ಎಪಿಎಂಸಿಯಲ್ಲಿ ಬೆಳಿಗ್ಗೆ ರೈತರನ್ನು ಭೇಟಿಯಾಗಿ ಅಹವಾಲು ಆಲಿಸಿದ ಸಂಸದರು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು. ಮಾರುಕಟ್ಟೆಯಲ್ಲಿ ಮಾರಾಟವಾಗದೆ ಉಳಿದಿದ್ದ ಕ್ಯಾಪ್ಸಿಕಂ, ಬೀಟ್ರೂಟ್, ಮೂಲಂಗಿ, ಹೂಕೋಸು, ಬದನೆಕಾಯಿ ಸೇರಿದಂತೆ ವಿವಿಧ ತರಕಾರಿಗಳನ್ನು ರೈತರಿಗೂ ನಷ್ಟವಾಗದಂತೆ ಯೋಗ್ಯ ಬೆಲೆಗೆ ಖರೀದಿಸಿ ಸ್ಥಳದಲ್ಲೇ ಹಣ ನೀಡಿದರು.