<p><strong>ಶ್ರೀನಿವಾಸಪುರ</strong>: ತಾಲ್ಲೂಕಿನ ಆರ್.ತಿಮ್ಮಸಂದ್ರ ಗ್ರಾಮದ ಕೆರೆಯಲ್ಲಿ 50ಕ್ಕೂ ಹೆಚ್ಚು ಕೊಕ್ಕರೆಗಳು ಮೃತಪಟ್ಟ ಬೆನ್ನಲ್ಲೇ, ಅರಣ್ಯ ಮತ್ತು ಪಶುಪಾಲನಾ ಇಲಾಖೆಯ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.</p>.<p>ಪಶು ಇಲಾಖೆ ಉಪನಿರ್ದೇಶಕ ಡಾ.ರಮೇಶ್ ಹಾಗೂ ಪ್ರಾದೇಶಿಕ ಸಂಶೋಧನಾ ವಿಭಾಗದ ಅಧಿಕಾರಿ ಡಾ.ನಟರಾಜ್ ನೇತೃತ್ವದ ತಂಡ ಕೆರೆ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಪರಿಶೀಲಿಸಿತು.</p>.<p>ಕೆರೆಯಲ್ಲಿ ಮೀನು ಹಿಡಿಯಲು ಹಾಕಿದ್ದ ಮೀನಿನ ಬಲೆಗಳು ಮತ್ತು ದಾರಗಳು ಪಕ್ಷಿಗಳ ಕಾಲುಗಳಿಗೆ ಸಿಲುಕಿಕೊಂಡಿವೆ. ಈ ಸ್ಥಿತಿಯಲ್ಲೇ ಮರ ಏರಿದ್ದ ಪಕ್ಷಿಗಳು, ದಾರಗಳು ಮರದ ಕೊಂಬೆಗಳಿಗೆ ಸಿಕ್ಕಿಹಾಕಿಕೊಂಡ ಪರಿಣಾಮ ಬಿಡಿಸಿಕೊಳ್ಳಲಾಗದೆ ಮೃತಪಟ್ಟಿವೆ ಎಂದು ಶಂಕಿಸಲಾಗಿದೆ.</p>.<p>ಪಕ್ಷಿಗಳ ಸಾವಿಗೆ ಯಾವುದೇ ವೈರಾಣು ಅಥವಾ ಸಾಂಕ್ರಾಮಿಕ ರೋಗ ಕಾರಣವಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಿವಾಸಪುರ</strong>: ತಾಲ್ಲೂಕಿನ ಆರ್.ತಿಮ್ಮಸಂದ್ರ ಗ್ರಾಮದ ಕೆರೆಯಲ್ಲಿ 50ಕ್ಕೂ ಹೆಚ್ಚು ಕೊಕ್ಕರೆಗಳು ಮೃತಪಟ್ಟ ಬೆನ್ನಲ್ಲೇ, ಅರಣ್ಯ ಮತ್ತು ಪಶುಪಾಲನಾ ಇಲಾಖೆಯ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.</p>.<p>ಪಶು ಇಲಾಖೆ ಉಪನಿರ್ದೇಶಕ ಡಾ.ರಮೇಶ್ ಹಾಗೂ ಪ್ರಾದೇಶಿಕ ಸಂಶೋಧನಾ ವಿಭಾಗದ ಅಧಿಕಾರಿ ಡಾ.ನಟರಾಜ್ ನೇತೃತ್ವದ ತಂಡ ಕೆರೆ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಪರಿಶೀಲಿಸಿತು.</p>.<p>ಕೆರೆಯಲ್ಲಿ ಮೀನು ಹಿಡಿಯಲು ಹಾಕಿದ್ದ ಮೀನಿನ ಬಲೆಗಳು ಮತ್ತು ದಾರಗಳು ಪಕ್ಷಿಗಳ ಕಾಲುಗಳಿಗೆ ಸಿಲುಕಿಕೊಂಡಿವೆ. ಈ ಸ್ಥಿತಿಯಲ್ಲೇ ಮರ ಏರಿದ್ದ ಪಕ್ಷಿಗಳು, ದಾರಗಳು ಮರದ ಕೊಂಬೆಗಳಿಗೆ ಸಿಕ್ಕಿಹಾಕಿಕೊಂಡ ಪರಿಣಾಮ ಬಿಡಿಸಿಕೊಳ್ಳಲಾಗದೆ ಮೃತಪಟ್ಟಿವೆ ಎಂದು ಶಂಕಿಸಲಾಗಿದೆ.</p>.<p>ಪಕ್ಷಿಗಳ ಸಾವಿಗೆ ಯಾವುದೇ ವೈರಾಣು ಅಥವಾ ಸಾಂಕ್ರಾಮಿಕ ರೋಗ ಕಾರಣವಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>