ಬೆಸ್ಕಾಂ ಸಿಬ್ಬಂದಿ ಶಾಲಾ ಆವರಣ ದಲ್ಲಿ ವಿದ್ಯುತ್ ಕಂಬಗಳನ್ನು ಬದಲಾಯಿಸುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಶಾಲೆಯ ಆವರಣದಲ್ಲಿ ಊಟ ಮಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ಇದ್ದಕ್ಕಿಂದಂತೆ ಎರಡು ವಿದ್ಯುತ್ ಕಂಬಗಳು ಮುರಿದು ಬಿದ್ದವು. 7ನೇ ತರಗತಿ ವಿದ್ಯಾರ್ಥಿಗಳಾದ ದಿನೇಶ್, ಭರತ್, ಚರಣ್ತೀವ್ರವಾಗಿ ಗಾಯಗೊಂಡಿದ್ದಾರೆ. ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯವೇ ಘಟನೆಗೆ ಕಾರಣವೆಂದು ಪೋಷಕರು ಆರೋಪಿಸಿದ್ದಾರೆ.