ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ನೋಡಲು ಜನ ಮುಗಿಬೀಳುತ್ತಾರೆ: ಬಿಜೆಪಿ ಎಂಎಲ್‌ಸಿ ನಾರಾಯಣಸ್ವಾಮಿ

Published 27 ಏಪ್ರಿಲ್ 2023, 12:21 IST
Last Updated 27 ಏಪ್ರಿಲ್ 2023, 12:21 IST
ಅಕ್ಷರ ಗಾತ್ರ

ಕೋಲಾರ: ‘ಪ್ರಧಾನಿ ನರೇಂದ್ರ ಮೋದಿ ಯಾವ ನಟರಿಗಿಂತ ಕಡಿಮೆ ಇಲ್ಲ. ಅವರನ್ನು ನೋಡಲು ಜನ ಮುಗಿಬೀಳುತ್ತಾರೆ, ಸಣ್ಣ ಹಳ್ಳಿಯ ಕೂಲಿಕಾರರಿಂದ ಹಿಡಿದು ಮಹಾನಗರದ ಜನರು ಇಷ್ಟಪಡುತ್ತಾರೆ. ಬಿಜೆಪಿ ಅಭ್ಯರ್ಥಿಗಳ ಪಾಲಿಗೆ ಟಾನಿಕ್‌ ಆಗಿದ್ದಾರೆ’ ಎಂದು ವಿಧಾನ ಪರಿಷತ್ ಸದಸ್ಯ ಬಿಜೆಪಿಯ ವೈ.ಎ.ನಾರಾಯಣಸ್ವಾಮಿ ಬಣ್ಣಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಮಾಧ್ಯಮ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ‘ಏ.30ರ ಭಾನುವಾರ ಬೆಳಿಗ್ಗೆ ಮೋದಿ ಕೋಲಾರದಲ್ಲಿ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಸುಮಾರು 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದೆ. ಸಿದ್ಧತೆ ಭರದಿಂದ ಸಾಗಿದೆ’ ಎಂದರು.

ನಗರದ ಬಿಜೆಪಿ ಕಚೇರಿಯಲ್ಲಿ ಮಾಧ್ಯಮ ಕೇಂದ್ರ ಉದ್ಘಾಟಿಸಿ, ವೈ.ಎ.ನಾರಾಯಣಸ್ವಾಮಿ ಗುರುವಾರ ಮಾತನಾಡಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಮಾಧ್ಯಮ ಕೇಂದ್ರ ಉದ್ಘಾಟಿಸಿ, ವೈ.ಎ.ನಾರಾಯಣಸ್ವಾಮಿ ಗುರುವಾರ ಮಾತನಾಡಿದರು.

‘ಅವೈಜ್ಞಾನಿಕ ವ್ಯವಸ್ಥೆ ತೊಡೆದು ಹಾಕಲು ಸಂವಿಧಾನದ ಪ್ರಕಾರ ಮೀಸಲಾತಿ ಹೆಚ್ಚಿಸಲಾಗಿದೆ. ಜಾತಿಗಳಿಗೆ ಮೀಸಲಾತಿ ಇದೆಯೇ ಹೊರತು ಧರ್ಮಾಧಾರಿತ ಮೀಸಲಾತಿ ಇಲ್ಲ. ಒಕ್ಕಲಿಗರೆಲ್ಲಾ ತಮ್ಮ ಪಕ್ಷಕ್ಕೆ ಸೇರಿದವರು ಎಂದು ಪ್ರತಿಪಾದಿಸುವವರು ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಲಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದರೂ ಮೀಸಲಾತಿ ಹೆಚ್ಚಿಸಲಿಲ್ಲ. ಬಿಜೆಪಿ ಹೆಚ್ಚಿಸಿರುವ ಮೀಸಲಾತಿಯನ್ನು ತಾಕತ್ತಿದ್ದರೆ ಕಾಂಗ್ರೆಸ್‌, ಜೆಡಿಎಸ್‍ನವರು ಬದಲಾಯಿಸಲಿ ನೋಡೋಣ’ ಎಂದು ಸವಾಲು ಹಾಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT