<p><strong>ಬೇತಮಂಗಲ</strong>: ಸುಮಾರು 12 ದಿನಗಳಿಂದ ನಡೆಯುತ್ತಿದ್ದ ಮೇಲುಪಲ್ಲಿ ಗಂಗಮಾಂಭ ದೇವಿ ಜಾತ್ರಾ ಮಹೋತ್ಸವದ ಸಂಪನ್ನವಾಗಿ ತೆರೆ ಕಂಡಿತು.</p>.<p>ಜಾತ್ರೆ ಅಂಗವಾಗಿ ಸೋಮವಾರ ರಾತ್ರಿ ಕರಗ ಮಹೋತ್ಸವ ಹಾಗೂ ಉತ್ಸವ ಮೂರ್ತಿ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು. ಕರಗ ಅಂಗವಾಗಿ ಸೋಮವಾರ ಬೆಳಗ್ಗೆಯಿಂದ ದೇವಸ್ಥಾನದಲ್ಲಿ ವಿವಿಧ ಪೂಜೆ, ಅಭಿಷೇಕ, ಮಹಾಮಂಗಳಾರತಿ, ಅನ್ನದಾನ ಹಾಗೂ ಇತರೆ ಕಾರ್ಯಕ್ರಮಗಳು ನಡೆದವು.</p>.<p>ದೇವಾಲಯವನ್ನು ವಿವಿಧ ಹೂಗಳಿಂದ ಅಲಂಕರಿಸಲಾಗಿತ್ತು. ಸುತ್ತಮುತ್ತಲಿನ ಸಾವಿರಾರು ಮಂದಿ ಭಕ್ತರು ಕರಗ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.</p>.<p>ಸೋಮವಾರ ಮಧ್ಯಾಹ್ನ ಆರಂಭವಾದ ಉತ್ಸವ ಮೂರ್ತಿಗಳ ಮೆರವಣಿಗೆ ಹಾಗೂ ಕರಗ ಹೊತ್ತ ಪೂಜಾರಿ ಸುತ್ತಮುತ್ತಲಿನ ಗ್ರಾಮಗಳಿಗೆ ತೆರಳಿ ಪೂಜೆ ಸ್ವೀಕರಿಸಿದರು. ನಂತರ ರಾತ್ರಿ 11 ಗಂಟೆಗೆ ಕರಗ ಹೊತ್ತ ಪೂಜಾರಿ ಅಗ್ನಿಗುಂಡ ಪ್ರವೇಶಿಸಿದರು. ಸಾವಿರಾರು ಭಕ್ತರು ಅಗ್ನಿಕೊಂಡ ಪ್ರವೇಶಿಸಿ ಹರಕೆ ತೀರಿಸಿದರು.</p>.<p>ಗ್ರಾಮ ಪಂಚಾಯಿತಿ ಸದಸ್ಯ ಪುಷ್ಪ ಜಯಪ್ರಕಾಶ್ ನಾಯ್ಡು, ರಾಜೇಂದ್ರ, ಗಜೇಂದ್ರ ರೆಡ್ಡಿ, ಎಸ್.ವಿ.ಜಿ.ಸುಬ್ರಮಣಿ, ರವಿಚಂದ್ರನ್, ಶಬರೀಶ್, ವಿನಯ್ ಕುಮಾರ್, ಆನಂದ ಗೌಡ, ಸ್ಕೂಲ್ ವೆಂಕಟೇಶಪ್ಪ, ಮಹೇಂದ್ರ, ಅರುಣ್ ರೆಡ್ಡಿ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇತಮಂಗಲ</strong>: ಸುಮಾರು 12 ದಿನಗಳಿಂದ ನಡೆಯುತ್ತಿದ್ದ ಮೇಲುಪಲ್ಲಿ ಗಂಗಮಾಂಭ ದೇವಿ ಜಾತ್ರಾ ಮಹೋತ್ಸವದ ಸಂಪನ್ನವಾಗಿ ತೆರೆ ಕಂಡಿತು.</p>.<p>ಜಾತ್ರೆ ಅಂಗವಾಗಿ ಸೋಮವಾರ ರಾತ್ರಿ ಕರಗ ಮಹೋತ್ಸವ ಹಾಗೂ ಉತ್ಸವ ಮೂರ್ತಿ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು. ಕರಗ ಅಂಗವಾಗಿ ಸೋಮವಾರ ಬೆಳಗ್ಗೆಯಿಂದ ದೇವಸ್ಥಾನದಲ್ಲಿ ವಿವಿಧ ಪೂಜೆ, ಅಭಿಷೇಕ, ಮಹಾಮಂಗಳಾರತಿ, ಅನ್ನದಾನ ಹಾಗೂ ಇತರೆ ಕಾರ್ಯಕ್ರಮಗಳು ನಡೆದವು.</p>.<p>ದೇವಾಲಯವನ್ನು ವಿವಿಧ ಹೂಗಳಿಂದ ಅಲಂಕರಿಸಲಾಗಿತ್ತು. ಸುತ್ತಮುತ್ತಲಿನ ಸಾವಿರಾರು ಮಂದಿ ಭಕ್ತರು ಕರಗ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.</p>.<p>ಸೋಮವಾರ ಮಧ್ಯಾಹ್ನ ಆರಂಭವಾದ ಉತ್ಸವ ಮೂರ್ತಿಗಳ ಮೆರವಣಿಗೆ ಹಾಗೂ ಕರಗ ಹೊತ್ತ ಪೂಜಾರಿ ಸುತ್ತಮುತ್ತಲಿನ ಗ್ರಾಮಗಳಿಗೆ ತೆರಳಿ ಪೂಜೆ ಸ್ವೀಕರಿಸಿದರು. ನಂತರ ರಾತ್ರಿ 11 ಗಂಟೆಗೆ ಕರಗ ಹೊತ್ತ ಪೂಜಾರಿ ಅಗ್ನಿಗುಂಡ ಪ್ರವೇಶಿಸಿದರು. ಸಾವಿರಾರು ಭಕ್ತರು ಅಗ್ನಿಕೊಂಡ ಪ್ರವೇಶಿಸಿ ಹರಕೆ ತೀರಿಸಿದರು.</p>.<p>ಗ್ರಾಮ ಪಂಚಾಯಿತಿ ಸದಸ್ಯ ಪುಷ್ಪ ಜಯಪ್ರಕಾಶ್ ನಾಯ್ಡು, ರಾಜೇಂದ್ರ, ಗಜೇಂದ್ರ ರೆಡ್ಡಿ, ಎಸ್.ವಿ.ಜಿ.ಸುಬ್ರಮಣಿ, ರವಿಚಂದ್ರನ್, ಶಬರೀಶ್, ವಿನಯ್ ಕುಮಾರ್, ಆನಂದ ಗೌಡ, ಸ್ಕೂಲ್ ವೆಂಕಟೇಶಪ್ಪ, ಮಹೇಂದ್ರ, ಅರುಣ್ ರೆಡ್ಡಿ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>