‘ಆಸ್ಪತ್ರೆಗಳಲ್ಲಿ ಹಾಸಿಗೆ, ಆಮ್ಲಜನಕದ ಕೊರತೆಯಿಂದ ಸೋಂಕಿತರು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ನೂರಾರು ಸೋಂಕಿತರು ಸಕಾಲಕ್ಕೆ ಚಿಕಿತ್ಸೆ ಸಿಗದೆ ಮೃತಪಡುತ್ತಿದ್ದಾರೆ. ಆದರೆ, ಚುನಾಯಿತ ಜನಪ್ರತಿನಿಧಿಗಳು ಬಹಿರಂಗವಾಗಿ ಕಿತ್ತಾಡುತ್ತಿದ್ದಾರೆ. ಜನಪ್ರತಿನಿಧಿಗಳ ಈ ವರ್ತನೆ ಹೇಸಿಗೆ ಹುಟ್ಟಿಸುವಂತಿದೆ. ಕೋವಿಡ್ ವಿಚಾರದಲ್ಲಿ ರಾಜಕೀಯ ಬೇಡ. ರಾಜಕೀಯ ಚುನಾವಣೆಗಷ್ಟೇ ಸೀಮಿತವಾಗಬೇಕು’ ಎಂದರು.