ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚಾಯಿತಿಯಲ್ಲಿ ಹಣ ದುರ್ಬಳಕೆ; ದೂರು

Published 30 ಜುಲೈ 2023, 14:12 IST
Last Updated 30 ಜುಲೈ 2023, 14:12 IST
ಅಕ್ಷರ ಗಾತ್ರ

ಬಂಗಾರಪೇಟೆ: ತಾಲ್ಲೂಕಿನ ಕೇತಗಾನಹಳ್ಳಿ ಪಂಚಾಯಿತಿ ಅಧ್ಯಕ್ಷೆ ಹಾಗೂ ಪಿಡಿಒ ಸೇರಿ ₹20 ಲಕ್ಷ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಪಂಚಾಯಿತಿಯ ಕೆಲ ಸದಸ್ಯರು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರಿಗೆ ದೂರು ಸಲ್ಲಿಸಿದ್ದಾರೆ.

ಅಹವಾಲು ಸ್ವೀಕರಿಸಿದ ಶಾಸಕರು, ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಪಂಚಾಯಿತಿ ಅಧ್ಯಕ್ಷೆ ಆಶಾಲತ ಮತ್ತು ಅಭಿವೃದ್ಧಿ ಅಧಿಕಾರಿ ಎಚ್.ಎಂ. ರವಿ ಅವರು 15ನೇ ಹಣಕಾಸು ಯೋಜನೆಯಡಿ ಒಂದೇ ವಾರದಲ್ಲಿ ಸುಮಾರು ₹20 ಲಕ್ಷ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಹಣ ದುರ್ಬಳಕೆ ಬಗ್ಗೆ ಪಂಚಾಯಿತಿ ಸದಸ್ಯರೆಲ್ಲರೂ ಧ್ವನಿ ಎತ್ತಿದ್ದರೂ ಯಾರ ಮಾತಿಗೆ ಬೆಲೆ ಕೊಡುತ್ತಿಲ್ಲ. ಅಧ್ಯಕ್ಷೆ ತನಗಿಷ್ಟ ಬಂದಂತೆ  ನಡೆದುಕೊಂಡಿದ್ದಾರೆ. ಪಿಡಿಒ ಅಧ್ಯಕ್ಷರ ತಾಳಕ್ಕೆ ತಕ್ಕಂತೆ ಕುಣಿದಿದ್ದಾರೆ ಎಂದು ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT