<p><strong>ಕೋಲಾರ</strong>: ‘ಸಂಸದ ಎಸ್.ಮುನಿಸ್ವಾಮಿ ನಂಬಿಕೆಗೆ ಅರ್ಹ ವ್ಯಕ್ತಿಯಲ್ಲ. ನಾವು ಅವರ ಮೇಲಿಟ್ಟಿದ್ದ ನಂಬಿಕೆಯು ನೀರಿನಲ್ಲಿ ಹೋಮ ಮಾಡಿದಂತಾಯಿತು’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಇಲ್ಲಿ ಸೋಮವಾರ ಅನಾರೋಗ್ಯಪೀಡಿತ ಬಡ ಜನರ ಚಿಕಿತ್ಸೆಗೆ ಇಫ್ಕೋ ಟೋಕಿಯೊ ಸಂಸ್ಥೆ ವತಿಯಿಂದ ಹಣಕಾಸು ನೆರವಿನ ಚೆಕ್ ವಿತರಿಸಿ ಮಾತನಾಡಿ, ‘ಕೆ.ಎಚ್.ಮುನಿಯಪ್ಪ ಅವರನ್ನು ಸೋಲಿಸುವ ಒಂದೇ ಉದ್ದೇಶಕ್ಕೆ ಮುನಿಸ್ವಾಮಿ ಅವರನ್ನು ಗೆಲ್ಲಿಸಬೇಕಾಯಿತು’ ಎಂದು ಹೇಳಿದರು.</p>.<p>‘ಮುನಿಯಪ್ಪ ಅವರನ್ನು ಹಿಂದೆಯೇ ಸೋಲಿಸುವ ಅವಕಾಶ ಸಿಕ್ಕಿತ್ತು. ಆಗ ನಾನು ಮತ್ತು ಕೃಷ್ಣ ಬೈರೇಗೌಡರು ಅವರ ಬೆನ್ನಿಗೆ ನಿಂತು ಗೆಲ್ಲಿಸಿದ್ದೆವು. ಆದರೆ, ಮುನಿಯಪ್ಪ ನಮಗೆ ಸಾಕಷ್ಟು ತೊಂದರೆ ಕೊಟ್ಟರು. ಸಂಸದ ಮುನಿಸ್ವಾಮಿ ಅವರನ್ನು ನೋಡಿದರೆ ಮುನಿಯಪ್ಪ ಅವರಿಗಿಂತ ಅಪಾಯಕಾರಿ’ ಎಂದು ಕಿಡಿಕಾರಿದರು.</p>.<p>‘ಜಿಲ್ಲೆಯಲ್ಲಿ 3 ಲಕ್ಷ ಮಂದಿ ಬಲಗೈ ಜನಾಂಗದ ಮತದಾರರಿದ್ದಾರೆ. ಆದರೆ, ಎಡಗೈ ಜನಾಂಗದ ಮತದಾರರ ಸಂಖ್ಯೆ ಕೇವಲ 50 ಸಾವಿರವಿದೆ. ಎಡಗೈ ಜನಾಂಗದ ಗುಂಪಿಗೆ ಸೇರಿದ ಮುನಿಯಪ್ಪ 30 ವರ್ಷ ಸಂಸದರಾಗಿದ್ದರೂ ಸಾಮಾಜಿಕ ನ್ಯಾಯ ನೀಡಲಿಲ್ಲ. ಈ ಕಾರಣಕ್ಕಾಗಿ ಬಲಗೈ ಗುಂಪಿಗೆ ಸೇರಿದವರಿಗೆ ಅವಕಾಶ ಮಾಡಿಕೊಡಲಾಯಿತು’ ಎಂದರು.</p>.<p>‘ಸಂಸದರು ಎಪಿಎಂಸಿ ವಿಚಾರದಲ್ಲಿ ಸಹಕಾರ ನೀಡಲಿಲ್ಲ. ನಮ್ಮ ವಿರುದ್ಧವೇ ರಾಜಕಾರಣ ಮಾಡಿ ತಮಗೆ ಬೇಕಾದವರನ್ನು ಎಪಿಎಂಸಿಗೆ ನಿರ್ದೇಶಕರಾಗಿ ನೇಮಿಸಿಕೊಂಡಿದ್ದಾರೆ. ಮುನಿಸ್ವಾಮಿ ಅವರು ಮತ್ತೊಮ್ಮೆ ಸಂಸದರಾಗಿ ಆಯ್ಕೆ ಆಗುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಅವರಿಗೆ ಸೋಲು ನಿಶ್ಚಿತ’ ಎಂದು ಲೇವಡಿ ಮಾಡಿದರು.</p>.<p><strong>ಉತ್ತಮ ಮಳೆ:</strong> ‘ಜಿಲ್ಲೆಯಲ್ಲಿ ಕಳೆದೊಂದು ತಿಂಗಳಿನಿಂದ ಉತ್ತಮ ಮಳೆಯಾಗುತ್ತಿದ್ದು. ಬಿತ್ತನೆ ಕಾರ್ಯ ಚುರುಕುಗೊಂಡಿದೆ. ಕೆರೆ ಕುಂಟೆಗಳಿಗೆ ನೀರು ಹರಿದು ಬರುತ್ತಿದ್ದು, ಈಗಾಗಲೇ ಹಲವು ಕೆರೆಗಳು ತುಂಬಿವೆ. 10 ವರ್ಷಗಳಿಂದ ಮಳೆಯ ಬಿತ್ತನೆ ಸಂದರ್ಭದಲ್ಲೇ ಕೈಕೊಟ್ಟಿತ್ತು. ಹಿಂದಿನ ವರ್ಷ ಉತ್ತಮ ಬೆಳೆ ಆಗಿರಲಿಲ್ಲ. ಈ ವರ್ಷ ಉತ್ತಮ ಮಳೆ ಆಗುತ್ತಿರುವುದರಿಂದ ಶುಭ ಸೂಚನೆ’ ಎಂದು ಸಂತಸ ವ್ಯಕ್ತಪಡಿಸಿದರು.</p>.<p>‘ಬಂಗಾರಪೇಟೆ ತಾಲ್ಲೂಕಿನಲ್ಲಿ ಉತ್ತಮ ಮಳೆ ಆಗುತ್ತಿರುವುದರಿಂದ ಯರಗೋಳ್ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬರುವ ನಿರೀಕ್ಷೆಯಿದೆ. ಡ್ಯಾಂನಲ್ಲಿ ನೀರು ಸಂಗ್ರಹವಾದರೆ ಕೋಲಾರ, ಮಾಲೂರು, ಬಂಗಾರಪೇಟೆ ತಾಲ್ಲೂಕಿನ ಗ್ರಾಮಗಳಿಗೆ ಕುಡಿಯುವ ನೀರು ಕೊಡಲು ಸಾಧ್ಯವಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.</p>.<p>‘ಯರಗೋಳ್ ಯೋಜನೆ ನಂಬಿಕೊಂಡು ಹಲವೆಡೆ ಕುಡಿಯುವ ನೀರು ಸರಬರಾಜಿಗೆ ಪೈಪ್ಲೈನ್ ಅಳವಡಿಸಲಾಗಿದೆ. ಯೋಜನೆ ಕಾಮಗಾರಿ ಪೂರ್ಣಗೊಂಡರೆ ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗುತ್ತದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ‘ಸಂಸದ ಎಸ್.ಮುನಿಸ್ವಾಮಿ ನಂಬಿಕೆಗೆ ಅರ್ಹ ವ್ಯಕ್ತಿಯಲ್ಲ. ನಾವು ಅವರ ಮೇಲಿಟ್ಟಿದ್ದ ನಂಬಿಕೆಯು ನೀರಿನಲ್ಲಿ ಹೋಮ ಮಾಡಿದಂತಾಯಿತು’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಇಲ್ಲಿ ಸೋಮವಾರ ಅನಾರೋಗ್ಯಪೀಡಿತ ಬಡ ಜನರ ಚಿಕಿತ್ಸೆಗೆ ಇಫ್ಕೋ ಟೋಕಿಯೊ ಸಂಸ್ಥೆ ವತಿಯಿಂದ ಹಣಕಾಸು ನೆರವಿನ ಚೆಕ್ ವಿತರಿಸಿ ಮಾತನಾಡಿ, ‘ಕೆ.ಎಚ್.ಮುನಿಯಪ್ಪ ಅವರನ್ನು ಸೋಲಿಸುವ ಒಂದೇ ಉದ್ದೇಶಕ್ಕೆ ಮುನಿಸ್ವಾಮಿ ಅವರನ್ನು ಗೆಲ್ಲಿಸಬೇಕಾಯಿತು’ ಎಂದು ಹೇಳಿದರು.</p>.<p>‘ಮುನಿಯಪ್ಪ ಅವರನ್ನು ಹಿಂದೆಯೇ ಸೋಲಿಸುವ ಅವಕಾಶ ಸಿಕ್ಕಿತ್ತು. ಆಗ ನಾನು ಮತ್ತು ಕೃಷ್ಣ ಬೈರೇಗೌಡರು ಅವರ ಬೆನ್ನಿಗೆ ನಿಂತು ಗೆಲ್ಲಿಸಿದ್ದೆವು. ಆದರೆ, ಮುನಿಯಪ್ಪ ನಮಗೆ ಸಾಕಷ್ಟು ತೊಂದರೆ ಕೊಟ್ಟರು. ಸಂಸದ ಮುನಿಸ್ವಾಮಿ ಅವರನ್ನು ನೋಡಿದರೆ ಮುನಿಯಪ್ಪ ಅವರಿಗಿಂತ ಅಪಾಯಕಾರಿ’ ಎಂದು ಕಿಡಿಕಾರಿದರು.</p>.<p>‘ಜಿಲ್ಲೆಯಲ್ಲಿ 3 ಲಕ್ಷ ಮಂದಿ ಬಲಗೈ ಜನಾಂಗದ ಮತದಾರರಿದ್ದಾರೆ. ಆದರೆ, ಎಡಗೈ ಜನಾಂಗದ ಮತದಾರರ ಸಂಖ್ಯೆ ಕೇವಲ 50 ಸಾವಿರವಿದೆ. ಎಡಗೈ ಜನಾಂಗದ ಗುಂಪಿಗೆ ಸೇರಿದ ಮುನಿಯಪ್ಪ 30 ವರ್ಷ ಸಂಸದರಾಗಿದ್ದರೂ ಸಾಮಾಜಿಕ ನ್ಯಾಯ ನೀಡಲಿಲ್ಲ. ಈ ಕಾರಣಕ್ಕಾಗಿ ಬಲಗೈ ಗುಂಪಿಗೆ ಸೇರಿದವರಿಗೆ ಅವಕಾಶ ಮಾಡಿಕೊಡಲಾಯಿತು’ ಎಂದರು.</p>.<p>‘ಸಂಸದರು ಎಪಿಎಂಸಿ ವಿಚಾರದಲ್ಲಿ ಸಹಕಾರ ನೀಡಲಿಲ್ಲ. ನಮ್ಮ ವಿರುದ್ಧವೇ ರಾಜಕಾರಣ ಮಾಡಿ ತಮಗೆ ಬೇಕಾದವರನ್ನು ಎಪಿಎಂಸಿಗೆ ನಿರ್ದೇಶಕರಾಗಿ ನೇಮಿಸಿಕೊಂಡಿದ್ದಾರೆ. ಮುನಿಸ್ವಾಮಿ ಅವರು ಮತ್ತೊಮ್ಮೆ ಸಂಸದರಾಗಿ ಆಯ್ಕೆ ಆಗುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಅವರಿಗೆ ಸೋಲು ನಿಶ್ಚಿತ’ ಎಂದು ಲೇವಡಿ ಮಾಡಿದರು.</p>.<p><strong>ಉತ್ತಮ ಮಳೆ:</strong> ‘ಜಿಲ್ಲೆಯಲ್ಲಿ ಕಳೆದೊಂದು ತಿಂಗಳಿನಿಂದ ಉತ್ತಮ ಮಳೆಯಾಗುತ್ತಿದ್ದು. ಬಿತ್ತನೆ ಕಾರ್ಯ ಚುರುಕುಗೊಂಡಿದೆ. ಕೆರೆ ಕುಂಟೆಗಳಿಗೆ ನೀರು ಹರಿದು ಬರುತ್ತಿದ್ದು, ಈಗಾಗಲೇ ಹಲವು ಕೆರೆಗಳು ತುಂಬಿವೆ. 10 ವರ್ಷಗಳಿಂದ ಮಳೆಯ ಬಿತ್ತನೆ ಸಂದರ್ಭದಲ್ಲೇ ಕೈಕೊಟ್ಟಿತ್ತು. ಹಿಂದಿನ ವರ್ಷ ಉತ್ತಮ ಬೆಳೆ ಆಗಿರಲಿಲ್ಲ. ಈ ವರ್ಷ ಉತ್ತಮ ಮಳೆ ಆಗುತ್ತಿರುವುದರಿಂದ ಶುಭ ಸೂಚನೆ’ ಎಂದು ಸಂತಸ ವ್ಯಕ್ತಪಡಿಸಿದರು.</p>.<p>‘ಬಂಗಾರಪೇಟೆ ತಾಲ್ಲೂಕಿನಲ್ಲಿ ಉತ್ತಮ ಮಳೆ ಆಗುತ್ತಿರುವುದರಿಂದ ಯರಗೋಳ್ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬರುವ ನಿರೀಕ್ಷೆಯಿದೆ. ಡ್ಯಾಂನಲ್ಲಿ ನೀರು ಸಂಗ್ರಹವಾದರೆ ಕೋಲಾರ, ಮಾಲೂರು, ಬಂಗಾರಪೇಟೆ ತಾಲ್ಲೂಕಿನ ಗ್ರಾಮಗಳಿಗೆ ಕುಡಿಯುವ ನೀರು ಕೊಡಲು ಸಾಧ್ಯವಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.</p>.<p>‘ಯರಗೋಳ್ ಯೋಜನೆ ನಂಬಿಕೊಂಡು ಹಲವೆಡೆ ಕುಡಿಯುವ ನೀರು ಸರಬರಾಜಿಗೆ ಪೈಪ್ಲೈನ್ ಅಳವಡಿಸಲಾಗಿದೆ. ಯೋಜನೆ ಕಾಮಗಾರಿ ಪೂರ್ಣಗೊಂಡರೆ ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗುತ್ತದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>