ಇದಕ್ಕೆ ಪ್ರತಿಕ್ರಿಯಿಸಿದ ಶ್ರೀನಿವಾಸಗೌಡ, ‘ಈ ಹಿಂದೆ ನಾನು ಭೇಟಿ ನೀಡಿದ್ದಾಗ ವ್ಯವಸ್ಥೆ ಸರಿಪಡಿಸಿಕೊಳ್ಳುವಂತೆ ಸೂಚಿಸಿದ್ದೆ. ಆದರೂ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಳೆ ಚಾಳಿ ಮುಂದುವರಿಸಿದ್ದೀರಿ. ಕೆಲಸ ಮಾಡಲು ಆಸಕ್ತಿ ಇಲ್ಲದಿದ್ದರೆ ಹೇಳಿ ಬೇರೆಡೆಗೆ ವರ್ಗಾವಣೆ ಮಾಡಿಸುತ್ತೇನೆ. ಜನರಿಗೆ ಯಾಕೆ ತೊಂದರೆ ಕೊಡುತ್ತೀರಿ?’ ಎಂದು ಕಿಡಿಕಾರಿದರು.