<p><strong>ಶ್ರೀನಿವಾಸಪುರ:</strong> ತಾಲ್ಲೂಕಿನ ಲಕ್ಷ್ಮಿಪುರ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಭೂಮಿಪೂಜೆ ನೆರವೇರಿಸಿದರು.</p>.<p>ಪಾತಕೋಟೆಯ ರಸ್ತೆ ಕಾಮಗಾರಿ ನಡೆಸಲು ಸೂಚಿಸಲಾಗಿದೆ. ಗೌಡತಾತಗಡ್ಡ, ಪುಲಗೂರಕೋಟೆ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ. ಸಾತನೂರು ಗೊಲ್ಲಪಲ್ಲಿ ಗ್ರಾಮದಲ್ಲಿ ಬಾಕಿ ಉಳಿದಿದ್ದ ಅಂದಾಜು ₹ 60ಲಕ್ಷದಲ್ಲಿ ಸಿಸಿ ರಸ್ತೆ ಮಾಡಿಸಿದ್ದೇನೆ ಎಂದು ಹೇಳಿದರು.</p>.<p>ಬುರಕಾಯಿಲಕೋಟ, ದೇವರೆಡ್ಡಿಪಲ್ಲಿ ವಿವಿಧ ಕಾಮಗಾರಿಗಳನ್ನ ಹಮ್ಮಿಕೊಳ್ಳಲಾಗುವುದು. ವಾರದ ನಂತರ ತಾಲ್ಲೂಕಿನ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆ ಆಲಿಸುತ್ತೇನೆ. ಮುಖಂಡರು, ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದು ಭರವಸೆ ನೀಡಿದರು.</p>.<p>ಎಂಐಡಿಪಿ ಯೋಜನೆಯಡಿಯಲ್ಲಿ ಆಂಜನೇಯ ದೇವಾಲಯದ ಬಳಿ ಸಿಸಿ ರಸ್ತೆಗೆ ₹ 60ಲಕ್ಷ, ಕಾಲೊನಿಯಲ್ಲಿನ ವಿವಿಧ ಕಾಮಗಾರಿಗಳಿಗೆ ₹ 45ಲಕ್ಷ ಅನುದಾನದಲ್ಲಿ ಕಾಮಗಾರಿ ನಡೆಯಲಿದೆ. ಗುತ್ತಿಗೆದಾರರು ಕಾಮಗಾರಿಯನ್ನು ಗುಣಮಟ್ಟದೊಂದಿಗೆ, ನಿಗದಿತ ಸಮಯದೊಳಗೆ ಇಲಾಖೆಗೆ ಹಸ್ತಾಂತರಿಸಬೇಕು ಎಂದು ಸೂಚನೆ ನೀಡಿದರು.</p>.<p>ಅನುದಾನ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಇದೇ ತಿಂಗಳು 17 ರಂದು ನ್ಯಾಯಾಲದಲ್ಲಿ ತೀರ್ಪು ಬರುವ ಸಾಧ್ಯತೆಗಳಿವೆ ಎಂದು ಮಾಹಿತಿ ನೀಡಿದರು.</p>.<p>ಮುಖಂಡರಾದ ತೂಪಲ್ಲಿ ಆರ್.ನಾರಾಯಣಸ್ವಾಮಿ, ಬಾಲವತಿಜಯರಾಮ್, ಜಿ.ಎನ್.ಶ್ರೀನಿವಾಸರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಿವಾಸಪುರ:</strong> ತಾಲ್ಲೂಕಿನ ಲಕ್ಷ್ಮಿಪುರ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಭೂಮಿಪೂಜೆ ನೆರವೇರಿಸಿದರು.</p>.<p>ಪಾತಕೋಟೆಯ ರಸ್ತೆ ಕಾಮಗಾರಿ ನಡೆಸಲು ಸೂಚಿಸಲಾಗಿದೆ. ಗೌಡತಾತಗಡ್ಡ, ಪುಲಗೂರಕೋಟೆ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ. ಸಾತನೂರು ಗೊಲ್ಲಪಲ್ಲಿ ಗ್ರಾಮದಲ್ಲಿ ಬಾಕಿ ಉಳಿದಿದ್ದ ಅಂದಾಜು ₹ 60ಲಕ್ಷದಲ್ಲಿ ಸಿಸಿ ರಸ್ತೆ ಮಾಡಿಸಿದ್ದೇನೆ ಎಂದು ಹೇಳಿದರು.</p>.<p>ಬುರಕಾಯಿಲಕೋಟ, ದೇವರೆಡ್ಡಿಪಲ್ಲಿ ವಿವಿಧ ಕಾಮಗಾರಿಗಳನ್ನ ಹಮ್ಮಿಕೊಳ್ಳಲಾಗುವುದು. ವಾರದ ನಂತರ ತಾಲ್ಲೂಕಿನ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆ ಆಲಿಸುತ್ತೇನೆ. ಮುಖಂಡರು, ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದು ಭರವಸೆ ನೀಡಿದರು.</p>.<p>ಎಂಐಡಿಪಿ ಯೋಜನೆಯಡಿಯಲ್ಲಿ ಆಂಜನೇಯ ದೇವಾಲಯದ ಬಳಿ ಸಿಸಿ ರಸ್ತೆಗೆ ₹ 60ಲಕ್ಷ, ಕಾಲೊನಿಯಲ್ಲಿನ ವಿವಿಧ ಕಾಮಗಾರಿಗಳಿಗೆ ₹ 45ಲಕ್ಷ ಅನುದಾನದಲ್ಲಿ ಕಾಮಗಾರಿ ನಡೆಯಲಿದೆ. ಗುತ್ತಿಗೆದಾರರು ಕಾಮಗಾರಿಯನ್ನು ಗುಣಮಟ್ಟದೊಂದಿಗೆ, ನಿಗದಿತ ಸಮಯದೊಳಗೆ ಇಲಾಖೆಗೆ ಹಸ್ತಾಂತರಿಸಬೇಕು ಎಂದು ಸೂಚನೆ ನೀಡಿದರು.</p>.<p>ಅನುದಾನ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಇದೇ ತಿಂಗಳು 17 ರಂದು ನ್ಯಾಯಾಲದಲ್ಲಿ ತೀರ್ಪು ಬರುವ ಸಾಧ್ಯತೆಗಳಿವೆ ಎಂದು ಮಾಹಿತಿ ನೀಡಿದರು.</p>.<p>ಮುಖಂಡರಾದ ತೂಪಲ್ಲಿ ಆರ್.ನಾರಾಯಣಸ್ವಾಮಿ, ಬಾಲವತಿಜಯರಾಮ್, ಜಿ.ಎನ್.ಶ್ರೀನಿವಾಸರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>