ಪ್ಯಾಂಟ್ ಜೇಬಿನಲ್ಲಿ ನಿಂಬೆ ಹಣ್ಣು ಇಟ್ಟುಕೊಂಡು ಬಂದಿದ್ದ ಅನಿಲ್ಕುಮಾರ್ ಮಧ್ಯಾಹ್ನ 12.30ಕ್ಕೆ ಉಮೇದುವಾರಿಕೆ ಸಲ್ಲಿಸಿದರು. ಬಳಿಕ ಮಧ್ಯಾಹ್ನ 2 ಗಂಟೆಗೆ ಮತ್ತೊಂದು ಸೆಟ್ ನಾಮಪತ್ರ ಸಲ್ಲಿಸಿ ಅಚ್ಚರಿ ಮೂಡಿಸಿದರು. ಇನ್ನೂ ಜೆಡಿಎಸ್ ಅಭ್ಯರ್ಥಿ ವಕ್ಕಲೇರಿ ರಾಮು ಹಾಗೂ ಬಿಜೆಪಿ ಅಭ್ಯರ್ಥಿ ಡಾ.ಕೆ.ಎನ್.ವೇಣುಗೋಪಾಲ್ ಗೆಲುವಿಗಾಗಿ ನಗರದ ಶಕ್ತಿ ದೇವತೆ ಕೋಲಾರಮ್ಮನ ಮೊರೆ ಹೋದರು. ಈ ಇಬ್ಬರೂ ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಕೋಲಾರಮ್ಮ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.