<p><strong>ಕೋಲಾರ</strong>: ‘ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಯಾರೂ ಎಲ್ಲೂ ಹೇಳಿಲ್ಲ. ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವೆಲ್ಲ ಬದ್ಧ’ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ಹೇಳಿದರು.</p>.<p>ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈಗಲೂ ಹೇಳುತ್ತೇನೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದು ಸರಿಯಲ್ಲ. ಇದಕ್ಕೆಲ್ಲ ನಮ್ಮ ಅಸಮಾಧಾನವಿದೆ. ಸಿದ್ದರಾಮಯ್ಯ ಅವರ ಕಾನೂನು ಹೋರಾಟಕ್ಕೆ ನಾವೆಲ್ಲ ಬೆಂಬಲವಾಗಿ ನಿಲ್ಲುತ್ತೇವೆ’ ಎಂದರು.</p>.<p>‘ರಾಜೀನಾಮೆ ನೀಡಬೇಕು ಎಂದು ವಿರೋಧಿಗಳು ಕೇಳುವುದು ಸಹಜ. ಆದರೆ ನಮ್ಮ ಪಕ್ಷದಲ್ಲಿ ರಾಹುಲ್ ಗಾಂಧಿ, ಸುರ್ಜೇವಾಲ, ಮಲ್ಲಿಕಾರ್ಜುನ ಖರ್ಗೆ ಇದ್ದು, ಚರ್ಚಿಸಿ ಕ್ರಮ ಕೈಗೊಳ್ಳುತ್ತಾರೆ. ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲೇಬೇಕಾದಂಥ ತಪ್ಪು ಮಾಡಿಲ್ಲ’ ಎಂದು ತಿಳಿಸಿದರು.</p>.<p>‘ರಾಜೀನಾಮೆ ಕೊಡಬೇಕು ಎಂದು ಕಾನೂನಲ್ಲಿ ಇದೆಯೇ? ಕೋರ್ಟ್ ಆದೇಶ ಮಾಡಿದಿಯೇ? ಹೋರಾಟ ಮಾಡುವುದೇ ವಿರೋಧ ಪಕ್ಷದವರ ಕೆಲಸ. ಈಗ ಒಂದು ಪೀಠದಲ್ಲಿ ಆದೇಶ ಆಗಿದೆ. ಮೇಲ್ಮನವಿ ಹೋಗಲು ಅವಕಾಶ ಇದ್ದು, ಕಾನೂನು ಹೋರಾಟ ನಡೆಸುತ್ತಾರೆ’ ಎಂದರು.</p>.<p>‘ಹಿಂದೆ ಯಡಿಯೂರಪ್ಪ ಅವರ ವಿರುದ್ಧ ಆಪಾದನೆ ಬಂದಿತ್ತು. ತನಿಖೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದರು. ಸಿದ್ದರಾಯ್ಯ ಅವರು ತಪ್ಪು ಮಾಡಿಲ್ಲ ಎಂಬ ನಂಬಿಕೆಯಿದ್ದು, ಅವರೊಟ್ಟಿಗೆ ರಾಜ್ಯದ ಜನತೆಯಿದ್ದು ಮುಂದಿನ ಹಂತದಲ್ಲಿ ಜಯ ಸಿಗುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ಅವರ ಪರ, ಇವರ ಪರ ಬೆಂಬಲದ ಪ್ರಶ್ನೆಯಿಲ್ಲ, ಕಾನೂನು ಹೋರಾಟದ ಪರ ನಮ್ಮ ಬೆಂಬಲ, ನಾವು ಎಂದಿಗೂ ಸಿದ್ದರಾಮಯ್ಯ ಪರವಾಗಿಯೇ ಇರುತ್ತೇವೆ. ಅಭಿಮಾನದ ಪ್ರಶ್ನೆ ಇಲ್ಲ ಬರುವುದಿಲ್ಲ, ಈ ಆದೇಶದಿಂದ ನಮಗೆ ಹಿನ್ನಡೆಯಾಗಿಲ್ಲ, ಅದು ಮುನ್ನಡೆ. ಇದರಿಂದಾಗಿ ನಮಗೂ ಬುದ್ಧಿ ಬಂದಿದ್ದು, ಇನ್ನು ಮುಂದೆ ಯಾವ ರೀತಿ ನಡೆದುಕೊಳ್ಳಬೇಕು ಎಂಬ ಅರಿವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ‘ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಯಾರೂ ಎಲ್ಲೂ ಹೇಳಿಲ್ಲ. ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವೆಲ್ಲ ಬದ್ಧ’ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ಹೇಳಿದರು.</p>.<p>ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈಗಲೂ ಹೇಳುತ್ತೇನೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದು ಸರಿಯಲ್ಲ. ಇದಕ್ಕೆಲ್ಲ ನಮ್ಮ ಅಸಮಾಧಾನವಿದೆ. ಸಿದ್ದರಾಮಯ್ಯ ಅವರ ಕಾನೂನು ಹೋರಾಟಕ್ಕೆ ನಾವೆಲ್ಲ ಬೆಂಬಲವಾಗಿ ನಿಲ್ಲುತ್ತೇವೆ’ ಎಂದರು.</p>.<p>‘ರಾಜೀನಾಮೆ ನೀಡಬೇಕು ಎಂದು ವಿರೋಧಿಗಳು ಕೇಳುವುದು ಸಹಜ. ಆದರೆ ನಮ್ಮ ಪಕ್ಷದಲ್ಲಿ ರಾಹುಲ್ ಗಾಂಧಿ, ಸುರ್ಜೇವಾಲ, ಮಲ್ಲಿಕಾರ್ಜುನ ಖರ್ಗೆ ಇದ್ದು, ಚರ್ಚಿಸಿ ಕ್ರಮ ಕೈಗೊಳ್ಳುತ್ತಾರೆ. ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲೇಬೇಕಾದಂಥ ತಪ್ಪು ಮಾಡಿಲ್ಲ’ ಎಂದು ತಿಳಿಸಿದರು.</p>.<p>‘ರಾಜೀನಾಮೆ ಕೊಡಬೇಕು ಎಂದು ಕಾನೂನಲ್ಲಿ ಇದೆಯೇ? ಕೋರ್ಟ್ ಆದೇಶ ಮಾಡಿದಿಯೇ? ಹೋರಾಟ ಮಾಡುವುದೇ ವಿರೋಧ ಪಕ್ಷದವರ ಕೆಲಸ. ಈಗ ಒಂದು ಪೀಠದಲ್ಲಿ ಆದೇಶ ಆಗಿದೆ. ಮೇಲ್ಮನವಿ ಹೋಗಲು ಅವಕಾಶ ಇದ್ದು, ಕಾನೂನು ಹೋರಾಟ ನಡೆಸುತ್ತಾರೆ’ ಎಂದರು.</p>.<p>‘ಹಿಂದೆ ಯಡಿಯೂರಪ್ಪ ಅವರ ವಿರುದ್ಧ ಆಪಾದನೆ ಬಂದಿತ್ತು. ತನಿಖೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದರು. ಸಿದ್ದರಾಯ್ಯ ಅವರು ತಪ್ಪು ಮಾಡಿಲ್ಲ ಎಂಬ ನಂಬಿಕೆಯಿದ್ದು, ಅವರೊಟ್ಟಿಗೆ ರಾಜ್ಯದ ಜನತೆಯಿದ್ದು ಮುಂದಿನ ಹಂತದಲ್ಲಿ ಜಯ ಸಿಗುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ಅವರ ಪರ, ಇವರ ಪರ ಬೆಂಬಲದ ಪ್ರಶ್ನೆಯಿಲ್ಲ, ಕಾನೂನು ಹೋರಾಟದ ಪರ ನಮ್ಮ ಬೆಂಬಲ, ನಾವು ಎಂದಿಗೂ ಸಿದ್ದರಾಮಯ್ಯ ಪರವಾಗಿಯೇ ಇರುತ್ತೇವೆ. ಅಭಿಮಾನದ ಪ್ರಶ್ನೆ ಇಲ್ಲ ಬರುವುದಿಲ್ಲ, ಈ ಆದೇಶದಿಂದ ನಮಗೆ ಹಿನ್ನಡೆಯಾಗಿಲ್ಲ, ಅದು ಮುನ್ನಡೆ. ಇದರಿಂದಾಗಿ ನಮಗೂ ಬುದ್ಧಿ ಬಂದಿದ್ದು, ಇನ್ನು ಮುಂದೆ ಯಾವ ರೀತಿ ನಡೆದುಕೊಳ್ಳಬೇಕು ಎಂಬ ಅರಿವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>