<p><strong>ಮುಳಬಾಗಿಲು</strong>: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಕಾಲೇಜು ವಾರ್ಷಿಕೋತ್ಸವ ನಡೆಯಿತು.</p>.<p>ಕಾರ್ಯಕ್ರಮದ ಪ್ರಯುಕ್ತ ನೃತ್ಯ, ಹಾಡುಗಾರಿಕೆ, ನಾಟಕ ಸೇರಿದಂತೆ ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ನಡೆಸಿಕೊಟ್ಟರು. ಜತೆಗೆ ವಿವಿಧ ಕ್ರೀಡೆ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.</p>.<p>ವಿದ್ಯಾರ್ಥಿಗಳು ವೇದಿಕೆ ಮೇಲೆ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಹಾಡಿಗೆ ನೃತ್ಯ ಪ್ರಾರಂಭಿಸುತ್ತಿದ್ದಂತೆ, ಶಾಸಕ ಸಮೃದ್ಧಿ ಮಂಜುನಾಥ್ ಅವರು ವೇದಿಕೆಯ ಮೇಲೆ ವಿದ್ಯಾರ್ಥಿಗಳ ಜೊತೆಗೂಡಿ ಹಾಡಿಗೆ ಭರ್ಜರಿ ನೃತ್ಯ ಮಾಡಿದರು.</p>.<p>ಈ ವೇಳೆ ಶಾಸಕ ಸಮೃದ್ಧಿ ಮಂಜುನಾಥ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಇತ್ತೀಚಿಗೆ ಭಾವನಾತ್ಮಕ ಸಂಬಂಧಗಳು ಕಡಿಮೆಯಾಗುತ್ತಿದೆ ಎಂದರು.</p>.<p>ವಿದ್ಯಾರ್ಥಿಗಳು ಕಾಲೇಜುಗಳಲ್ಲಿ ನೆನಪಿನಲ್ಲಿ ಉಳಿಯುವಂತಹ ಸಾಧನೆಗಳನ್ನು ಬಿಟ್ಟು ಹೋಗಬೇಕು. ಆ ಸಾಧನೆಗಳು ಮುಂದೆ ಬರುವ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಬೇಕು. ಆದ್ದರಿಂದ ದೊಡ್ಡ ಕನಸುಗಳನ್ನು ಇಟ್ಟುಕೊಂಡು ವಿದ್ಯಾರ್ಥಿಗಳು ಓದಬೇಕು ಎಂದು ಹೇಳಿದರು.</p>.<p>ಕಾಲೇಜಿನಲ್ಲಿ ನೀರಿನ ಸಮಸ್ಯೆ ಇರುವುದರಿಂದ ಒಂದು ತಿಂಗಳಲ್ಲಿ ಕೊಳವೆ ಬಾವಿ ಕೊರೆಸಲಾಗುವುದು. ಎರಡು ತಿಂಗಳಲ್ಲಿ ಹೈಟೆಕ್ ಮಾದರಿಯ ಕಾಲೇಜು ಕ್ಯಾಂಟೀನ್ ಹಾಗೂ ಕಾಫಿ ಡೇ ಉದ್ಘಾಟನೆ ಮಾಡಲಾಗುವುದು ಎಂದರು.</p>.<p>ಜಿ.ಮುನಿವೆಂಕಟಪ್ಪ, ರಘುಪತಿ ರೆಡ್ಡಿ, ನಗವಾರ ಎನ್.ಆರ್.ಎಸ್.ಸತ್ಯಣ್ಣ, ಗೊಲ್ಲಹಳ್ಳಿ ಜಗಯ್, ಪ್ರಸಾದ್, ರಾಜಶೇಖರ್, ರಾಜೇಶ್, ಗ್ಯಾಸ್ ರಘು, ಎಂ.ಕೃಷ್ಣಪ್ಪ, ಟಿ.ಎಸ್.ಶ್ರೀನಿವಾಸ್, ಎಂ.ಎನ್.ಮೂರ್ತಿ, ಮೋಹನ ರೆಡ್ಡಿ, ಶಿವರಾಮೇಗೌಡ, ಆದಿನಾರಾಯಣ, ಲಾರೆನ್ಸ್ ಪ್ರಸನ್ನ, ವಸುಂದರಾ, ಭಾಗ್ಯಲಕ್ಷ್ಮಿ, ಶಶಿಕಳಾ, ಶ್ರೀಧರ್, ಎಲ್.ಸೀನಪ್ಪ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು</strong>: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಕಾಲೇಜು ವಾರ್ಷಿಕೋತ್ಸವ ನಡೆಯಿತು.</p>.<p>ಕಾರ್ಯಕ್ರಮದ ಪ್ರಯುಕ್ತ ನೃತ್ಯ, ಹಾಡುಗಾರಿಕೆ, ನಾಟಕ ಸೇರಿದಂತೆ ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ನಡೆಸಿಕೊಟ್ಟರು. ಜತೆಗೆ ವಿವಿಧ ಕ್ರೀಡೆ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.</p>.<p>ವಿದ್ಯಾರ್ಥಿಗಳು ವೇದಿಕೆ ಮೇಲೆ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಹಾಡಿಗೆ ನೃತ್ಯ ಪ್ರಾರಂಭಿಸುತ್ತಿದ್ದಂತೆ, ಶಾಸಕ ಸಮೃದ್ಧಿ ಮಂಜುನಾಥ್ ಅವರು ವೇದಿಕೆಯ ಮೇಲೆ ವಿದ್ಯಾರ್ಥಿಗಳ ಜೊತೆಗೂಡಿ ಹಾಡಿಗೆ ಭರ್ಜರಿ ನೃತ್ಯ ಮಾಡಿದರು.</p>.<p>ಈ ವೇಳೆ ಶಾಸಕ ಸಮೃದ್ಧಿ ಮಂಜುನಾಥ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಇತ್ತೀಚಿಗೆ ಭಾವನಾತ್ಮಕ ಸಂಬಂಧಗಳು ಕಡಿಮೆಯಾಗುತ್ತಿದೆ ಎಂದರು.</p>.<p>ವಿದ್ಯಾರ್ಥಿಗಳು ಕಾಲೇಜುಗಳಲ್ಲಿ ನೆನಪಿನಲ್ಲಿ ಉಳಿಯುವಂತಹ ಸಾಧನೆಗಳನ್ನು ಬಿಟ್ಟು ಹೋಗಬೇಕು. ಆ ಸಾಧನೆಗಳು ಮುಂದೆ ಬರುವ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಬೇಕು. ಆದ್ದರಿಂದ ದೊಡ್ಡ ಕನಸುಗಳನ್ನು ಇಟ್ಟುಕೊಂಡು ವಿದ್ಯಾರ್ಥಿಗಳು ಓದಬೇಕು ಎಂದು ಹೇಳಿದರು.</p>.<p>ಕಾಲೇಜಿನಲ್ಲಿ ನೀರಿನ ಸಮಸ್ಯೆ ಇರುವುದರಿಂದ ಒಂದು ತಿಂಗಳಲ್ಲಿ ಕೊಳವೆ ಬಾವಿ ಕೊರೆಸಲಾಗುವುದು. ಎರಡು ತಿಂಗಳಲ್ಲಿ ಹೈಟೆಕ್ ಮಾದರಿಯ ಕಾಲೇಜು ಕ್ಯಾಂಟೀನ್ ಹಾಗೂ ಕಾಫಿ ಡೇ ಉದ್ಘಾಟನೆ ಮಾಡಲಾಗುವುದು ಎಂದರು.</p>.<p>ಜಿ.ಮುನಿವೆಂಕಟಪ್ಪ, ರಘುಪತಿ ರೆಡ್ಡಿ, ನಗವಾರ ಎನ್.ಆರ್.ಎಸ್.ಸತ್ಯಣ್ಣ, ಗೊಲ್ಲಹಳ್ಳಿ ಜಗಯ್, ಪ್ರಸಾದ್, ರಾಜಶೇಖರ್, ರಾಜೇಶ್, ಗ್ಯಾಸ್ ರಘು, ಎಂ.ಕೃಷ್ಣಪ್ಪ, ಟಿ.ಎಸ್.ಶ್ರೀನಿವಾಸ್, ಎಂ.ಎನ್.ಮೂರ್ತಿ, ಮೋಹನ ರೆಡ್ಡಿ, ಶಿವರಾಮೇಗೌಡ, ಆದಿನಾರಾಯಣ, ಲಾರೆನ್ಸ್ ಪ್ರಸನ್ನ, ವಸುಂದರಾ, ಭಾಗ್ಯಲಕ್ಷ್ಮಿ, ಶಶಿಕಳಾ, ಶ್ರೀಧರ್, ಎಲ್.ಸೀನಪ್ಪ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>