<p><strong>ಮುಳಬಾಗಿಲು:</strong> ನಗರದ ಹೊರವಲಯದ ಎಸ್.ಡಿ.ಸಿ ಕಾಲೇಜಿನಲ್ಲಿ ಕರುನಾಡ ಕನ್ನಡ ಸಂಘದಿಂದ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ಜಯಂತಿ ಆಚರಿಸಲಾಯಿತು. </p>.<p>ಈ ವೇಳೆ ಮಕ್ಕಳಿಗೆ ಪ್ರಬಂಧ ಸೇರಿದಂತೆ ಇನ್ನಿತರ ಸ್ಪರ್ಧೆಗಳನ್ನು ಏರ್ಪಡಿಸಿ, ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. </p>.<p>ಎಸ್.ಡಿ.ಸಿ. ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ಉಷಾ ಗಂಗಾಧರ್ ಮಾತನಾಡಿ, ‘ಗಡಿನಾಡು ಪ್ರದೇಶಗಳಲ್ಲಿ ತೆಲುಗು ಭಾಷೆ ಹೆಚ್ಚಾಗಿ ಬಳಕೆ ಇದ್ದರೂ, ಕನ್ನಡ ನಾಡು, ನುಡಿ, ಭಾಷೆ ಮತ್ತು ಸಾಹಿತ್ಯಕ್ಕೆ ನಮ್ಮ ಜನ ಮೊದಲ ಪ್ರಾಶಸ್ತ್ಯ ನೀಡಿದ್ದಾರೆ. ಇದೇ ಕಾರಣಕ್ಕೆ ಕನ್ನಡ ಭಾಷೆ ಜೀವಂತವಾಗಿದೆ’ ಎಂದರು.</p>.<p>ಬಿ.ಎಸ್.ವೆಂಕಟಚಲಪತಿ ಮಾತನಾಡಿ ಮಾಸ್ತಿಯವರ ಸಾಹಿತ್ಯಕ್ಕೆ ಜ್ಞಾನಪೀಠ ಪ್ರಶಸ್ತಿ ಲಭಿಸಿರುವುದು ನಮ್ಮ ಜಿಲ್ಲೆಗೆ ಹೆಮ್ಮೆಯ ವಿಷಯ. ಇದೇ ರೀತಿ ಸಾಧನೆ ಮಾಡಲು ಯುವಕರು ಹಾಗೂ ಯುವ ಕವಿಗಳು ಶ್ರಮಿಸಬೇಕು ಎಂದು ಹೇಳಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯದರ್ಶಿ ಡಾ.ಶಂಕರಪ್ಪ ಹಾಗೂ ಬಿ.ಎಸ್. ವೆಂಕಟಾಚಲಪತಿ ಅವರು ಮಾಸ್ತಿ ವೆಂಕಟೇಶ ಅಯ್ಯಂಗಾರ್ ಬಗ್ಗೆ ಮಾತನಾಡಿದರು. </p>.<p>ಕರುನಾಡ ಕನ್ನಡ ಸಂಘದ ಅಧ್ಯಕ್ಷ ಈ.ಶ್ರೀನಿವಾಸಗೌಡ, ಅರುಣ್ಕುಮಾರ್, ಮುರಳಿಕೃಷ್ಣ, ನಂಜಾಮರಿ, ಎನ್.ದೀಕ್ಷಾ, ಅತ್ತಿಕುಂಟೆ ಎಸ್.ಸುಬ್ರಮಣಿ, ಸಿದ್ದಲಿಂಗಯ್ಯ, ಕೆ.ಸಿ.ವಿಜಯ್ಕುಮಾರ್, ಎಂ.ವಿ.ಸುಬ್ರಮಣಿ, ಚಂದ್ರಶೇಖರ್, ಚಂದ್ರಪ್ಪ, ಸೈಪ್ಉಲ್ಲಾ, ವಿವೇಕ್, ಬಾಬು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು:</strong> ನಗರದ ಹೊರವಲಯದ ಎಸ್.ಡಿ.ಸಿ ಕಾಲೇಜಿನಲ್ಲಿ ಕರುನಾಡ ಕನ್ನಡ ಸಂಘದಿಂದ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ಜಯಂತಿ ಆಚರಿಸಲಾಯಿತು. </p>.<p>ಈ ವೇಳೆ ಮಕ್ಕಳಿಗೆ ಪ್ರಬಂಧ ಸೇರಿದಂತೆ ಇನ್ನಿತರ ಸ್ಪರ್ಧೆಗಳನ್ನು ಏರ್ಪಡಿಸಿ, ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. </p>.<p>ಎಸ್.ಡಿ.ಸಿ. ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ಉಷಾ ಗಂಗಾಧರ್ ಮಾತನಾಡಿ, ‘ಗಡಿನಾಡು ಪ್ರದೇಶಗಳಲ್ಲಿ ತೆಲುಗು ಭಾಷೆ ಹೆಚ್ಚಾಗಿ ಬಳಕೆ ಇದ್ದರೂ, ಕನ್ನಡ ನಾಡು, ನುಡಿ, ಭಾಷೆ ಮತ್ತು ಸಾಹಿತ್ಯಕ್ಕೆ ನಮ್ಮ ಜನ ಮೊದಲ ಪ್ರಾಶಸ್ತ್ಯ ನೀಡಿದ್ದಾರೆ. ಇದೇ ಕಾರಣಕ್ಕೆ ಕನ್ನಡ ಭಾಷೆ ಜೀವಂತವಾಗಿದೆ’ ಎಂದರು.</p>.<p>ಬಿ.ಎಸ್.ವೆಂಕಟಚಲಪತಿ ಮಾತನಾಡಿ ಮಾಸ್ತಿಯವರ ಸಾಹಿತ್ಯಕ್ಕೆ ಜ್ಞಾನಪೀಠ ಪ್ರಶಸ್ತಿ ಲಭಿಸಿರುವುದು ನಮ್ಮ ಜಿಲ್ಲೆಗೆ ಹೆಮ್ಮೆಯ ವಿಷಯ. ಇದೇ ರೀತಿ ಸಾಧನೆ ಮಾಡಲು ಯುವಕರು ಹಾಗೂ ಯುವ ಕವಿಗಳು ಶ್ರಮಿಸಬೇಕು ಎಂದು ಹೇಳಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯದರ್ಶಿ ಡಾ.ಶಂಕರಪ್ಪ ಹಾಗೂ ಬಿ.ಎಸ್. ವೆಂಕಟಾಚಲಪತಿ ಅವರು ಮಾಸ್ತಿ ವೆಂಕಟೇಶ ಅಯ್ಯಂಗಾರ್ ಬಗ್ಗೆ ಮಾತನಾಡಿದರು. </p>.<p>ಕರುನಾಡ ಕನ್ನಡ ಸಂಘದ ಅಧ್ಯಕ್ಷ ಈ.ಶ್ರೀನಿವಾಸಗೌಡ, ಅರುಣ್ಕುಮಾರ್, ಮುರಳಿಕೃಷ್ಣ, ನಂಜಾಮರಿ, ಎನ್.ದೀಕ್ಷಾ, ಅತ್ತಿಕುಂಟೆ ಎಸ್.ಸುಬ್ರಮಣಿ, ಸಿದ್ದಲಿಂಗಯ್ಯ, ಕೆ.ಸಿ.ವಿಜಯ್ಕುಮಾರ್, ಎಂ.ವಿ.ಸುಬ್ರಮಣಿ, ಚಂದ್ರಶೇಖರ್, ಚಂದ್ರಪ್ಪ, ಸೈಪ್ಉಲ್ಲಾ, ವಿವೇಕ್, ಬಾಬು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>