ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಮಾತನಾಡಿ, ‘ತಾಲ್ಲೂಕಿನ ಗೌನಿಪಲ್ಲಿ ಸಹಕಾರ ಸಂಘದ ವ್ಯಾಪ್ತಿಯಲ್ಲಿ ₹10.80 ಕೋಟಿ, ಕಸಬಾ ವ್ಯಾಪ್ತಿಯಲ್ಲಿ ₹1.60 ಕೋಟಿ ಹಾಗೂ ಯಲ್ದೂರು ಸಹಕಾರ ಸಂಘದ ವ್ಯಾಪ್ತಿಯಲ್ಲಿ ₹2.ಕೋಟಿ ಬಡ್ಡಿ ರಹಿತ ಸಾಲ ನೀಡಲಾಗಿದೆ. ಲಕ್ಷ್ಮೀಪುರ, ಸೋಮಯಾಜಲಹಳ್ಳಿ ಭಾಗದ ಸ್ತ್ರೀ ಶಕ್ತಿ ಸಂಘಗಳು ಹಾಗೂ ರೈತರಿಗೆ ಬಡ್ಡಿ ರಹಿತ ಸಾಲ ನೀಡಲಾಗುವುದು. ಮಧ್ಯವರ್ತಿಗಳ ಹಾವಳಿ ಇಲ್ಲದೆ, ಕಮೀಷನ್ ರಹಿತವಾಗಿ, ಅತ್ಯಂತ ಪಾರದರ್ಶಕವಾಗಿ ಸಾಲ ವಿತರಣೆ ಮಾಡಲಾಗಿದೆ’ ಎಂದು
ಹೇಳಿದರು.