<p><strong>ಕೋಲಾರ:</strong> ಶಿಕ್ಷಣವು ಕೇವಲ ಅಕ್ಷರ ಹಾಗೂ ಕೌಶಲಾಭಿವೃದ್ದಿಗೆ ಸೀಮಿತವಾಗದೇ ಮಾನವೀಯ ಮೌಲ್ಯಗಳನ್ನು ಕಲಿಸುವಂತಾದರೆ ಮಾತ್ರ ಸುಂದರ, ಸೌಹಾರ್ದ ಸಮಾಜ ನಿರ್ಮಾಣ ಸಾಧ್ಯ ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಕುಲಪತಿ ಪ್ರೊ.ನಿರಂಜನ ವಾನಳ್ಳಿ ಅಭಿಪ್ರಾಯಪಟ್ಟರು.</p>.<p>ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಿಂದ ಮುದ್ದೇನಹಳ್ಳಿಯ ಮಾನವಾಭ್ಯುದಯ ವಿಶ್ವವಿದ್ಯಾಲಯದಲ್ಲಿ ನಡೆದ ಸಭೆಯಲ್ಲಿ ಉತ್ತರ ವಿ.ವಿ ವ್ಯಾಪ್ತಿಯಲ್ಲಿ ಕಾಲೇಜುಗಳ ಶಿಕ್ಷಣದಲ್ಲಿ ಮಾನವೀಯ ಮೌಲ್ಯ ಅಳವಡಿಸುವ ಕುರಿತಂತೆ ಒಡಂಬಡಿಕೆ ಮಾಡಿಕೊಂಡು ಅವರು ಮಾತನಾಡಿದರು.</p>.<p>ಆಧುನಿಕತೆ, ತಂತ್ರಜ್ಞಾನದ ಅಭಿವೃದ್ದಿಯಾಗುತ್ತಿದ್ದಂತೆ ಸುಶಿಕ್ಷಿತರೂ ದಾರಿ ತಪ್ಪಿರುವುದನ್ನು ಕಂಡಿದ್ದೇವೆ, ನಮ್ಮ ಸಂಸ್ಕೃತಿ, ಸಂಸ್ಕಾರ, ಹೆತ್ತವರನ್ನು ಗೌರವಿಸುವ ಮನಸ್ಥಿತಿ ದೂರವಾಗುತ್ತಿದೆ ಎಂದು ವಿಷಾದಿಸಿದರು.</p>.<p>ಹೆತ್ತವರನ್ನು ವೃದ್ಧಾಶ್ರಮಗಳಿಗೆ ಕಳುಹಿಸುವ ಸಂಸ್ಕೃತಿ ಹೋಗಬೇಕು, ಸಂಕಷ್ಟದಲ್ಲಿರುವವರಿಗೆ ನೆರವಾಗುವ ಮನಸ್ಥಿತಿ ಪ್ರತಿಯೊಬ್ಬರಲ್ಲೂ ಬರುವಂತಾಗಬೇಕು ಎಂದರು.</p>.<p>ಮುದ್ದೇನಹಳ್ಳಿಯ ಮಾನವಾಭ್ಯುದಯ ವಿಶ್ವವಿದ್ಯಾಲಯದ ಸಂಸ್ಥಾಪಕ ಮಧುಸೂದನ್ ಸಾಯಿ ಸಮ್ಮುಖದಲ್ಲಿ ಪ್ರೊ.ನಿರಂಜನ ವಾನಳ್ಳಿ ಹಾಗೂ ಮಾನವಾಭ್ಯುದಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶ್ರೀಕಂಠ ಒಡಬಂಡಿಕೆ ಮತ್ತು ಒಪ್ಪಂದ ವಿನಿಮಯ ಮಾಡಿಕೊಂಡರು. ಎರಡೂ ವಿಶ್ವವಿದ್ಯಾಲಯಗಳ ಮುಖ್ಯಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಶಿಕ್ಷಣವು ಕೇವಲ ಅಕ್ಷರ ಹಾಗೂ ಕೌಶಲಾಭಿವೃದ್ದಿಗೆ ಸೀಮಿತವಾಗದೇ ಮಾನವೀಯ ಮೌಲ್ಯಗಳನ್ನು ಕಲಿಸುವಂತಾದರೆ ಮಾತ್ರ ಸುಂದರ, ಸೌಹಾರ್ದ ಸಮಾಜ ನಿರ್ಮಾಣ ಸಾಧ್ಯ ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಕುಲಪತಿ ಪ್ರೊ.ನಿರಂಜನ ವಾನಳ್ಳಿ ಅಭಿಪ್ರಾಯಪಟ್ಟರು.</p>.<p>ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಿಂದ ಮುದ್ದೇನಹಳ್ಳಿಯ ಮಾನವಾಭ್ಯುದಯ ವಿಶ್ವವಿದ್ಯಾಲಯದಲ್ಲಿ ನಡೆದ ಸಭೆಯಲ್ಲಿ ಉತ್ತರ ವಿ.ವಿ ವ್ಯಾಪ್ತಿಯಲ್ಲಿ ಕಾಲೇಜುಗಳ ಶಿಕ್ಷಣದಲ್ಲಿ ಮಾನವೀಯ ಮೌಲ್ಯ ಅಳವಡಿಸುವ ಕುರಿತಂತೆ ಒಡಂಬಡಿಕೆ ಮಾಡಿಕೊಂಡು ಅವರು ಮಾತನಾಡಿದರು.</p>.<p>ಆಧುನಿಕತೆ, ತಂತ್ರಜ್ಞಾನದ ಅಭಿವೃದ್ದಿಯಾಗುತ್ತಿದ್ದಂತೆ ಸುಶಿಕ್ಷಿತರೂ ದಾರಿ ತಪ್ಪಿರುವುದನ್ನು ಕಂಡಿದ್ದೇವೆ, ನಮ್ಮ ಸಂಸ್ಕೃತಿ, ಸಂಸ್ಕಾರ, ಹೆತ್ತವರನ್ನು ಗೌರವಿಸುವ ಮನಸ್ಥಿತಿ ದೂರವಾಗುತ್ತಿದೆ ಎಂದು ವಿಷಾದಿಸಿದರು.</p>.<p>ಹೆತ್ತವರನ್ನು ವೃದ್ಧಾಶ್ರಮಗಳಿಗೆ ಕಳುಹಿಸುವ ಸಂಸ್ಕೃತಿ ಹೋಗಬೇಕು, ಸಂಕಷ್ಟದಲ್ಲಿರುವವರಿಗೆ ನೆರವಾಗುವ ಮನಸ್ಥಿತಿ ಪ್ರತಿಯೊಬ್ಬರಲ್ಲೂ ಬರುವಂತಾಗಬೇಕು ಎಂದರು.</p>.<p>ಮುದ್ದೇನಹಳ್ಳಿಯ ಮಾನವಾಭ್ಯುದಯ ವಿಶ್ವವಿದ್ಯಾಲಯದ ಸಂಸ್ಥಾಪಕ ಮಧುಸೂದನ್ ಸಾಯಿ ಸಮ್ಮುಖದಲ್ಲಿ ಪ್ರೊ.ನಿರಂಜನ ವಾನಳ್ಳಿ ಹಾಗೂ ಮಾನವಾಭ್ಯುದಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶ್ರೀಕಂಠ ಒಡಬಂಡಿಕೆ ಮತ್ತು ಒಪ್ಪಂದ ವಿನಿಮಯ ಮಾಡಿಕೊಂಡರು. ಎರಡೂ ವಿಶ್ವವಿದ್ಯಾಲಯಗಳ ಮುಖ್ಯಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>