ಧರಣಿ ಮಳೆ ಬಿದ್ದರೆ ಬೆಳೆ ಬೆಳೆಯುವುದು ಕಾಯಂ ಎಂಬುದು ನಂಬಿಕೆ. ಕೆಲವು ಕಡೆಗಳಲ್ಲಿ ಬಿತ್ತನೆ ಕಾರ್ಯ ಸಾಗಿದೆ. ಹಿಂದಿನಂತೆ ಈ ಬಾರಿ ಬಿತ್ತನೆ ಬೀಜದ ಕೊರತೆ ರೈತರನ್ನು ಕಾಡಿಲ್ಲ. ರೈತರು ಕೇಳಿದಷ್ಟು ನೆಲಗಡಲೆ, ರಾಗಿ, ಅವರೆ, ಅಲಸಂದಿ ಬಿತ್ತನೆ ಬೀಜಗಳನ್ನು ಕೃಷಿ ಇಲಾಖೆ ನೀಡಲು ಸಿದ್ಧವಿದೆ ಎಂದು ಕೃಷಿ ಇಲಾಖೆ ಸಹಾಯಕನಿರ್ದೇಶಕ ಅಮರನಾಥರೆಡ್ಡಿ ತಿಳಿಸಿದರು.