<p><strong>ಬಂಗಾರಪೇಟೆ:</strong> ತಾಲ್ಲೂಕಿನ ಚಿಕ್ಕಕಳವಂಚಿ ಗ್ರಾಮದಲ್ಲಿ ನೂತನ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಎಸ್.ಎನ್. ಬಳಿಕ ನಾರಾಯಣಸ್ವಾಮಿ ಭೂಮಿಪೂಜೆ ನೆರವೇರಿಸಿದರು.</p>.<p>ಬಳಿಕ ಮಾತನಾಡಿದ ಅವರು, ಧಾರ್ಮಿಕ ಕ್ಷೇತ್ರವಾಗಿರುವ ಚಿಕ್ಕಕಳವಂಚಿಯಲ್ಲಿ ದ್ರೌಪದಿ ದೇವಿ ಸಮೇತ ಧರ್ಮರಾಯ ಸ್ವಾಮಿ ಜಾತ್ರೆ ವಿಜೃಂಭಣೆಯಿಂದ ನಡೆಯುತ್ತದೆ. ಈ ವೇಳೆ ದೂರದ ಊರಿಂದ ಬರುವ ಭಕ್ತರ ಅನುಕೂಲಕ್ಕಾಗಿ ಸುಸಜ್ಜಿತ ಸಮುದಾಯ ಭವನದ ಅಗತ್ಯವಿತ್ತು. ಹಾಗಾಗಿ ಸಾರ್ವಜನಿಕರ ಬೇಡಿಕೆಯಂತೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಈ ಸಮುದಾಯ ಭವನ ಕೇವಲ ಜಾತ್ರೆಗೆ ಮಾತ್ರವಲ್ಲದೆ, ಮದುವೆ, ಉಪನಯನ ಹಾಗೂ ಸಮಾಜದ ವಿವಿಧ ಸಭೆ-ಸಮಾರಂಭಗಳಿಗೆ ಕಡಿಮೆ ವೆಚ್ಚದಲ್ಲಿ ಸ್ಥಳಾವಕಾಶ ಸಿಗಲಿದೆ. ನಿಗದಿತ ಸಮಯದೊಳಗೆ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗುವುದು ಎಂದರು.</p>.<p>ಮುನೀರಪ್ಪ, ಆದಿ ನಾರಾಯಣ ಕುಟ್ಟಿ, ಪ್ರಭಾಕರ್ ರೆಡ್ಡಿ, ಜಯಣ್ಣ, ಲಕ್ಷ್ಮಿ ನಾರಾಯಣ ಪ್ರಸಾದ್, ವಿ.ಶಂಕರ್, ಹಂಸಾನಂದ , ವರದರಾಜ, ಶಿವಕುಮಾರ್, ವೆಂಕಟೇಶ್, ರಾಮಪ್ಪ, ಚಲಪತಿ, ವೆಂಕಟಮುನಿಯಪ್ಪ, ಬಾಲಕೃಷ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ:</strong> ತಾಲ್ಲೂಕಿನ ಚಿಕ್ಕಕಳವಂಚಿ ಗ್ರಾಮದಲ್ಲಿ ನೂತನ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಎಸ್.ಎನ್. ಬಳಿಕ ನಾರಾಯಣಸ್ವಾಮಿ ಭೂಮಿಪೂಜೆ ನೆರವೇರಿಸಿದರು.</p>.<p>ಬಳಿಕ ಮಾತನಾಡಿದ ಅವರು, ಧಾರ್ಮಿಕ ಕ್ಷೇತ್ರವಾಗಿರುವ ಚಿಕ್ಕಕಳವಂಚಿಯಲ್ಲಿ ದ್ರೌಪದಿ ದೇವಿ ಸಮೇತ ಧರ್ಮರಾಯ ಸ್ವಾಮಿ ಜಾತ್ರೆ ವಿಜೃಂಭಣೆಯಿಂದ ನಡೆಯುತ್ತದೆ. ಈ ವೇಳೆ ದೂರದ ಊರಿಂದ ಬರುವ ಭಕ್ತರ ಅನುಕೂಲಕ್ಕಾಗಿ ಸುಸಜ್ಜಿತ ಸಮುದಾಯ ಭವನದ ಅಗತ್ಯವಿತ್ತು. ಹಾಗಾಗಿ ಸಾರ್ವಜನಿಕರ ಬೇಡಿಕೆಯಂತೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಈ ಸಮುದಾಯ ಭವನ ಕೇವಲ ಜಾತ್ರೆಗೆ ಮಾತ್ರವಲ್ಲದೆ, ಮದುವೆ, ಉಪನಯನ ಹಾಗೂ ಸಮಾಜದ ವಿವಿಧ ಸಭೆ-ಸಮಾರಂಭಗಳಿಗೆ ಕಡಿಮೆ ವೆಚ್ಚದಲ್ಲಿ ಸ್ಥಳಾವಕಾಶ ಸಿಗಲಿದೆ. ನಿಗದಿತ ಸಮಯದೊಳಗೆ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗುವುದು ಎಂದರು.</p>.<p>ಮುನೀರಪ್ಪ, ಆದಿ ನಾರಾಯಣ ಕುಟ್ಟಿ, ಪ್ರಭಾಕರ್ ರೆಡ್ಡಿ, ಜಯಣ್ಣ, ಲಕ್ಷ್ಮಿ ನಾರಾಯಣ ಪ್ರಸಾದ್, ವಿ.ಶಂಕರ್, ಹಂಸಾನಂದ , ವರದರಾಜ, ಶಿವಕುಮಾರ್, ವೆಂಕಟೇಶ್, ರಾಮಪ್ಪ, ಚಲಪತಿ, ವೆಂಕಟಮುನಿಯಪ್ಪ, ಬಾಲಕೃಷ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>