ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಜಾ ಗಿಡ ವಶ: ಆರೋಪಿ ಸೆರೆ

Last Updated 3 ಸೆಪ್ಟೆಂಬರ್ 2021, 3:10 IST
ಅಕ್ಷರ ಗಾತ್ರ

ಬಂಗಾರಪೇಟೆ: ತಾಲ್ಲೂಕಿನ ಬಲಮಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೀಮಗಾನಹಳ್ಳಿಯ ಸರ್ವೆ ನಂ. 214ರ ಸರ್ಕಾರಿ ಗೋಮಾಳದಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಪತ್ತೆಹಚ್ಚಿದ ಅಬಕಾರಿ ಪೊಲೀಸರು ಆರೋಪಿ ದೇವರಾಜ್ ಎಂಬಾತನನ್ನು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಇನ್‌ಸ್ಪೆಕ್ಟರ್ ಪಿ.ಕೆ. ಶಶಿಕಲಾ ಸುಮಾರು
₹ 65 ಸಾವಿರ ಮೌಲ್ಯದ 2.5 ಕೆ.ಜಿ ಗಾಂಜಾ ಗಿಡಗಳನ್ನು ವಶಕ್ಕೆ
ಪಡೆದಿದ್ದಾರೆ.

ಆರೋಪಿಯು ಗೋಮಾಳ ಜಮೀನಿನ ಕಲ್ಲುಬಂಡೆಗಳ ಮಧ್ಯೆ ಪಾತಿ ಮಾಡಿ 8 ಗಾಂಜಾ ಗಿಡಗಳನ್ನು
ಬೆಳೆದಿದ್ದ. ದಾಳಿ ನಡೆಸಿದ ತಂಡದಲ್ಲಿ ಅಬಕಾರಿ ಉಪ ನಿರೀಕ್ಷಕರಾದ ಪ್ರಕೃತಿ ಜೈ, ಎಂ.ಆರ್. ಶಿವಶಂಕರ್, ಸಿಬ್ಬಂದಿ ಲಕ್ಷ್ಮಣ್, ಮಂಜುನಾಥ್, ಹನುಮಂತು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT