<p><strong>ಕೋಲಾರ:</strong> ‘ಬಿಜೆಪಿಯಲ್ಲಿ ಸಮಸ್ಯೆಗಳು ಇರುವುದು ನಿಜ’ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಒಪ್ಪಿಕೊಂಡಿದ್ದಾರೆ.</p><p>ಒಂದು ಕುಟುಂಬವೆಂದ ಮೇಲೆ ಸಮಸ್ಯೆಗಳು ಇದ್ದೇ ಇರುತ್ತವೆ. ಬಿಜೆಪಿ ರಾಷ್ಟ್ರೀಯ ಪಕ್ಷ. ರಾಜ್ಯದಲ್ಲಿ ಎರಡು ಬಾರಿ ಆಡಳಿತ ನಡೆಸಿದೆ. ಇಂಥ ದೊಡ್ಡ ಪಕ್ಷದಲ್ಲಿ ಸಹಜವಾಗಿ ಸಮಸ್ಯೆ ಇದ್ದೇ ಇರುತ್ತೇವೆ. ಆ ಸಮಸ್ಯೆಗಳನ್ನು ಬಗೆಹರಿಸುವ ಉದ್ದೇಶ ದಿಂದಲೇ ಸಭೆಗಳು ನಡೆಯುತ್ತಿವೆ ಎಂದರು.</p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಮಗೆ ಹೈಕಮಾಂಡ್ ಎಂಬುದು ಇದೆ. ಜೊತೆಗೆ ಸಲಹೆ, ಸೂಚನೆ ಕೊಡಲು ಆರ್ಎಸ್ಎಸ್ನ ಹಲವು ಹಿರಿಯರು ಇದ್ದಾರೆ. ಅವರ ಮಟ್ಟದಲ್ಲಿ ಚರ್ಚೆ ನಡೆಯಲಿದೆ’ ಎಂದರು.</p><p>‘ಸಭೆಯಲ್ಲಿ ಈಗಾಗಲೇ ಹಲವಾರು ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ. ಆದರೆ, ಆಂತರಿಕ ವಿಚಾರಗಳನ್ನು ಮಾಧ್ಯಮದ ಮುಂದೆ ಚರ್ಚಿಸುವುದಿಲ್ಲ’ ಎಂದು ಹೇಳಿದರು.</p><p>‘ಅರವಿಂದ ಲಿಂಬಾವಳಿ ಹಾಗೂ ವಿಜಯೇಂದ್ರ ನಡುವೆ ಸಂಧಾನ ಸಭೆ ನಡೆದಿದೆ ಎಂಬುವುದು ಮಾಧ್ಯಮದ ಸೃಷ್ಟಿ’ ಎಂದರು.</p>.<p><strong>‘ಅಭಿಪ್ರಾಯ, ಭಿನ್ನಾಭಿಪ್ರಾಯಕ್ಕೆ ಅವಕಾಶವಿಲ್ಲ’</strong></p><p>ಚಿಕ್ಕಬಳ್ಳಾಪುರ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ನೇಮಕದ ವಿಚಾರದಲ್ಲಿ ಅಭಿಪ್ರಾಯ, ಭಿನ್ನಾಭಿಪ್ರಾಯಗಳಿಗೆ ಮಾನ್ಯತೆ ಇಲ್ಲ. ಅಂತಿಮವಾಗಿ ಹೈಕಮಾಂಡ್ ಏನು ಆಯ್ಕೆ ಮಾಡುತ್ತದೆಯೊ ಅದನ್ನು ಪಾಲಿಸುವುದು ಸಂಪ್ರದಾಯ ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದ್ದಾರೆ.</p><p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೇರೆ ಬೇರೆ ರಾಜ್ಯಗಳಲ್ಲಿಯೂ ಪಕ್ಷದ ಅಧ್ಯಕ್ಷರ ನೇಮಕ ಆಗುತ್ತಿದೆ. ಹೈಕಮಾಂಡ್ ನಿರ್ಧಾರವನ್ನು ಎಲ್ಲರೂ ಪಾಲಿಸುವರು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಬಿಜೆಪಿಯಲ್ಲಿ ಸಮಸ್ಯೆಗಳು ಇರುವುದು ನಿಜ’ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಒಪ್ಪಿಕೊಂಡಿದ್ದಾರೆ.</p><p>ಒಂದು ಕುಟುಂಬವೆಂದ ಮೇಲೆ ಸಮಸ್ಯೆಗಳು ಇದ್ದೇ ಇರುತ್ತವೆ. ಬಿಜೆಪಿ ರಾಷ್ಟ್ರೀಯ ಪಕ್ಷ. ರಾಜ್ಯದಲ್ಲಿ ಎರಡು ಬಾರಿ ಆಡಳಿತ ನಡೆಸಿದೆ. ಇಂಥ ದೊಡ್ಡ ಪಕ್ಷದಲ್ಲಿ ಸಹಜವಾಗಿ ಸಮಸ್ಯೆ ಇದ್ದೇ ಇರುತ್ತೇವೆ. ಆ ಸಮಸ್ಯೆಗಳನ್ನು ಬಗೆಹರಿಸುವ ಉದ್ದೇಶ ದಿಂದಲೇ ಸಭೆಗಳು ನಡೆಯುತ್ತಿವೆ ಎಂದರು.</p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಮಗೆ ಹೈಕಮಾಂಡ್ ಎಂಬುದು ಇದೆ. ಜೊತೆಗೆ ಸಲಹೆ, ಸೂಚನೆ ಕೊಡಲು ಆರ್ಎಸ್ಎಸ್ನ ಹಲವು ಹಿರಿಯರು ಇದ್ದಾರೆ. ಅವರ ಮಟ್ಟದಲ್ಲಿ ಚರ್ಚೆ ನಡೆಯಲಿದೆ’ ಎಂದರು.</p><p>‘ಸಭೆಯಲ್ಲಿ ಈಗಾಗಲೇ ಹಲವಾರು ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ. ಆದರೆ, ಆಂತರಿಕ ವಿಚಾರಗಳನ್ನು ಮಾಧ್ಯಮದ ಮುಂದೆ ಚರ್ಚಿಸುವುದಿಲ್ಲ’ ಎಂದು ಹೇಳಿದರು.</p><p>‘ಅರವಿಂದ ಲಿಂಬಾವಳಿ ಹಾಗೂ ವಿಜಯೇಂದ್ರ ನಡುವೆ ಸಂಧಾನ ಸಭೆ ನಡೆದಿದೆ ಎಂಬುವುದು ಮಾಧ್ಯಮದ ಸೃಷ್ಟಿ’ ಎಂದರು.</p>.<p><strong>‘ಅಭಿಪ್ರಾಯ, ಭಿನ್ನಾಭಿಪ್ರಾಯಕ್ಕೆ ಅವಕಾಶವಿಲ್ಲ’</strong></p><p>ಚಿಕ್ಕಬಳ್ಳಾಪುರ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ನೇಮಕದ ವಿಚಾರದಲ್ಲಿ ಅಭಿಪ್ರಾಯ, ಭಿನ್ನಾಭಿಪ್ರಾಯಗಳಿಗೆ ಮಾನ್ಯತೆ ಇಲ್ಲ. ಅಂತಿಮವಾಗಿ ಹೈಕಮಾಂಡ್ ಏನು ಆಯ್ಕೆ ಮಾಡುತ್ತದೆಯೊ ಅದನ್ನು ಪಾಲಿಸುವುದು ಸಂಪ್ರದಾಯ ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದ್ದಾರೆ.</p><p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೇರೆ ಬೇರೆ ರಾಜ್ಯಗಳಲ್ಲಿಯೂ ಪಕ್ಷದ ಅಧ್ಯಕ್ಷರ ನೇಮಕ ಆಗುತ್ತಿದೆ. ಹೈಕಮಾಂಡ್ ನಿರ್ಧಾರವನ್ನು ಎಲ್ಲರೂ ಪಾಲಿಸುವರು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>