ಪರ ಸ್ತ್ರೀ ಜತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಹರೀಶ್ ಪ್ರತಿನಿತ್ಯ ಮನೆಯಲ್ಲಿ ಪತ್ನಿಯ ಜತೆ ಜಗಳವಾಡುತ್ತಿದ್ದರು. ಅಲ್ಲದೇ, ತವರು ಮನೆಯಿಂದ ವರದಕ್ಷಿಣೆ ತರುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸರಗೊಂಡಿದ್ದ ಭಾನುಪ್ರಿಯಾ ಅವರು ಬುಧವಾರ ರಾತ್ರಿ ಮಗುವನ್ನು ನೇಣು ಹಾಕಿ ಕೊಂದಿದ್ದಾರೆ. ಬಳಿಕ ಅವರೂ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.