<p><strong>ಕೆಜಿಎಫ್: </strong>ರಾಬರ್ಟ್ಸನ್ಪೇಟೆ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್ ಮತ್ತು ಬೆಂಬಲಿತ ಸದಸ್ಯರ ಅಭಿಪ್ರಾಯ ಪಡೆಯಲು ಶಾಸಕಿ ಎಂ.ರೂಪಕಲಾ ಕೋಲಾರದ ಹೊರವಲಯದ ರೆಸಾರ್ಟ್ನಲ್ಲಿ ಭಾನುವಾರ ಸಭೆ ನಡೆಸಿದರು.</p>.<p>ಸಭೆಯನ್ನು ಉದ್ದೇಶಿಸಿ ಮಾತನಾಡಿ, ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿಯಾಗಿದೆ. ಆಕಾಂಕ್ಷಿಗಳು ಕೂಡ ಇದ್ದಾರೆ. ಈ ನಿಟ್ಟಿನಲ್ಲಿ ಇತರ ಸದಸ್ಯರ ಅಭಿಪ್ರಾಯ ಮುಖ್ಯವಾಗಿದೆ. ಎಲ್ಲರ ಅಭಿಪ್ರಾಯದಂತೆ ಅಧಿಕಾರ ನೀಡಲಾಗುವುದು ಎಂದರು.</p>.<p>ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗುವವರು ನಗರದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡಬೇಕು. ಜನರ ಮತ್ತು ಪಕ್ಷದ ಹಿತಕ್ಕೆ ತಕ್ಕಂತೆ ವರ್ತಿಸಬೇಕು. ಸಮಸ್ಯೆ ಇದ್ದರೆ ನೇರವಾಗಿ ನನಗೆ ಹೇಳಬೇಕು. ಅಭಿವೃದ್ಧಿ ವಿಚಾರದಲ್ಲಿ ಎಲ್ಲ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಧಿಕಾರ ನಡೆಸಬೇಕು ಎಂದರು.</p>.<p>ಎಲ್ಲರ ಅಭಿಪ್ರಾಯವನ್ನು ಪಡೆದು, ಚುನಾವಣೆಗೆ ಮುನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುವುದು. ಸದಸ್ಯರು ಸಹಕರಿಸಬೇಕು ಎಂದು ಕೋರಿದರು.</p>.<p>ಸಭೆಯಲ್ಲಿ ಕಾಂಗ್ರೆಸ್ನ 13 ಸದಸ್ಯರು, ಜೆಡಿಎಸ್ನ 3 ಸದಸ್ಯರು ಮತ್ತು 8 ಪಕ್ಷೇತರರು ಇದ್ದರು. ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಮುಖಂಡರು ಕೋರಿದ್ದರು. ಬೇರೆ ಪಕ್ಷದವರು ನಮ್ಮನ್ನು ಸಂಪರ್ಕಿಸಿಲ್ಲ. ನಮ್ಮ ವಾರ್ಡ್ಗಳ ಅಭಿವೃದ್ಧಿಗೆ ಒತ್ತು ಕೊಟ್ಟರೆ ಬೆಂಬಲ ನೀಡುವುದಾಗಿ ತಿಳಿಸಿರುವುದಾಗಿ ಜೆಡಿಎಸ್ ಮುಖಂಡ ರಮೇಶ್ ಮಾಹಿತಿ ನೀಡಿದರು.</p>.<p>ಕಾಂಗ್ರೆಸ್ ಪಕ್ಷದಿಂದ ವಳ್ಳಲ್ ಮುನಿಸ್ವಾಮಿ, ರಮೇಶ್ ಕುಮಾರ್, ಮಾಣಿಕ್ಯಂ, ಜಯಪಾಲ್ ಆಕಾಂಕ್ಷಿಗಳಾಗಿದ್ದೇವೆ ಎಂದು ಶಾಸಕಿಗೆ ತಿಳಿಸಿದರು ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್: </strong>ರಾಬರ್ಟ್ಸನ್ಪೇಟೆ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್ ಮತ್ತು ಬೆಂಬಲಿತ ಸದಸ್ಯರ ಅಭಿಪ್ರಾಯ ಪಡೆಯಲು ಶಾಸಕಿ ಎಂ.ರೂಪಕಲಾ ಕೋಲಾರದ ಹೊರವಲಯದ ರೆಸಾರ್ಟ್ನಲ್ಲಿ ಭಾನುವಾರ ಸಭೆ ನಡೆಸಿದರು.</p>.<p>ಸಭೆಯನ್ನು ಉದ್ದೇಶಿಸಿ ಮಾತನಾಡಿ, ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿಯಾಗಿದೆ. ಆಕಾಂಕ್ಷಿಗಳು ಕೂಡ ಇದ್ದಾರೆ. ಈ ನಿಟ್ಟಿನಲ್ಲಿ ಇತರ ಸದಸ್ಯರ ಅಭಿಪ್ರಾಯ ಮುಖ್ಯವಾಗಿದೆ. ಎಲ್ಲರ ಅಭಿಪ್ರಾಯದಂತೆ ಅಧಿಕಾರ ನೀಡಲಾಗುವುದು ಎಂದರು.</p>.<p>ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗುವವರು ನಗರದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡಬೇಕು. ಜನರ ಮತ್ತು ಪಕ್ಷದ ಹಿತಕ್ಕೆ ತಕ್ಕಂತೆ ವರ್ತಿಸಬೇಕು. ಸಮಸ್ಯೆ ಇದ್ದರೆ ನೇರವಾಗಿ ನನಗೆ ಹೇಳಬೇಕು. ಅಭಿವೃದ್ಧಿ ವಿಚಾರದಲ್ಲಿ ಎಲ್ಲ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಧಿಕಾರ ನಡೆಸಬೇಕು ಎಂದರು.</p>.<p>ಎಲ್ಲರ ಅಭಿಪ್ರಾಯವನ್ನು ಪಡೆದು, ಚುನಾವಣೆಗೆ ಮುನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುವುದು. ಸದಸ್ಯರು ಸಹಕರಿಸಬೇಕು ಎಂದು ಕೋರಿದರು.</p>.<p>ಸಭೆಯಲ್ಲಿ ಕಾಂಗ್ರೆಸ್ನ 13 ಸದಸ್ಯರು, ಜೆಡಿಎಸ್ನ 3 ಸದಸ್ಯರು ಮತ್ತು 8 ಪಕ್ಷೇತರರು ಇದ್ದರು. ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಮುಖಂಡರು ಕೋರಿದ್ದರು. ಬೇರೆ ಪಕ್ಷದವರು ನಮ್ಮನ್ನು ಸಂಪರ್ಕಿಸಿಲ್ಲ. ನಮ್ಮ ವಾರ್ಡ್ಗಳ ಅಭಿವೃದ್ಧಿಗೆ ಒತ್ತು ಕೊಟ್ಟರೆ ಬೆಂಬಲ ನೀಡುವುದಾಗಿ ತಿಳಿಸಿರುವುದಾಗಿ ಜೆಡಿಎಸ್ ಮುಖಂಡ ರಮೇಶ್ ಮಾಹಿತಿ ನೀಡಿದರು.</p>.<p>ಕಾಂಗ್ರೆಸ್ ಪಕ್ಷದಿಂದ ವಳ್ಳಲ್ ಮುನಿಸ್ವಾಮಿ, ರಮೇಶ್ ಕುಮಾರ್, ಮಾಣಿಕ್ಯಂ, ಜಯಪಾಲ್ ಆಕಾಂಕ್ಷಿಗಳಾಗಿದ್ದೇವೆ ಎಂದು ಶಾಸಕಿಗೆ ತಿಳಿಸಿದರು ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>