<p><strong>ಕೋಲಾರ: </strong>ಎಸ್ಸೆಸ್ಸೆಲ್ಸಿ-ಪಿಯುಸಿ ಉತ್ತರ ಪತ್ರಿಕೆ ಪ್ರತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ವಿದ್ಯುತ್ ಬಿಲ್ ಪಾವತಿ ಸೇರಿದಂತೆ 16 ಇಲಾಖೆಯ 56 ಹೆಚ್ಚು ಸೇವೆಗಳನ್ನು ಒದಗಿಸುವಕರ್ನಾಟಕ ಒನ್ ಕೇಂದ್ರಕ್ಕೆ ಚಾಲನೆ ಸಿಕ್ಕಿದೆ.</p>.<p>ನಗರದ ಮಿನಿ ವಿಧಾನಸೌಧದ ಪಕ್ಕದಲ್ಲಿ ನಿರ್ಮಾಣವಾಗಿರುವ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಸೋಮವಾರ ಉದ್ಘಾಟಿಸಿದರು. ‘ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳು ಸಲುಭವಾಗಿ ತಲುಪಬೇಕು ಎಂಬ ಉದ್ದೇಶದಿಂದ ಕರ್ನಾಟಕ ಒನ್ ಕೇಂದ್ರ ಆರಂಭಿಸಲಾಗಿದ್ದು, ಇದರ ಪ್ರಯೋಜನವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು’ ಎಂದು ಮನವಿ ಮಾಡಿದರು.<br />‘ಪಾಸ್ಪೋರ್ಟ್ ಆನ್ ಲೈನ್ ಅರ್ಜಿ ಸಲ್ಲಿಕೆ, ಆಧಾರ್ ನೋಂದಣಿ , ಸರ್ಕಾರದ ನಾನಾ ಇಲಾಖೆಗಳಿಗೆ ಅರ್ಜಿ, ಪಡಿತರ ಚೀಟಿ, ವಿಧವಾ ಪ್ರಮಾಣ ಪತ್ರ ಸೇರಿದಂತೆ ವಿವಿಧ ಸೇವೆಗಳು ದೊರೆಯಲಿದೆ. ಈ ಕೇಂದ್ರಕ್ಕೆ ದೊರೆಯುವ ಪ್ರತಿಕ್ರಿಯೆ ಆಧರಿಸಿ, ಮತ್ತೊಂದು ಕೇಂದ್ರ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.</p>.<p>‘ಈಗಾಗಲೇ ಬೆಂಗಳೂರಿನಲ್ಲಿ ಎರಡು ವಾರ್ಡಿಗೆ ಒಂದರಂತೆ ಬೆಂಗಳೂರು ಒನ್ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತಿವಾಗಿದೆ. ಇಲ್ಲಿನ ಸಿಬ್ಬಂದಿ ಬೆಳಿಗ್ಗೆ 8ರಿಂದ ಸಂಜೆ 6ರ ತನಕ ಕಾರ್ಯನಿರ್ವಹಿಸುತ್ತಾರೆ. ಸಾರ್ವಜನಿಕರು ಸರಿಯಾದ ರೀತಿ ಉಪಯೋಗಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಶಾಸಕ ಕೆ. ಶ್ರೀನಿವಾಸಗೌಡ, ಜಿಲ್ಲಾಧಿಕಾರಿ ಜೆ. ಮಂಜುನಾಥ್, ತಹಶೀಲ್ದಾರ್ ಗಾಯಿತ್ರಿ, ನಗರಸಭೆ ಯೋಜನಾ ನಿರ್ದೇಶಕ ರಂಗಸ್ವಾಮಿ, ನಗರಸಭೆ ಆಯುಕ್ತ ಸತ್ಯನಾರಾಯಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ಎಸ್ಸೆಸ್ಸೆಲ್ಸಿ-ಪಿಯುಸಿ ಉತ್ತರ ಪತ್ರಿಕೆ ಪ್ರತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ವಿದ್ಯುತ್ ಬಿಲ್ ಪಾವತಿ ಸೇರಿದಂತೆ 16 ಇಲಾಖೆಯ 56 ಹೆಚ್ಚು ಸೇವೆಗಳನ್ನು ಒದಗಿಸುವಕರ್ನಾಟಕ ಒನ್ ಕೇಂದ್ರಕ್ಕೆ ಚಾಲನೆ ಸಿಕ್ಕಿದೆ.</p>.<p>ನಗರದ ಮಿನಿ ವಿಧಾನಸೌಧದ ಪಕ್ಕದಲ್ಲಿ ನಿರ್ಮಾಣವಾಗಿರುವ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಸೋಮವಾರ ಉದ್ಘಾಟಿಸಿದರು. ‘ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳು ಸಲುಭವಾಗಿ ತಲುಪಬೇಕು ಎಂಬ ಉದ್ದೇಶದಿಂದ ಕರ್ನಾಟಕ ಒನ್ ಕೇಂದ್ರ ಆರಂಭಿಸಲಾಗಿದ್ದು, ಇದರ ಪ್ರಯೋಜನವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು’ ಎಂದು ಮನವಿ ಮಾಡಿದರು.<br />‘ಪಾಸ್ಪೋರ್ಟ್ ಆನ್ ಲೈನ್ ಅರ್ಜಿ ಸಲ್ಲಿಕೆ, ಆಧಾರ್ ನೋಂದಣಿ , ಸರ್ಕಾರದ ನಾನಾ ಇಲಾಖೆಗಳಿಗೆ ಅರ್ಜಿ, ಪಡಿತರ ಚೀಟಿ, ವಿಧವಾ ಪ್ರಮಾಣ ಪತ್ರ ಸೇರಿದಂತೆ ವಿವಿಧ ಸೇವೆಗಳು ದೊರೆಯಲಿದೆ. ಈ ಕೇಂದ್ರಕ್ಕೆ ದೊರೆಯುವ ಪ್ರತಿಕ್ರಿಯೆ ಆಧರಿಸಿ, ಮತ್ತೊಂದು ಕೇಂದ್ರ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.</p>.<p>‘ಈಗಾಗಲೇ ಬೆಂಗಳೂರಿನಲ್ಲಿ ಎರಡು ವಾರ್ಡಿಗೆ ಒಂದರಂತೆ ಬೆಂಗಳೂರು ಒನ್ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತಿವಾಗಿದೆ. ಇಲ್ಲಿನ ಸಿಬ್ಬಂದಿ ಬೆಳಿಗ್ಗೆ 8ರಿಂದ ಸಂಜೆ 6ರ ತನಕ ಕಾರ್ಯನಿರ್ವಹಿಸುತ್ತಾರೆ. ಸಾರ್ವಜನಿಕರು ಸರಿಯಾದ ರೀತಿ ಉಪಯೋಗಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಶಾಸಕ ಕೆ. ಶ್ರೀನಿವಾಸಗೌಡ, ಜಿಲ್ಲಾಧಿಕಾರಿ ಜೆ. ಮಂಜುನಾಥ್, ತಹಶೀಲ್ದಾರ್ ಗಾಯಿತ್ರಿ, ನಗರಸಭೆ ಯೋಜನಾ ನಿರ್ದೇಶಕ ರಂಗಸ್ವಾಮಿ, ನಗರಸಭೆ ಆಯುಕ್ತ ಸತ್ಯನಾರಾಯಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>