‘ಯಾವುದೇ ಅಧಿಕಾರಿಗೆ ತಮ್ಮ ಕೆಲಸ ಕಾರ್ಯ ಮಾಡಲು ಜನಪ್ರತಿನಿಧಿಗಳು ಅನುಕೂಲ ಮಾಡಿಕೊಡಬೇಕು. ಒಂದು ವೇಳೆ ಕೆಲಸದಲ್ಲಿ ಲೋಪದೋಷವಿದ್ದರೆ ಅವರನ್ನು ದಂಡಿಸಲು ಕಾನೂನಿನಲ್ಲಿ ಅವಕಾಶವಿದೆ’ ಎಂದರು.
‘ಯಾರೇ ಆಗಲಿ ಅಧಿಕಾರಿಗಳ ಮೇಲೆ ಕೈಮಾಡುವುದು, ಅವರ ಕೆಲಸಗಳಿಗೆ ಅಡ್ಡಿಪಡಿಸುವುದು ಕಾನೂನು ಬಾಹಿರ. ಹೀಗಾಗಿ, ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳ ಮೇಲೆ ಸೇಡಿನ ಕ್ರಮಕ್ಕೆ ಪ್ರಚೋದಿಸಿದರೆ ಸಂಸದರ ಮೇಲೂ ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಸರ್ಕಾರ ಹಾಗೂ ಅಧಿಕಾರಿಗಳನ್ನು ಒತ್ತಾಯಿಸುತ್ತೇನೆ. ರೌಡಿಸಂ, ಗೂಂಡಾಗಿರಿ ಶೋಭೆ ತರುವುದಿಲ್ಲ’ ಎಂದು ಹೇಳಿದರು.
ವಿಶೇಷ ಪ್ಯಾಕೇಜ್
‘ಮುಖ್ಯಮಂತ್ರಿಗೆ ಭೇಟಿ ಮಾಡಿ ರೇಷ್ಮೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಮನವಿ ಮಾಡಿದ್ದೇವೆ. ಸದ್ಯದಲ್ಲೇ ಆ ಸೌಲಭ್ಯ ಸಿಗಲಿದೆ. ರೇಷ್ಮೆ ಬೆಳೆಯುವ ರೈತರಿಗೆ ಹೆಚ್ಚಿನ ಉತ್ತೇಜನ ನೀಡಬೇಕು. ಆ ಮೂಲಕ ರೈತರ ಸಬಲೀಕರಣ ಆಗಬೇಕು. ಈ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿದ್ದೇವೆ’ ಎಂದು ಅವರು ಹೇಳಿದರು.