ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣೆಗೆ ಬೊಟ್ಟು ಇಟ್ಟುಕೊಂಡಿಲ್ಲವೆಂದು ಮಹಿಳೆಯ ನಿಂದಿಸಿದ ಸಂಸದ ಮುನಿಸ್ವಾಮಿ

'ನಿನ್ನ ಗಂಡ ಬದುಕಿದ್ದಾನೆ ತಾನೇ?’
Last Updated 8 ಮಾರ್ಚ್ 2023, 16:09 IST
ಅಕ್ಷರ ಗಾತ್ರ

ಕೋಲಾರ: ಮಹಿಳೆಯೊಬ್ಬರು ಹಣೆಗೆ ಕುಂಕುಮ ಇಟ್ಟುಕೊಂಡಿಲ್ಲವೆಂದು ಅವರನ್ನು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ದಿನವಾದ ಬುಧವಾರ ಸಂಸದ ಎಸ್‌.ಮುನಿಸ್ವಾಮಿ ನಿಂದಿಸಿದ ಘಟನೆ ನಗರದಲ್ಲಿ ನಡೆದಿದೆ.

ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಆಯೋಜಿಸಿದ್ದ ಮಹಿಳಾ ದಿನಾಚರಣೆ ವೇಳೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹರಿದಾಡುತ್ತಿದೆ. ಇದಕ್ಕೆ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಕಾರ್ಯಕ್ರಮದ ಪ್ರಯುಕ್ತ ಮಹಿಳೆಯರು ತಾವೇ ತಯಾರಿಸಿದ ಕೆಲ ಉತ್ಪನ್ನಗಳ ಮಾರಾಟ ಮಳಿಗೆಗಳನ್ನು ರಂಗಮಂದಿರ ಆವರಣದಲ್ಲಿ ತೆರೆದಿದ್ದರು.

ಸುಜಾತಾ ಎಂಬ ಮಹಿಳೆಯ ಮಳಿಗೆ ವೀಕ್ಷಣೆ ವೇಳೆ ಮುನಿಸ್ವಾಮಿ, ‘ಏನಮ್ಮ ನಿನ್ನ ಹೆಸರು, ಹಣೆಗೆ ಏಕೆ ಬೊಟ್ಟು ಇಟ್ಟುಕೊಂಡಿಲ್ಲ? ವೈಷ್ಣವಿ ಎಂಬುದಾಗಿ ಅಂಗಡಿ ಹೆಸರನ್ನು ಏಕೆ ಇಟ್ಟುಕೊಂಡಿದ್ದೀಯಾ? ಮೊದಲು ಬೊಟ್ಟು ಇಟ್ಟುಕೋ’ ಎಂದು ಸಾರ್ವಜನಿಕವಾಗಿ ತರಾಟೆಗೆ ತೆಗೆದುಕೊಂಡರು.

‘ಸುಜಾತಾ ಎಂಬ ಹೆಸರು ಇಟ್ಟುಕೊಂಡಿದ್ದೀಯಾ? ನಿನ್ನ ಗಂಡ ಬದುಕಿದ್ದಾನೆ ತಾನೇ? ನಿನಗೆ ಕಾಮನ್‌ಸೆನ್ಸ್ ಇಲ್ಲ. ಯಾರೋ ಕಾಸು ಕೊಡುತ್ತಾರೆಂದು ಮತಾಂತರವಾಗಿಬಿಡುತ್ತೀರಾ’ ಎಂದು ಹರಿಹಾಯ್ದರು.

ಈ ವೇಳೆ ಶಾಸಕ ಕೆ.ಶ್ರೀನಿವಾಸಗೌಡ ತಡೆದರೂ ಸುಮ್ಮನಿರದ ಸಂಸದರು ಕೂಗಾಡಿದ್ದಾರೆ. ವಿಧಾನ ಪರಿಷತ್‌ ಸದಸ್ಯ ಇಂಚರ ಗೋವಿಂದರಾಜು ಕೂಡ ಸಮಾಧಾಪಡಿಸಲು ಯತ್ನಿಸಿದರು. ಆದರೂ ಸಮಾಧಾನಗೊಳ್ಳಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT