ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯದಲ್ಲಿದ್ದ ಮಾತ್ರಕ್ಕೆ ಮಾಡಾಳ್ ವಿರೂಪಾಕ್ಷಪ್ಪ ಹೇಗೆ ಕೆಟ್ಟವರು?: ಮುನಿರತ್ನ

Last Updated 11 ಮಾರ್ಚ್ 2023, 14:52 IST
ಅಕ್ಷರ ಗಾತ್ರ

ಕೋಲಾರ: ‘ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಪುತ್ರ ತಪ್ಪು ಮಾಡಿದ್ದಾನೆಯೋ ಇಲ್ಲವೋ ಎಂಬುದನ್ನು ನ್ಯಾಯಾಲಯ ನಿರ್ಧರಿಸಲಿದೆ. ರಾಜಕಾರಣದಲ್ಲಿದ್ದ ಮಾತ್ರಕ್ಕೆ ಅಪ್ಪ ಹೇಗೆ ಕೆಟ್ಟವರು ಆಗುತ್ತಾರೆ? ತನಿಖೆ ನಡೆದು ತೀರ್ಪು ಹೊರಬೀಳಲಿ. ತಪ್ಪು ಮಾಡಿದ್ದರೆ ಶಿಕ್ಷೆಯಾಗುತ್ತದೆ’ ಎಂದು ಸಚಿವ ಮುನಿರತ್ನ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಜೈಲಿಗೆ ಹೋಗಿ ಏನೋ ಗೆದ್ದವರಂತೆ ವಿಮಾನ ನಿಲ್ದಾಣದಿಂದ ಮೆರವಣಿಗೆ ಬಂದವರು ಈಗ ಹೇಗಿದ್ದಾರೆ ಎಂಬುದನ್ನು ನಾವು ನೋಡುತ್ತಿದ್ದೇವೆ. ಮಾಡಾಳ್‌ ಪ್ರಕರಣ ತನಿಖೆ ಹಂತದಲ್ಲಿದ್ದು, ನಾವು ಹೇಗೆ ಪ್ರತಿಕ್ರಿಯಿಸಲು ಸಾಧ್ಯ’ ಎಂದು ಪ್ರಶ್ನಿಸಿದರು.

ಮಾಡಾಳ್‌ ವಿರೂಪಾಕ್ಷಪ್ಪ ಪ್ರಕರಣದಿಂದ ಬಿಜೆಪಿಗೆ ಹಿನ್ನಡೆ ಆಗಲಿದೆಯೇ ಎಂಬುದಕ್ಕೆ ಅವರು ಈ ರೀತಿ ಪ್ರತಿಕ್ರಿಯಿಸಿದರು.

ಕುಂಕುಮ ಇಟ್ಟುಕೊಳ್ಳದ ಮಹಿಳೆಯನ್ನು ಸಂಸದ ಎಸ್‌.ಮುನಿಸ್ವಾಮಿ ನಿಂದಿಸಿದ್ದರ ಕುರಿತು, ‘ನನಗೆ ಈ ವಿಚಾರವೇ ಗೊತ್ತಿಲ್ಲ. ವಿಷಯ ತಿಳಿದುಕೊಳ್ಳುತ್ತೇನೆ’ ಎಂದರು.

ಸಚಿವರಾದ ನಾರಾಯಣಗೌಡ, ಸೋಮಣ್ಣ ಪಕ್ಷ ತೊರೆಯುವ ವಿಚಾರ ಕುರಿತು, ‘ಮಾಧ್ಯಮದವರು ಈ ವಿಚಾರವಾಗಿ ಮೂರು ದಿನ ಸುದ್ದಿ ಪ್ರಕಟಿಸುವುದನ್ನು ನಿಲ್ಲಿಸಿದರೆ ಅವರು ಎಲ್ಲೂ ಹೋಗುವುದಿಲ್ಲ. ಸೋಮಣ್ಣ ಸ್ವಂತ ಶಕ್ತಿ ಮೇಲೆ ರಾಜಕೀಯ ಮಾಡಿಕೊಂಡು ಬಂದಿದ್ದಾರೆ’ ಎಂದು ಹೇಳಿದರು.

‘ಚುನಾವಣಾ ಪ್ರಚಾರ ಸಮಿತಿಯಲ್ಲಿ ನನಗೂ ಸ್ಥಾನ ನೀಡಿಲ್ಲ. ನನ್ನ ಜೊತೆಯಲ್ಲಿ ಬಿಜೆಪಿ ಸೇರಿದ ಕೆಲವರಿಗೆ ಅವಕಾಶ ಸಿಕ್ಕಿದೆ. ಆದರೆ, ಚುನಾವಣೆಯೇ ಅಂತಿಮವಲ್ಲ; ಮುಂದಿನ ದಿನಗಳಲ್ಲಿ ಸ್ಥಾನಮಾನ ಸಿಗಲಿದ್ದು, ಪಕ್ಷ ಯಾರನ್ನೂ ಕೈಬಿಡಲ್ಲ’ ಎಂದು ನುಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT