<p><strong>ಮುಳುಬಾಗಿಲು</strong>: ತಾಲ್ಲೂಕಿನ ಬೈರಕೂರು ಹೋಬಳಿ ಕೇಂದ್ರದಲ್ಲಿ ಶುಕ್ರವಾರ ಭೂಜಲ ಯೋಜನೆಯ ತಾಂತ್ರಿಕ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. </p>.<p>ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಕೃಷಿ ಇಲಾಖೆ ಜಿಲ್ಲಾ ಉಪ ನಿರ್ದೇಶಕ ನಾಗರಾಜ್, ‘ರೈತರು ಅಟಲ್ ಭೂಜಲ ಯೋಜನೆಯಡಿ ಸಿಗುವ ಸವಲತ್ತುಗಳನ್ನು ಸದುಪಯೋಗಪಡೆದುಕೊಳ್ಳಬೇಕು. ವ್ಯವಸಾಯದಲ್ಲಿ ತರಬೇತಿ ತಾಂತ್ರಿಕತೆ ಬೆಳೆಸಿಕೊಂಡು ಉತ್ತಮ ರೀತಿಯ ಬೆಳೆಗಳನ್ನು ಬೆಳೆಯಬೇಕು’ ಎಂದು ಸಲಹೆ ನೀಡಿದರು. </p>.<p>ಅಟಲ್ ಭೂಜಲ ಯೋಜನೆಯನ್ನು ಈಗಾಗಲೇ ಕೆಲವು ರೈತರು ಸದ್ಬಳಕೆ ಮಾಡಿಕೊಂಡು ವಾಣಿಜ್ಯ ಹಾಗೂ ಉನ್ನತ ಮಟ್ಟದ ಬೆಳೆ ಬೆಳೆಯುವುದರಲ್ಲಿ ಯಶಸ್ವಿಯಾಗಿದ್ದಾರೆ ಎಂದರು. </p>.<p>ಯೋಜನೆಯಲ್ಲಿ ನೀರಿನ ಬೇಡಿಕೆ ಕಡಿಮೆ ಮಾಡುವುದು, ತಾಂತ್ರಿಕತೆಗಳು ಮತ್ತು ನೀರಿನ ಮರು ಪೂರೈಕೆ ಕ್ರಮಗಳ ಕುರಿತು ತಾಲ್ಲೂಕು ಸಹಾಯಕ ನಿರ್ದೇಶಕ ರವಿಕುಮಾರ್ ರೈತರಿಗೆ ತರಬೇತಿ ನೀಡಿದರು.</p>.<p>ಬೈರಕೂರು ಕೃಷಿ ಅಧಿಕಾರಿ ಅಕ್ಷಯ್ ಕುಮಾರ್, ಸಂಜಯ್, ರಘು, ಸುರೇಶ್, ಮಹೇಶ್, ಸೀನಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳುಬಾಗಿಲು</strong>: ತಾಲ್ಲೂಕಿನ ಬೈರಕೂರು ಹೋಬಳಿ ಕೇಂದ್ರದಲ್ಲಿ ಶುಕ್ರವಾರ ಭೂಜಲ ಯೋಜನೆಯ ತಾಂತ್ರಿಕ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. </p>.<p>ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಕೃಷಿ ಇಲಾಖೆ ಜಿಲ್ಲಾ ಉಪ ನಿರ್ದೇಶಕ ನಾಗರಾಜ್, ‘ರೈತರು ಅಟಲ್ ಭೂಜಲ ಯೋಜನೆಯಡಿ ಸಿಗುವ ಸವಲತ್ತುಗಳನ್ನು ಸದುಪಯೋಗಪಡೆದುಕೊಳ್ಳಬೇಕು. ವ್ಯವಸಾಯದಲ್ಲಿ ತರಬೇತಿ ತಾಂತ್ರಿಕತೆ ಬೆಳೆಸಿಕೊಂಡು ಉತ್ತಮ ರೀತಿಯ ಬೆಳೆಗಳನ್ನು ಬೆಳೆಯಬೇಕು’ ಎಂದು ಸಲಹೆ ನೀಡಿದರು. </p>.<p>ಅಟಲ್ ಭೂಜಲ ಯೋಜನೆಯನ್ನು ಈಗಾಗಲೇ ಕೆಲವು ರೈತರು ಸದ್ಬಳಕೆ ಮಾಡಿಕೊಂಡು ವಾಣಿಜ್ಯ ಹಾಗೂ ಉನ್ನತ ಮಟ್ಟದ ಬೆಳೆ ಬೆಳೆಯುವುದರಲ್ಲಿ ಯಶಸ್ವಿಯಾಗಿದ್ದಾರೆ ಎಂದರು. </p>.<p>ಯೋಜನೆಯಲ್ಲಿ ನೀರಿನ ಬೇಡಿಕೆ ಕಡಿಮೆ ಮಾಡುವುದು, ತಾಂತ್ರಿಕತೆಗಳು ಮತ್ತು ನೀರಿನ ಮರು ಪೂರೈಕೆ ಕ್ರಮಗಳ ಕುರಿತು ತಾಲ್ಲೂಕು ಸಹಾಯಕ ನಿರ್ದೇಶಕ ರವಿಕುಮಾರ್ ರೈತರಿಗೆ ತರಬೇತಿ ನೀಡಿದರು.</p>.<p>ಬೈರಕೂರು ಕೃಷಿ ಅಧಿಕಾರಿ ಅಕ್ಷಯ್ ಕುಮಾರ್, ಸಂಜಯ್, ರಘು, ಸುರೇಶ್, ಮಹೇಶ್, ಸೀನಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>