<p><strong>ಬಂಗಾರಪೇಟೆ:</strong> ತಾಲ್ಲೂಕಿನ ಕೆಸಿಆರ್ ಕಚೇರಿಯಲ್ಲಿ ಮಂಗಳವಾರ ಜೆಡಿಎಸ್–ಬಿಜೆಪಿ ಸಮನ್ವಯ ಸಭೆ ನಡೆದಿದ್ದು, ಸಭೆಗೆ ಸಂಸದ ಎಸ್.ಮುನಿಸ್ವಮಿ ಬೆಂಬಲಿಗರ ಗೈರು ಹಾಜರಿ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.</p>.<p>ಈ ಬಾರಿ ಕೋಲಾರ ಕ್ಷೇತ್ರದಿಂದ ಸಂಸದ ಎಸ್.ಮುನಿಸ್ವಾಮಿ ಅವರಿಗೆ ಟಿಕೆಟ್ ಸಿಗುವ ನಿರೀಕ್ಷೆ ಇತ್ತು. ಆದರೆ, ಜೆಡಿಎಸ್ ಅಬ್ಯರ್ಥಿ ಎಂ.ಮಲ್ಲೇಶ್ ಬಾಬು ಅವರಿಗೆ ಟಿಕೆಟ್ ಸಿಕ್ಕಿರುವ ಮುನಿಸ್ವಾಮಿ ಬೆಂಬಲಿಗರಲ್ಲಿ ಅಸಮಾಧಾನ ಮೂಡಿಸಿದೆ. ಈ ನಿಟ್ಟಿನಲ್ಲಿ ಎರಡು ಪಕ್ಷಗಳ ಅಸಮಾಧಾನ ತೊಲಗಿಸಲು ಸಭೆ ಕರೆಯಲಾಗಿತ್ತು. ಆದರೆ ಅದಕ್ಕೆ ಸಂಸದ ಎಸ್. ಮುನಿಸ್ವಾಮಿ ಬೆಂಬಲಿಗರು ಗೈರಾಗಿದ್ದಾರೆ.</p>.<p>ಬಿಜೆಪಿ ಮುಖಂಡರಾದ ಬಿ.ಪಿ.ವೆಂಕಟಮುನಿಯಪ್ಪ, ಕೆ.ಚಂದ್ರಾರೆಡ್ಡಿ, ಶಿವುಕುಮಾರ್, ಸಂಪಂಗಿರೆಡ್ಡಿ, ಬಿ.ವಿ.ಮಹೇಶ್, ಜೆಡಿಎಸ್ ಮುಖಂಡರಾದ ಮುನಿರಾಜು, ವಡಗೂರ್ ಹರೀಶ್ ಮತ್ತಿತ್ತರರು ಸಭೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ:</strong> ತಾಲ್ಲೂಕಿನ ಕೆಸಿಆರ್ ಕಚೇರಿಯಲ್ಲಿ ಮಂಗಳವಾರ ಜೆಡಿಎಸ್–ಬಿಜೆಪಿ ಸಮನ್ವಯ ಸಭೆ ನಡೆದಿದ್ದು, ಸಭೆಗೆ ಸಂಸದ ಎಸ್.ಮುನಿಸ್ವಮಿ ಬೆಂಬಲಿಗರ ಗೈರು ಹಾಜರಿ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.</p>.<p>ಈ ಬಾರಿ ಕೋಲಾರ ಕ್ಷೇತ್ರದಿಂದ ಸಂಸದ ಎಸ್.ಮುನಿಸ್ವಾಮಿ ಅವರಿಗೆ ಟಿಕೆಟ್ ಸಿಗುವ ನಿರೀಕ್ಷೆ ಇತ್ತು. ಆದರೆ, ಜೆಡಿಎಸ್ ಅಬ್ಯರ್ಥಿ ಎಂ.ಮಲ್ಲೇಶ್ ಬಾಬು ಅವರಿಗೆ ಟಿಕೆಟ್ ಸಿಕ್ಕಿರುವ ಮುನಿಸ್ವಾಮಿ ಬೆಂಬಲಿಗರಲ್ಲಿ ಅಸಮಾಧಾನ ಮೂಡಿಸಿದೆ. ಈ ನಿಟ್ಟಿನಲ್ಲಿ ಎರಡು ಪಕ್ಷಗಳ ಅಸಮಾಧಾನ ತೊಲಗಿಸಲು ಸಭೆ ಕರೆಯಲಾಗಿತ್ತು. ಆದರೆ ಅದಕ್ಕೆ ಸಂಸದ ಎಸ್. ಮುನಿಸ್ವಾಮಿ ಬೆಂಬಲಿಗರು ಗೈರಾಗಿದ್ದಾರೆ.</p>.<p>ಬಿಜೆಪಿ ಮುಖಂಡರಾದ ಬಿ.ಪಿ.ವೆಂಕಟಮುನಿಯಪ್ಪ, ಕೆ.ಚಂದ್ರಾರೆಡ್ಡಿ, ಶಿವುಕುಮಾರ್, ಸಂಪಂಗಿರೆಡ್ಡಿ, ಬಿ.ವಿ.ಮಹೇಶ್, ಜೆಡಿಎಸ್ ಮುಖಂಡರಾದ ಮುನಿರಾಜು, ವಡಗೂರ್ ಹರೀಶ್ ಮತ್ತಿತ್ತರರು ಸಭೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>