲಾ ದಾಖಲೆ, ಆದಾಯ ದಾಖಲೆಗಳಲ್ಲಿ ಸೇರಿದಂತೆ ವಿವಿಧ ದಾಖಲೆಗಳಲ್ಲಿ ನಮೂದಿಸಲಾಗಿದೆ. ಈ ಹೆಸರಲ್ಲಿರುವ ವ್ಯತ್ಯಾಸಗಳಿಂದ ಇತ್ತೀಚಿನ ದಿನದಲ್ಲಿ ಗೊಂದಲ ಸೃಷ್ಟಿಯಾಗಿದೆ. ಎಲ್ಲ ಹೆಸರು ಒಂದೇ ಸಮುದಾಯವನ್ನು ಸೂಚಿಸುತ್ತವೆ. ಈ ಜಾತಿಯನ್ನು ಅಧಿಕೃತ ಗೆಜೆಟ್ ಪಟ್ಟಿಯಲ್ಲಿ ಸರ್ಕಾರ ಸೇರಿಸದ ಕಾರಣ ಪ್ರಮಾಣಪತ್ರ ಪಡೆಯಲು ಕಷ್ಟವಾಗುತ್ತಿದೆ ಎಂದರು.</p>.<p>ಪ್ರಸ್ತುತ ದಿನಗಳಲ್ಲಿ ಜಾತಿ ಪ್ರಮಾಣಪತ್ರವು ಕೇವಲ ಒಂದು ದಾಖಲೆ ಅಲ್ಲ. ಅದು ಶಿಕ್ಷಣ, ಸರ್ಕಾರಿ ಯೋಜನೆ ಹಾಗೂ ಸಾಮಾಜಿಕ ಕಲ್ಯಾಣ ಸೌಲಭ್ಯ ಪಡೆಯಲು ಅಗತ್ಯ ದಾಖಲೆ ಎಂದರು.</p>.<p>ಸಾಮಾಜಿಕವಾಗಿ ಈ ಸಮುದಾಯವು ಸ್ಪಷ್ಟವಾಗಿ ಗುರುತಿಸಿಕೊಂಡಿದ್ದರೂ, ಕರ್ನಾಟಕದಲ್ಲಿ ಇನ್ನೂ ಮಾನ್ಯತೆ ಪಡೆಯದೆ ಹಿಂದುಳಿದಿದೆ. ಜಾತಿ ಪ್ರಮಾಣಪತ್ರದ ಕೊರತೆಯಿಂದ ಸರ್ಕಾರಿ ಸೌಲಭ್ಯಗಳು ಮತ್ತು ಕಲ್ಯಾಣ ಯೋಜನೆಗಳಿಂದ ದೂರ ಉಳಿಯುವಂತಾಗಿದೆ ಎಂದರು.</p>.<p>ಜಾತಿ ಪ್ರಮಾಣಪತ್ರದ ಕೊರತೆಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ವಿದ್ಯಾರ್ಥಿನಿಲಯ ಸೌಲಭ್ಯ, ಶುಲ್ಕ ವಿನಾಯಿತಿ ಸೇರಿದಂತೆ ಯಾವುದೇ ಸರ್ಕಾರಿ ನೆರವು ದೊರೆಯುತ್ತಿಲ್ಲ. ಇದರಿಂದ ಎಸ್ಎಸ್ಎಲ್ಸಿ ಮತ್ತು ಪಿಯು ನಂತರ ಅನೇಕ ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಮಧ್ಯದಲ್ಲೇ ನಿಲ್ಲಿಸುವ ಪರಿಸ್ಥಿತಿ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ನಗರ್ತ ಸಮುದಾಯವು ಮಾಲೂರು, ಕೋಲಾರ, ಮುಳಬಾಗಿಲು, ಶ್ರೀನಿವಾಸಪುರ, ಕೆಜಿಎಫ್, ಬಂಗಾರಪೇಟೆ ಸೇರಿದಂತೆ ಕೋಲಾರ ಜಿಲ್ಲೆಯಾದ್ಯಂತ ಹಾಗೂ ಚಿಕ್ಕಬಳ್ಳಾಪುರ, ಬೆಂಗಳೂರು, ಮೈಸೂರು ಭಾಗದಲ್ಲಿ ವಾಸಿಸುತ್ತಿದ್ದಾರೆ. ರಾಜ್ಯದಲ್ಲಿ ಸುಮಾರು 1.5 ಲಕ್ಷದಿಂದ 2 ಲಕ್ಷ ಜನಸಂಖ್ಯೆ ಇದ್ದಾರೆಂದು ಅಂದಾಜಿಸಲಾಗಿದೆ ಎಂದು.</p>.<p>ಇದೇ ಸಮುದಾಯದವರು ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಈಗಾಗಲೇ 2ಎ ವರ್ಗದಲ್ಲಿ ಮಾನ್ಯತೆ ಪಡೆದು ಸೌಲಭ್ಯ ಪಡೆಯುತ್ತಿದ್ದಾರೆ. ಆದರೆ, ಕರ್ನಾಟಕದಲ್ಲಿ ಮಾತ್ರ ಮಾನ್ಯತೆ ಲಭ್ಯವಾಗಿಲ್ಲ ಎಂದು ಕಿಡಿಕಾರಿದರು.</p>.<p>ಈ ಸಮಸ್ಯೆ ಬಗೆಹರಿಸದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.</p>.<p>ಸಮುದಾಯದವರ ಮನವಿ ಸ್ವೀಕರಿಸಿದ ತಹಶೀಲ್ದಾರ್ ರೂಪ ಮಾತನಾಡಿ, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಮತ್ತು ಸರ್ಕಾರಕ್ಕೆ ವರದಿ ಸಲ್ಲಿಸುವ ಭರವಸೆ ನೀಡಿದರು.</p>.<p>ಎಸ್.ಎ.ರಾಮಪ್ರಕಾಶ್, ಜಯಪ್ರಕಾಶ್ ಶೆಟ್ಟಿ, ಶ್ರೀಧರ್, ಅಶೋಕ್ ಬಾಬು, ಆನಂದಪ್ಪ, ವೆಂಕಟರಾಜು ಬಿ.ಕೆ., ಶ್ರೀಧರ್ ಬಿ.ಸಿ., ಮಹೇಶ್ ಎನ್, ನಾರಾಯಣ ಶೆಟ್ಟಿ, ಸಿ.ವಿ.ನಾರಾಯಣ, ಕೆ.ಎಸ್.ಅಮರೇಶ್, ಸಂದೀಪ್, ಮೂರ್ತಿ, ಬಾಬು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-18-1458095246</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>