<p><strong>ಮಾಲೂರು:</strong> ‘ಸ್ವಾಮಿ ವಿವೇಕಾನಂದರು ಯುವಜನರ ಪಾಲಿನ ಸ್ಫೂರ್ತಿಯ ಚಿಲುಮೆಯಾಗಿದ್ದಾರೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಮಾಜಿ ಉಪಾಧ್ಯಕ್ಷ ಆರ್. ಪ್ರಭಾಕರ್ ತಿಳಿಸಿದರು.</p>.<p>ಪಟ್ಟಣದ ಬಸ್ನಿಲ್ದಾಣ ಬಳಿಯ ಉದ್ಯಾನದಲ್ಲಿರುವ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ತಾಲ್ಲೂಕು ಬಿಜೆಪಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮದ ಅಂಗವಾಗಿ ಪುಷ್ಪನಮನ ಸಲ್ಲಿಸಿ ಮಾತನಾಡಿದರು.</p>.<p>ವಿವೇಕಾನಂದರ ಹೆಸರು ಕೇಳಿದರೆ ಮೈಯೆಲ್ಲಾ ಪುಳಕಗೊಳ್ಳುತ್ತದೆ. ಅವರು ಭಾರತ ಕಂಡ ಹೆಮ್ಮೆಯ ಪುತ್ರ. ಅವರ ಚಿಂತನೆ, ಸಂದೇಶಗಳು ಎಂದೆಂದಿಗೂ ಪ್ರಸ್ತುತ. ಭಾರತದ ಆಧ್ಯಾತ್ಮಿಕ ಪಿತಾಮಹ ಸ್ವಾಮಿ ವಿವೇಕಾನಂದರು ಎಂದರೆ ತಪ್ಪಾಗಲಾರದು ಎಂದರು.</p>.<p>1893ರಲ್ಲಿ ಚಿಕಾಗೋದಲ್ಲಿ ವಿವೇಕಾನಂದರು ಮಾಡಿದ ಭಾಷಣ ಇಂದಿಗೂ ವಿಖ್ಯಾತಿ ಪಡೆದಿದೆ. ಅಂದು ‘ಅಮೆರಿಕದ ನನ್ನ ಸಹೋದರ, ಸಹೋದರಿಯರೇ...’ ಎನ್ನುತ್ತಲೇ ಮಾತು ಆರಂಭಿಸಿದ್ದರು. ಭಾರತೀಯ ಸಂಸ್ಕೃತಿ, ಸಿರಿವಂತಿಕೆ, ಜ್ಞಾನ, ಧರ್ಮ ಇವೆಲ್ಲದರ ವಿರಾಟ್ ರಾಯಭಾರಿಯಂತೆ ಕಂಡಿದ್ದರು ಎಂದು<br />ಹೇಳಿದರು.</p>.<p>ಮುಖಂಡರಾದ ಹೂಡಿ ವಿಜಯಕುಮಾರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಎಂ. ರಾಮಮೂರ್ತಿ, ತಬಲ ನಾರಾಯಣಪ್ಪ, ಮಹಿಳಾ ಮೋರ್ಚಾ ತಾಲ್ಲೂಕು ಅಧ್ಯಕ್ಷೆ ಪದ್ಮಾವತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು:</strong> ‘ಸ್ವಾಮಿ ವಿವೇಕಾನಂದರು ಯುವಜನರ ಪಾಲಿನ ಸ್ಫೂರ್ತಿಯ ಚಿಲುಮೆಯಾಗಿದ್ದಾರೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಮಾಜಿ ಉಪಾಧ್ಯಕ್ಷ ಆರ್. ಪ್ರಭಾಕರ್ ತಿಳಿಸಿದರು.</p>.<p>ಪಟ್ಟಣದ ಬಸ್ನಿಲ್ದಾಣ ಬಳಿಯ ಉದ್ಯಾನದಲ್ಲಿರುವ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ತಾಲ್ಲೂಕು ಬಿಜೆಪಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮದ ಅಂಗವಾಗಿ ಪುಷ್ಪನಮನ ಸಲ್ಲಿಸಿ ಮಾತನಾಡಿದರು.</p>.<p>ವಿವೇಕಾನಂದರ ಹೆಸರು ಕೇಳಿದರೆ ಮೈಯೆಲ್ಲಾ ಪುಳಕಗೊಳ್ಳುತ್ತದೆ. ಅವರು ಭಾರತ ಕಂಡ ಹೆಮ್ಮೆಯ ಪುತ್ರ. ಅವರ ಚಿಂತನೆ, ಸಂದೇಶಗಳು ಎಂದೆಂದಿಗೂ ಪ್ರಸ್ತುತ. ಭಾರತದ ಆಧ್ಯಾತ್ಮಿಕ ಪಿತಾಮಹ ಸ್ವಾಮಿ ವಿವೇಕಾನಂದರು ಎಂದರೆ ತಪ್ಪಾಗಲಾರದು ಎಂದರು.</p>.<p>1893ರಲ್ಲಿ ಚಿಕಾಗೋದಲ್ಲಿ ವಿವೇಕಾನಂದರು ಮಾಡಿದ ಭಾಷಣ ಇಂದಿಗೂ ವಿಖ್ಯಾತಿ ಪಡೆದಿದೆ. ಅಂದು ‘ಅಮೆರಿಕದ ನನ್ನ ಸಹೋದರ, ಸಹೋದರಿಯರೇ...’ ಎನ್ನುತ್ತಲೇ ಮಾತು ಆರಂಭಿಸಿದ್ದರು. ಭಾರತೀಯ ಸಂಸ್ಕೃತಿ, ಸಿರಿವಂತಿಕೆ, ಜ್ಞಾನ, ಧರ್ಮ ಇವೆಲ್ಲದರ ವಿರಾಟ್ ರಾಯಭಾರಿಯಂತೆ ಕಂಡಿದ್ದರು ಎಂದು<br />ಹೇಳಿದರು.</p>.<p>ಮುಖಂಡರಾದ ಹೂಡಿ ವಿಜಯಕುಮಾರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಎಂ. ರಾಮಮೂರ್ತಿ, ತಬಲ ನಾರಾಯಣಪ್ಪ, ಮಹಿಳಾ ಮೋರ್ಚಾ ತಾಲ್ಲೂಕು ಅಧ್ಯಕ್ಷೆ ಪದ್ಮಾವತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>