<p>ಶ್ರೀನಿವಾಸಪುರ: ಡಿಸಿಸಿ ಬ್ಯಾಂಕ್ ಯಾರಪ್ಪನ ಆಸ್ತಿಯೂ ಅಲ್ಲ. ಅದು ಸಾರ್ವಜನಕರು ಬೆಳೆಸಿದ ಒಂದು ಸಂಸ್ಥೆ. ಬಡವರ ಪಾಲಿಗೆ ಕಲ್ಪವೃಕ್ಷವಾಗಿ ಬೆಳೆಯುತ್ತಿದೆ. ಯಾರೇ ಆಗಲಿ ಬ್ಯಾಂಕ್ ಕುರಿತು ಲಘುವಾಗಿ ಮಾತನಾಡುವುದು ಸರಿಯಲ್ಲ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.</p>.<p>ಪಟ್ಟಣದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ತಾಲ್ಲೂಕಿನ ಕೋಡಿಪಲ್ಲಿ ಹಾಗೂ ಅಡ್ಡಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ 87 ಸ್ವ ಸಹಾಯ ಸಂಘಗಳಿಗೆ ₹4.30 ಕೋಟಿ ಶೂನ್ಯ ಬಡ್ಡಿ ಸಾಲ ವಿತರಿಸಿ ಅವರು ಮಾತನಾಡಿದರು.</p>.<p>‘ಕ್ಷೇತ್ರದಲ್ಲಿ ಪಕ್ಷ ಅಥವಾ ಜಾತಿ ಭೇದವಿಲ್ಲದೆ ಪ್ರತಿ ಕುಟುಂಬಕ್ಕೂ ಸ್ವಾವಲಂಬಿ ಜೀವನ ನಡೆಸಲು ಅಗತ್ಯವಾದ ಆರ್ಥಿಕ ನೆರವು, ವಾಸಿಸಲು ಮನೆ, ಭೂರಹಿತರಿಗೆ ಭೂಮಿ ನೀಡುವುದರ ಮೂಲಕ ಮಾದರಿ ಕ್ಷೇತ್ರವನ್ನಾಗಿ ಮಾಡುತ್ತಿದ್ದೇನೆ’ ಎಂದು ಹೇಳಿದರು.</p>.<p>ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಮಾತನಾಡಿ, ‘ತಾಲ್ಲೂಕಿನ ಗೌನಿಪಲ್ಲಿ ಸಹಕಾರ ಸಂಘದ ವ್ಯಾಪ್ತಿಯಲ್ಲಿ ₹10.80 ಕೋಟಿ, ಕಸಬಾ ವ್ಯಾಪ್ತಿಯಲ್ಲಿ ₹1.60 ಕೋಟಿ ಹಾಗೂ ಯಲ್ದೂರು ಸಹಕಾರ ಸಂಘದ ವ್ಯಾಪ್ತಿಯಲ್ಲಿ ₹2.ಕೋಟಿ ಬಡ್ಡಿ ರಹಿತ ಸಾಲ ನೀಡಲಾಗಿದೆ. ಲಕ್ಷ್ಮೀಪುರ, ಸೋಮಯಾಜಲಹಳ್ಳಿ ಭಾಗದ ಸ್ತ್ರೀ ಶಕ್ತಿ ಸಂಘಗಳು ಹಾಗೂ ರೈತರಿಗೆ ಬಡ್ಡಿ ರಹಿತ ಸಾಲ ನೀಡಲಾಗುವುದು. ಮಧ್ಯವರ್ತಿಗಳ ಹಾವಳಿ ಇಲ್ಲದೆ, ಕಮೀಷನ್ ರಹಿತವಾಗಿ, ಅತ್ಯಂತ ಪಾರದರ್ಶಕವಾಗಿ ಸಾಲ ವಿತರಣೆ ಮಾಡಲಾಗಿದೆ’ ಎಂದು<br />ಹೇಳಿದರು.</p>.<p>ಡಿಸಿಸಿ ಬ್ಯಾಂಕ್ ನಿರ್ದೇಶಕ ವೆಂಕಟರೆಡ್ಡಿ, ಸಹಕಾರ ಸಂಘಗಳ ಅಧ್ಯಕ್ಷರಾದ ಕೃಷ್ಣಾರೆಡ್ಡಿ, ನಾರಾಯಣಸ್ವಾಮಿ, ಬೈಚೇಗೌಡ, ಸತ್ಯನಾರಾಯಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀನಿವಾಸಪುರ: ಡಿಸಿಸಿ ಬ್ಯಾಂಕ್ ಯಾರಪ್ಪನ ಆಸ್ತಿಯೂ ಅಲ್ಲ. ಅದು ಸಾರ್ವಜನಕರು ಬೆಳೆಸಿದ ಒಂದು ಸಂಸ್ಥೆ. ಬಡವರ ಪಾಲಿಗೆ ಕಲ್ಪವೃಕ್ಷವಾಗಿ ಬೆಳೆಯುತ್ತಿದೆ. ಯಾರೇ ಆಗಲಿ ಬ್ಯಾಂಕ್ ಕುರಿತು ಲಘುವಾಗಿ ಮಾತನಾಡುವುದು ಸರಿಯಲ್ಲ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.</p>.<p>ಪಟ್ಟಣದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ತಾಲ್ಲೂಕಿನ ಕೋಡಿಪಲ್ಲಿ ಹಾಗೂ ಅಡ್ಡಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ 87 ಸ್ವ ಸಹಾಯ ಸಂಘಗಳಿಗೆ ₹4.30 ಕೋಟಿ ಶೂನ್ಯ ಬಡ್ಡಿ ಸಾಲ ವಿತರಿಸಿ ಅವರು ಮಾತನಾಡಿದರು.</p>.<p>‘ಕ್ಷೇತ್ರದಲ್ಲಿ ಪಕ್ಷ ಅಥವಾ ಜಾತಿ ಭೇದವಿಲ್ಲದೆ ಪ್ರತಿ ಕುಟುಂಬಕ್ಕೂ ಸ್ವಾವಲಂಬಿ ಜೀವನ ನಡೆಸಲು ಅಗತ್ಯವಾದ ಆರ್ಥಿಕ ನೆರವು, ವಾಸಿಸಲು ಮನೆ, ಭೂರಹಿತರಿಗೆ ಭೂಮಿ ನೀಡುವುದರ ಮೂಲಕ ಮಾದರಿ ಕ್ಷೇತ್ರವನ್ನಾಗಿ ಮಾಡುತ್ತಿದ್ದೇನೆ’ ಎಂದು ಹೇಳಿದರು.</p>.<p>ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಮಾತನಾಡಿ, ‘ತಾಲ್ಲೂಕಿನ ಗೌನಿಪಲ್ಲಿ ಸಹಕಾರ ಸಂಘದ ವ್ಯಾಪ್ತಿಯಲ್ಲಿ ₹10.80 ಕೋಟಿ, ಕಸಬಾ ವ್ಯಾಪ್ತಿಯಲ್ಲಿ ₹1.60 ಕೋಟಿ ಹಾಗೂ ಯಲ್ದೂರು ಸಹಕಾರ ಸಂಘದ ವ್ಯಾಪ್ತಿಯಲ್ಲಿ ₹2.ಕೋಟಿ ಬಡ್ಡಿ ರಹಿತ ಸಾಲ ನೀಡಲಾಗಿದೆ. ಲಕ್ಷ್ಮೀಪುರ, ಸೋಮಯಾಜಲಹಳ್ಳಿ ಭಾಗದ ಸ್ತ್ರೀ ಶಕ್ತಿ ಸಂಘಗಳು ಹಾಗೂ ರೈತರಿಗೆ ಬಡ್ಡಿ ರಹಿತ ಸಾಲ ನೀಡಲಾಗುವುದು. ಮಧ್ಯವರ್ತಿಗಳ ಹಾವಳಿ ಇಲ್ಲದೆ, ಕಮೀಷನ್ ರಹಿತವಾಗಿ, ಅತ್ಯಂತ ಪಾರದರ್ಶಕವಾಗಿ ಸಾಲ ವಿತರಣೆ ಮಾಡಲಾಗಿದೆ’ ಎಂದು<br />ಹೇಳಿದರು.</p>.<p>ಡಿಸಿಸಿ ಬ್ಯಾಂಕ್ ನಿರ್ದೇಶಕ ವೆಂಕಟರೆಡ್ಡಿ, ಸಹಕಾರ ಸಂಘಗಳ ಅಧ್ಯಕ್ಷರಾದ ಕೃಷ್ಣಾರೆಡ್ಡಿ, ನಾರಾಯಣಸ್ವಾಮಿ, ಬೈಚೇಗೌಡ, ಸತ್ಯನಾರಾಯಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>