<p><strong>ಕೋಲಾರ:</strong> ‘ಮತಗಳ್ಳತನ ವಿಚಾರದಲ್ಲಿ ಕೆ.ಎನ್.ರಾಜಣ್ಣ ಮಾತಿನಲ್ಲಿ ಸತ್ಯವಿದ್ದರೂ ಆ ರೀತಿ ಅವರು ಹೇಳಬಾರದಿತ್ತು. ನಮ್ಮ ನಾಯಕರು ಒಂದು ವಿಚಾರದಲ್ಲಿ ನಿಲುವು ತೆಗೆದುಕೊಂಡಾಗ ಅದಕ್ಕೆ ಬದ್ಧವಾಗಿರಬೇಕು, ಇಲ್ಲವೇ ದೂರ ಇರಬೇಕು’ ಎಂದು ಕೋಲಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೊತ್ತೂರು ಜಿ.ಮಂಜುನಾಥ್ ಹೇಳಿದರು.</p>.<p>ತಾಲ್ಲೂಕಿನ ವೇಮಗಲ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಹಕಾರ ಸಚಿವರಾಗಿದ್ದ ರಾಜಣ್ಣ ಅವರನ್ನು ಯಾವ ಕಾರಣಕ್ಕೆ ಸಚಿವ ಸಂಪುಟದಿಂದ ತೆಗೆದು ಹಾಕಲಾಗಿದೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ, ಅವರಂಥ ನಾಯಕರನ್ನು ಸಚಿವ ಸಂಪುಟದಿಂದ ತೆಗೆಯಬಾರದಿತ್ತು ಎಂಬುದು ನನ್ನ ಅಭಿಪ್ರಾಯ. ಆ ಬಗ್ಗೆ ನನಗೂ ಬೇಸರವಿದೆ. ತಪ್ಪೇ ಮಾಡಿದ್ದರೂ ಕರೆದು ಮಾತನಾಡಿಸಿ ಬುದ್ಧಿವಾದ ಹೇಳಿ ಸರಿಪಡಿಸುವ ಪ್ರಯತ್ನ ಮಾಡಬಹುದಿತ್ತು. ತಾಯಿ ಹಾಲು ಕುಡಿಯುವಾಗ ಮಗು ಒಮ್ಮೊಮ್ಮೆ ಕಚ್ಚುತ್ತದೆ, ಹಾಗಂತ ಮಗುವಿಗೆ ಹೊಡೆಯುವುದು ಸರಿ ಅಲ್ಲ’ ಎಂದರು.</p>.<p>‘ರಾಜಣ್ಣ ಪರಿಶಿಷ್ಟ ಪಂಗಡದ ಹಿರಿಯ ನಾಯಕರಾಗಿದ್ದು, ಮಧುಗಿರಿಯಂಥ ಸಾಮಾನ್ಯ ಕ್ಷೇತ್ರದಲ್ಲಿ ಗೆದ್ದಿದ್ದಾರೆ. ಅದು ಸುಲಭದ ಮಾತಲ್ಲ. ನಾನು ಕೂಡ ಕೋಲಾರ ಸಾಮಾನ್ಯ ಕ್ಷೇತ್ರಕ್ಕೆ ಬಂದು ಗೆದ್ದಿದ್ದು ಅಷ್ಟೇನೂ ಸುಲಭವಾಗಿರಲಿಲ್ಲ. ಜನರ ಪ್ರೀತಿ ವಿಶ್ವಾಸವಿದ್ದಾಗ ಮಾತ್ರ ಗೆಲ್ಲಬಹುದು’ ಎಂದು ತಿಳಿಸಿದರು.</p>.<p>‘ಮತಗಳ್ಳತನ ನಡೆದಿರುವುದು ನಿಜ. ಒಬ್ಬೊಬ್ಬರು ನಾಲ್ಕೈದು ಕಡೆ ಮತ ಇಟ್ಟುಕೊಳ್ಳುವುದು ಎಷ್ಟು ಸರಿ? ಬಿಜೆಪಿಗೆ ಮತ ಹಾಕಲು ಈ ರೀತಿ ಮಾಡಲಾಗುತ್ತಿದೆ. ಬೆಂಗಳೂರಿನ ಎಲ್ಲಾ ಕ್ಷೇತ್ರಗಳಲ್ಲಿ ಈ ರೀತಿ ಮಾಡಲಾಗುತ್ತಿದೆ. ರಾಹುಲ್ ಗಾಂಧಿ ಈ ಬಗ್ಗೆ ದಾಖಲೆ ಸಂಗ್ರಹಿಸಿದ್ದಾರೆ’ ಎಂದರು.</p>.<p>‘ಕೋಲಾರ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ದೊಡ್ಡವಲ್ಲಭಿ, ನರಸಾಪುರ, ವೇಮಗಲ್ ಸೇರಿದಂತೆ ಹಲವು ರಸ್ತೆಗಳ ಅಭಿವೃದ್ಧಿ ಕಾಮಗಾರಿ ನಡೆಸಲಾಗಿದೆ. ಗ್ಯಾರಂಟಿಗಳನ್ನು ನೀಡಿದ್ದೇವೆ. ಇನ್ನೂ ಮೂರು ವರ್ಷ ಅಧಿಕಾರದಲ್ಲಿ ಇರುತ್ತೇವೆ. ಕೆಲಸ ಮಾಡಿದ್ದರೆ ಮಾತ್ರ ಮುಂದಿನ ಚುನಾವಣೆಯಲ್ಲಿ ಮತ ಹಾಕಿ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಮತಗಳ್ಳತನ ವಿಚಾರದಲ್ಲಿ ಕೆ.ಎನ್.ರಾಜಣ್ಣ ಮಾತಿನಲ್ಲಿ ಸತ್ಯವಿದ್ದರೂ ಆ ರೀತಿ ಅವರು ಹೇಳಬಾರದಿತ್ತು. ನಮ್ಮ ನಾಯಕರು ಒಂದು ವಿಚಾರದಲ್ಲಿ ನಿಲುವು ತೆಗೆದುಕೊಂಡಾಗ ಅದಕ್ಕೆ ಬದ್ಧವಾಗಿರಬೇಕು, ಇಲ್ಲವೇ ದೂರ ಇರಬೇಕು’ ಎಂದು ಕೋಲಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೊತ್ತೂರು ಜಿ.ಮಂಜುನಾಥ್ ಹೇಳಿದರು.</p>.<p>ತಾಲ್ಲೂಕಿನ ವೇಮಗಲ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಹಕಾರ ಸಚಿವರಾಗಿದ್ದ ರಾಜಣ್ಣ ಅವರನ್ನು ಯಾವ ಕಾರಣಕ್ಕೆ ಸಚಿವ ಸಂಪುಟದಿಂದ ತೆಗೆದು ಹಾಕಲಾಗಿದೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ, ಅವರಂಥ ನಾಯಕರನ್ನು ಸಚಿವ ಸಂಪುಟದಿಂದ ತೆಗೆಯಬಾರದಿತ್ತು ಎಂಬುದು ನನ್ನ ಅಭಿಪ್ರಾಯ. ಆ ಬಗ್ಗೆ ನನಗೂ ಬೇಸರವಿದೆ. ತಪ್ಪೇ ಮಾಡಿದ್ದರೂ ಕರೆದು ಮಾತನಾಡಿಸಿ ಬುದ್ಧಿವಾದ ಹೇಳಿ ಸರಿಪಡಿಸುವ ಪ್ರಯತ್ನ ಮಾಡಬಹುದಿತ್ತು. ತಾಯಿ ಹಾಲು ಕುಡಿಯುವಾಗ ಮಗು ಒಮ್ಮೊಮ್ಮೆ ಕಚ್ಚುತ್ತದೆ, ಹಾಗಂತ ಮಗುವಿಗೆ ಹೊಡೆಯುವುದು ಸರಿ ಅಲ್ಲ’ ಎಂದರು.</p>.<p>‘ರಾಜಣ್ಣ ಪರಿಶಿಷ್ಟ ಪಂಗಡದ ಹಿರಿಯ ನಾಯಕರಾಗಿದ್ದು, ಮಧುಗಿರಿಯಂಥ ಸಾಮಾನ್ಯ ಕ್ಷೇತ್ರದಲ್ಲಿ ಗೆದ್ದಿದ್ದಾರೆ. ಅದು ಸುಲಭದ ಮಾತಲ್ಲ. ನಾನು ಕೂಡ ಕೋಲಾರ ಸಾಮಾನ್ಯ ಕ್ಷೇತ್ರಕ್ಕೆ ಬಂದು ಗೆದ್ದಿದ್ದು ಅಷ್ಟೇನೂ ಸುಲಭವಾಗಿರಲಿಲ್ಲ. ಜನರ ಪ್ರೀತಿ ವಿಶ್ವಾಸವಿದ್ದಾಗ ಮಾತ್ರ ಗೆಲ್ಲಬಹುದು’ ಎಂದು ತಿಳಿಸಿದರು.</p>.<p>‘ಮತಗಳ್ಳತನ ನಡೆದಿರುವುದು ನಿಜ. ಒಬ್ಬೊಬ್ಬರು ನಾಲ್ಕೈದು ಕಡೆ ಮತ ಇಟ್ಟುಕೊಳ್ಳುವುದು ಎಷ್ಟು ಸರಿ? ಬಿಜೆಪಿಗೆ ಮತ ಹಾಕಲು ಈ ರೀತಿ ಮಾಡಲಾಗುತ್ತಿದೆ. ಬೆಂಗಳೂರಿನ ಎಲ್ಲಾ ಕ್ಷೇತ್ರಗಳಲ್ಲಿ ಈ ರೀತಿ ಮಾಡಲಾಗುತ್ತಿದೆ. ರಾಹುಲ್ ಗಾಂಧಿ ಈ ಬಗ್ಗೆ ದಾಖಲೆ ಸಂಗ್ರಹಿಸಿದ್ದಾರೆ’ ಎಂದರು.</p>.<p>‘ಕೋಲಾರ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ದೊಡ್ಡವಲ್ಲಭಿ, ನರಸಾಪುರ, ವೇಮಗಲ್ ಸೇರಿದಂತೆ ಹಲವು ರಸ್ತೆಗಳ ಅಭಿವೃದ್ಧಿ ಕಾಮಗಾರಿ ನಡೆಸಲಾಗಿದೆ. ಗ್ಯಾರಂಟಿಗಳನ್ನು ನೀಡಿದ್ದೇವೆ. ಇನ್ನೂ ಮೂರು ವರ್ಷ ಅಧಿಕಾರದಲ್ಲಿ ಇರುತ್ತೇವೆ. ಕೆಲಸ ಮಾಡಿದ್ದರೆ ಮಾತ್ರ ಮುಂದಿನ ಚುನಾವಣೆಯಲ್ಲಿ ಮತ ಹಾಕಿ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>