ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ತೋಟಗಾರಿಕಾ ಸಚಿವ ಆರ್.ಶಂಕರ್ ಅವರಿಗೆ ಪತ್ರ ಬರೆದಿರುವ ನಾರಾಯಣಸ್ವಾಮಿ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಯಲ್ಲಿ ಅತಿ ಹೆಚ್ಚು ರೈತರು ಮಾವು ಬೆಳೆಯುತ್ತಾರೆ. ರಾಜ್ಯದಲ್ಲಿ ಶೇ 70ರಷ್ಟು ಮಾವನ್ನು ಈ ಜಿಲ್ಲೆಗಳಲ್ಲೇ ಬೆಳೆಯಲಾಗುತ್ತದೆ ಎಂದು ತಿಳಿಸಿದ್ದಾರೆ.