<p><strong>ಕೋಲಾರ:</strong> ಜಿಲ್ಲೆಯ ಕೆಜಿಎಫ್ನ ಅಶೋಕನಗರ ರಸ್ತೆ ವಿಸ್ತರಣೆ ಕಾಮಗಾರಿ ವಿಳಂಬ ಖಂಡಿಸಿ ಕಾಂಗ್ರೆಸ್ ಶಾಸಕಿ ಎಂ.ರೂಪಕಲಾ ಇಲ್ಲಿ ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಮಳೆಯನ್ನೂ ಲೆಕ್ಕಿಸದೆ ಏಕಾಂಗಿಯಾಗಿ ಸತತ ಮೂರ್ನಾಲ್ಕು ತಾಸು ಪ್ರತಿಭಟನೆ ನಡೆಸಿದರು.</p>.<p>ಬೆಳಿಗ್ಗೆ 11 ಗಂಟೆ ಸುಮಾರಿಗೆ ಹೋರಾಟ ಆರಂಭಿಸಿದ ರೂಪಕಲಾ ಅವರು ಜಿಲ್ಲಾಧಿಕಾರಿ ಸ್ಥಳಕ್ಕೆ ಬರಬೇಕೆಂದು ಪಟ್ಟು ಹಿಡಿದರು. ಆದರೆ, ಜಿಲ್ಲಾಧಿಕಾರಿ ಮಧ್ಯಾಹ್ನದವರೆಗೂ ಕಚೇರಿಗೆ ಬರಲಿಲ್ಲ. ಆದರೂ ಪಟ್ಟು ಸಡಿಲಿಸದ ರೂಪಕಲಾ ಅವರು ಮಳೆಯಲ್ಲೂ ಹೋರಾಟ ಮುಂದುವರಿಸಿದರು.</p>.<p>‘ಅಶೋಕನಗರ ರಸ್ತೆ ವಿಸ್ತರಣೆಗೆ 2014ರಲ್ಲೇ ಅನುದಾನ ಬಿಡುಗಡೆಯಾಗಿ ಸ್ವಲ್ಪ ಕಾಮಗಾರಿ ನಡೆದಿದೆ. ಆದರೆ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಬಾಕಿ ಕಾಮಗಾರಿ ಪೂರ್ಣಗೊಳಿಸಲು ವಿಳಂಬ ಮಾಡುತ್ತಿದ್ದಾರೆ. ಇದರ ಹಿಂದೆ ಕೆಲ ಪ್ರಭಾವಿಗಳ ಒತ್ತಡವಿದೆ’ ಎಂದು ರೂಪಕಲಾ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಎಂ.ಜಿ ವೃತ್ತದಿಂದ ಸ್ಕೂಲ್ ಆಫ್ ಮೈನ್ಸ್ವರೆಗೆ 1.82 ಕಿ.ಮೀ ಜೋಡಿ ರಸ್ತೆ ನಿರ್ಮಾಣಕ್ಕೆ ಸರ್ಕಾರ ₹ 9.50 ಕೋಟಿ ಮಂಜೂರು ಮಾಡಿದೆ. ಸ್ಕೂಲ್ ಆಫ್ ಮೈನ್ಸ್ನಿಂದ ಅಶೋಕನಗರ ಗೇಟ್ವರೆಗೆ ಕಾಮಗಾರಿ ನಡೆದಿದೆ. 200 ಮೀಟರ್ ಕಾಮಗಾರಿ ಬಾಕಿಯಿದ್ದು, ಸಾರ್ವಜನಿಕರ ಓಡಾಟಕ್ಕೆ ಹಾಗೂ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ’ ಎಂದು ಹೇಳಿದರು.</p>.<p><strong>ಕೈಗೊಂಬೆ: </strong>‘ಲೋಕೋಪಯೋಗಿ ಇಲಾಖೆ ಕಚೇರಿ ಎದುರುವ ಕ್ಷೇತ್ರದ ಜನರ ಜತೆ 6 ತಿಂಗಳ ಹಿಂದೆ ಪ್ರತಿಭಟನೆ ಮಾಡಿದ್ದೆ. ಆದರೂ ಅಧಿಕಾರಿಗಳು ಕಾಮಗಾರಿ ಆರಂಭಿಸಿಲ್ಲ. ಜಿಲ್ಲಾಡಳಿತ ಜನಪರವಾಗಿ ಕೆಲಸ ಮಾಡುವುದು ಬಿಟ್ಟು ರಾಜಕಾರಣಿಗಳು ಹಾಗೂ ಪ್ರಭಾವಿಗಳ ಪರ ಕೆಲಸ ಮಾಡುತ್ತಿದೆ. ಅಧಿಕಾರಿಗಳು ಕೆಲ ರಾಜಕಾರಣಿಗಳ ಕೈಗೊಂಬೆಯಾಗಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಅಶೋಕ ರಸ್ತೆ ವಿಸ್ತರಣೆ ಕಾಮಗಾರಿಗೆ ಅನುಮೋದನೆ ಸಿಕ್ಕಿದ್ದರೂ ಜಿಲ್ಲಾಡಳಿತದ ನಿರ್ಲಕ್ಷ್ಯದ ಕಾರಣಕ್ಕೆ 6 ವರ್ಷವಾದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಜಿಲ್ಲಾಡಳಿತದ ಬೇಜವಾಬ್ದಾರಿ ಖಂಡಿಸಿ ವಿಧಾನಸಭೆ ಅಧಿವೇಶನಕ್ಕೆ ಗೈರಾಗಲು ನಿರ್ಧರಿಸಿದ್ದೇನೆ’ ಎಂದು ಎಚ್ಚರಿಕೆ ನೀಡಿದರು.</p>.<p>‘ಕಾಮಗಾರಿ ವಿಚಾರವಾಗಿ ಕ್ಷೇತ್ರದ ಜನ ನನ್ನ ಮೇಲೆ ಒತ್ತಡ ಹೇರುತ್ತಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ಏಕಾಂಗಿಯಾಗಿ ಪ್ರತಿಭಟನೆ ಮಾಡಿದ್ದೇನೆ. ಜಿಲ್ಲಾಧಿಕಾರಿಗೆ ಸಮಸ್ಯೆಯ ಗಂಭೀರತೆ ತಿಳಿಸಲು ಈ ಪ್ರಯತ್ನ ಮಾಡಿದ್ದೇನೆ. ಕಾಮಗಾರಿ ಆರಂಭದ ವಿಚಾರದಲ್ಲಿ ಜಿಲ್ಲಾಡಳಿತ ಮೊಂಡುತನ ಮುಂದುವರಿಸಿದರೆ ಮುಂದಿನ ಅನಾಹುತಗಳಿಗೆ ಅಧಿಕಾರಿಗಳೇ ಹೊಣೆ’ ಎಂದು ಗುಡುಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಜಿಲ್ಲೆಯ ಕೆಜಿಎಫ್ನ ಅಶೋಕನಗರ ರಸ್ತೆ ವಿಸ್ತರಣೆ ಕಾಮಗಾರಿ ವಿಳಂಬ ಖಂಡಿಸಿ ಕಾಂಗ್ರೆಸ್ ಶಾಸಕಿ ಎಂ.ರೂಪಕಲಾ ಇಲ್ಲಿ ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಮಳೆಯನ್ನೂ ಲೆಕ್ಕಿಸದೆ ಏಕಾಂಗಿಯಾಗಿ ಸತತ ಮೂರ್ನಾಲ್ಕು ತಾಸು ಪ್ರತಿಭಟನೆ ನಡೆಸಿದರು.</p>.<p>ಬೆಳಿಗ್ಗೆ 11 ಗಂಟೆ ಸುಮಾರಿಗೆ ಹೋರಾಟ ಆರಂಭಿಸಿದ ರೂಪಕಲಾ ಅವರು ಜಿಲ್ಲಾಧಿಕಾರಿ ಸ್ಥಳಕ್ಕೆ ಬರಬೇಕೆಂದು ಪಟ್ಟು ಹಿಡಿದರು. ಆದರೆ, ಜಿಲ್ಲಾಧಿಕಾರಿ ಮಧ್ಯಾಹ್ನದವರೆಗೂ ಕಚೇರಿಗೆ ಬರಲಿಲ್ಲ. ಆದರೂ ಪಟ್ಟು ಸಡಿಲಿಸದ ರೂಪಕಲಾ ಅವರು ಮಳೆಯಲ್ಲೂ ಹೋರಾಟ ಮುಂದುವರಿಸಿದರು.</p>.<p>‘ಅಶೋಕನಗರ ರಸ್ತೆ ವಿಸ್ತರಣೆಗೆ 2014ರಲ್ಲೇ ಅನುದಾನ ಬಿಡುಗಡೆಯಾಗಿ ಸ್ವಲ್ಪ ಕಾಮಗಾರಿ ನಡೆದಿದೆ. ಆದರೆ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಬಾಕಿ ಕಾಮಗಾರಿ ಪೂರ್ಣಗೊಳಿಸಲು ವಿಳಂಬ ಮಾಡುತ್ತಿದ್ದಾರೆ. ಇದರ ಹಿಂದೆ ಕೆಲ ಪ್ರಭಾವಿಗಳ ಒತ್ತಡವಿದೆ’ ಎಂದು ರೂಪಕಲಾ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಎಂ.ಜಿ ವೃತ್ತದಿಂದ ಸ್ಕೂಲ್ ಆಫ್ ಮೈನ್ಸ್ವರೆಗೆ 1.82 ಕಿ.ಮೀ ಜೋಡಿ ರಸ್ತೆ ನಿರ್ಮಾಣಕ್ಕೆ ಸರ್ಕಾರ ₹ 9.50 ಕೋಟಿ ಮಂಜೂರು ಮಾಡಿದೆ. ಸ್ಕೂಲ್ ಆಫ್ ಮೈನ್ಸ್ನಿಂದ ಅಶೋಕನಗರ ಗೇಟ್ವರೆಗೆ ಕಾಮಗಾರಿ ನಡೆದಿದೆ. 200 ಮೀಟರ್ ಕಾಮಗಾರಿ ಬಾಕಿಯಿದ್ದು, ಸಾರ್ವಜನಿಕರ ಓಡಾಟಕ್ಕೆ ಹಾಗೂ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ’ ಎಂದು ಹೇಳಿದರು.</p>.<p><strong>ಕೈಗೊಂಬೆ: </strong>‘ಲೋಕೋಪಯೋಗಿ ಇಲಾಖೆ ಕಚೇರಿ ಎದುರುವ ಕ್ಷೇತ್ರದ ಜನರ ಜತೆ 6 ತಿಂಗಳ ಹಿಂದೆ ಪ್ರತಿಭಟನೆ ಮಾಡಿದ್ದೆ. ಆದರೂ ಅಧಿಕಾರಿಗಳು ಕಾಮಗಾರಿ ಆರಂಭಿಸಿಲ್ಲ. ಜಿಲ್ಲಾಡಳಿತ ಜನಪರವಾಗಿ ಕೆಲಸ ಮಾಡುವುದು ಬಿಟ್ಟು ರಾಜಕಾರಣಿಗಳು ಹಾಗೂ ಪ್ರಭಾವಿಗಳ ಪರ ಕೆಲಸ ಮಾಡುತ್ತಿದೆ. ಅಧಿಕಾರಿಗಳು ಕೆಲ ರಾಜಕಾರಣಿಗಳ ಕೈಗೊಂಬೆಯಾಗಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಅಶೋಕ ರಸ್ತೆ ವಿಸ್ತರಣೆ ಕಾಮಗಾರಿಗೆ ಅನುಮೋದನೆ ಸಿಕ್ಕಿದ್ದರೂ ಜಿಲ್ಲಾಡಳಿತದ ನಿರ್ಲಕ್ಷ್ಯದ ಕಾರಣಕ್ಕೆ 6 ವರ್ಷವಾದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಜಿಲ್ಲಾಡಳಿತದ ಬೇಜವಾಬ್ದಾರಿ ಖಂಡಿಸಿ ವಿಧಾನಸಭೆ ಅಧಿವೇಶನಕ್ಕೆ ಗೈರಾಗಲು ನಿರ್ಧರಿಸಿದ್ದೇನೆ’ ಎಂದು ಎಚ್ಚರಿಕೆ ನೀಡಿದರು.</p>.<p>‘ಕಾಮಗಾರಿ ವಿಚಾರವಾಗಿ ಕ್ಷೇತ್ರದ ಜನ ನನ್ನ ಮೇಲೆ ಒತ್ತಡ ಹೇರುತ್ತಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ಏಕಾಂಗಿಯಾಗಿ ಪ್ರತಿಭಟನೆ ಮಾಡಿದ್ದೇನೆ. ಜಿಲ್ಲಾಧಿಕಾರಿಗೆ ಸಮಸ್ಯೆಯ ಗಂಭೀರತೆ ತಿಳಿಸಲು ಈ ಪ್ರಯತ್ನ ಮಾಡಿದ್ದೇನೆ. ಕಾಮಗಾರಿ ಆರಂಭದ ವಿಚಾರದಲ್ಲಿ ಜಿಲ್ಲಾಡಳಿತ ಮೊಂಡುತನ ಮುಂದುವರಿಸಿದರೆ ಮುಂದಿನ ಅನಾಹುತಗಳಿಗೆ ಅಧಿಕಾರಿಗಳೇ ಹೊಣೆ’ ಎಂದು ಗುಡುಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>