ಮಂಗಳವಾರ, 24 ಫೆಬ್ರುವರಿ 2026
×
ADVERTISEMENT

ಕೋಲಾರ | ಎತ್ತಿನಹೊಳೆಯಿಂದ 2.8 ಟಿಎಂಸಿ ನೀರು ಕೊಡಿ: ಎಂ.ಆರ್.‌ರವಿ

ವಿಧಾನ ಪರಿಷತ್ ಭರವಸೆಗಳ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಆರ್.ರವಿ ಒತ್ತಾಯ
Published : 18 ಅಕ್ಟೋಬರ್ 2025, 6:59 IST
Last Updated : 18 ಅಕ್ಟೋಬರ್ 2025, 6:59 IST
ADVERTISEMENT
ಫಾಲೋ ಮಾಡಿ
Comments
ಎಪಿಎಂಸಿಗೆ 100 ಎಕರೆ ಜಾಗಕ್ಕೆ ಮನವಿ
ಹೊಸ ಕೃಷಿ ಮಾರುಕಟ್ಟೆಗೆ 100 ಎಕರೆ ಜಾಗದ ಅವಶ್ಯವಿದ್ದು ಇದಕ್ಕಾಗಿ ಐದು ಬಾರಿ ಪ್ರಯತ್ನ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ಹೇಳಿದರು. ಪ್ರಸ್ತುತ ಮಾರುಕಟ್ಟೆಗೆ ಸೂಕ್ತವಾದ 60 ಎಕರೆ ಕಂದಾಯ ಜಾಗವನ್ನು ಗುರುತಿಸಲಾಗಿದೆ. ಇದಕ್ಕೆ ಹೊಂದಿಕೊಂಡಿರುವ 20 ಎಕರೆ ಅರಣ್ಯ ಪ್ರದೇಶವನ್ನು ಪರಿವರ್ತಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತಿದೆ. ಗುರುತಿಸಲಾದ 60 ಎಕರೆ ಜಾಗ ಮಂಜೂರಾತಿಗಾಗಿ ರಾಜ್ಯ ಸರ್ಕಾರಕ್ಕೆ ಶೀಘ್ರದಲ್ಲೇ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು. ಪ್ರಸ್ತಾವನೆಯ ಎಲ್ಲಾ ವಿವರಗಳನ್ನು ಸಮಿತಿಗೆ ಸಲ್ಲಿಸಿದರೆ ಸಂಸದರ ನಿಯೋಗವನ್ನು ಕಳುಹಿಸಿ ಜಾಗ ಮಂಜೂರಾತಿಗೆ ಪ್ರಯತ್ನಿಸುವುದಾಗಿ ಸಮಿತಿ ಅಧ್ಯಕ್ಷರು ಭರವಸೆ ನೀಡಿದರು.
ಇಚ್ಛಾಶಕ್ತಿ ಇದ್ದರೆ ಕಾರ್ಯಸಾಧು
ಪಕ್ಕದ ರಾಜ್ಯಗಳಲ್ಲಿ 500ಕ್ಕೂ ಹೆಚ್ಚು ಕಿ.ಮೀ. ದೂರದಿಂದ ಕೃಷ್ಣಾ ನದಿಯ ನೀರನ್ನು ತರಲಾಗಿದೆ. ಕೋಲಾರಕ್ಕೆ ನೀರು ತರಲು ಕೇವಲ 252 ಕಿ.ಮೀ. ಕ್ರಮಿಸಬೇಕಿದೆ. ಅಧಿಕಾರಿಗಳಲ್ಲಿ ಇಚ್ಛಾಶಕ್ತಿ ಇದ್ದರೆ ಇಂತಹ ಕಾರ್ಯಗಳನ್ನು ಸಾಧಿಸಬಹುದು ಎಂದು ಸಮಿತಿ ಅಧ್ಯಕ್ಷ ಟಿ.ಎ.ಶರವಣ ಹೇಳಿದರು. ಇದಕ್ಕೆ ಉತ್ತರಿಸಿದ ಕಾರ್ಯದರ್ಶಿಗಳು ಈಗಾಗಲೇ 32.5 ಕಿ.ಮೀ. ಕಾಮಗಾರಿ ಪೂರ್ಣಗೊಂಡಿದ್ದು ಉಳಿದ ಕಾಮಗಾರಿಯನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲು ಸರ್ಕಾರ ಉತ್ಸುಕವಾಗಿದೆ ಎಂದು ಸಭೆಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT