ನಗರದ ಮಿನಿ ವಿಧಾನಸೌಧದ ಪಕ್ಕದಲ್ಲಿ ನಿರ್ಮಾಣವಾಗಿರುವ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಸೋಮವಾರ ಉದ್ಘಾಟಿಸಿದರು. ‘ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳು ಸಲುಭವಾಗಿ ತಲುಪಬೇಕು ಎಂಬ ಉದ್ದೇಶದಿಂದ ಕರ್ನಾಟಕ ಒನ್ ಕೇಂದ್ರ ಆರಂಭಿಸಲಾಗಿದ್ದು, ಇದರ ಪ್ರಯೋಜನವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು’ ಎಂದು ಮನವಿ ಮಾಡಿದರು.
‘ಪಾಸ್ಪೋರ್ಟ್ ಆನ್ ಲೈನ್ ಅರ್ಜಿ ಸಲ್ಲಿಕೆ, ಆಧಾರ್ ನೋಂದಣಿ , ಸರ್ಕಾರದ ನಾನಾ ಇಲಾಖೆಗಳಿಗೆ ಅರ್ಜಿ, ಪಡಿತರ ಚೀಟಿ, ವಿಧವಾ ಪ್ರಮಾಣ ಪತ್ರ ಸೇರಿದಂತೆ ವಿವಿಧ ಸೇವೆಗಳು ದೊರೆಯಲಿದೆ. ಈ ಕೇಂದ್ರಕ್ಕೆ ದೊರೆಯುವ ಪ್ರತಿಕ್ರಿಯೆ ಆಧರಿಸಿ, ಮತ್ತೊಂದು ಕೇಂದ್ರ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.